ಯಾದಗಿರಿ: ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿ ತಾಲ್ಲೂಕು ಪಂಚಾಯಿತಿ ಸದಸ್ಯ ಪರಶುರಾಮ ಕುರಕುಂದಿ ನೇಮಕವಾಗಿದ್ದಾರೆ.
ನೇಮಕ ಪತ್ರದಲ್ಲಿ ‘ಕ್ರಿಯಾಶೀಲತೆ ಗುರುತಿಸಿ ನೇಮಕ ಮಾಡಲಾಗಿದ್ದು, ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುವಂತೆ’ ಪಕ್ಷದ ಎಸ್ಸಿ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಸೂಚಿಸಿದ್ದಾರೆ.