<p><strong>ಯಾದಗಿರಿ: ‘</strong>ಹಿರಿಯರಿಂದಲೇ ಎಲ್ಲರೂ ಎನ್ನುವ ಸತ್ಯವನ್ನು ಅರ್ಥೈಸಿಕೊಂಡು, ಹಿರಿಯ ನಾಗರಿಕರನ್ನು ಗೌರವದಿಂದ ಕಾಣುವುದು ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿಯಾಗಿದೆ’ ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಹೇಳಿದರು.</p>.<p>ಇಲ್ಲಿನ ಪದವಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ವತಿಯಿಂದ ಆಯೋಜಿಸಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಪ್ರಸ್ತುತ ದಿನಗಳಲ್ಲಿ ಹಿರಿಯರನ್ನು ಕಡೆಗಣಿಸುವವರು ಹೆಚ್ಚಾಗುತ್ತಿದೆ. ನಮ್ಮ ತಂದೆ, ತಾಯಿ, ಅಜ್ಜ, ಅಜ್ಜಿ ಅಲ್ಲದೆ, ಪ್ರತಿ ಮನೆಯ ಹಿರಿಯರಾದ ಅಮೂಲ್ಯ ಜೀವಗಳಿಗೆ ನಾವೆಲ್ಲರೂ ರಕ್ಷಕರಾಗಬೇಕು’ ಎಂದರು.</p>.<p>‘ಹಿರಿಯರು ಇದ್ದ ಮನೆ ತುಂಬಿದ ಕೊಡವಿದ್ದಂತೆ. ಅವರ ಮಾರ್ಗದರ್ಶನ, ಸಲಹೆಗಳು ಕಿರಿಯರಿಗೆ ಸದಾ ಬೇಕಾಗುತ್ತದೆ. ದಾರಿ ತಪ್ಪದಂತೆ ನಮ್ಮನ್ನು ತಿದ್ದಿ ತೀಡಿ ಸರಿ ದಾರಿಯಲ್ಲಿ ನಡೆಯುವಂತಹ ಮಾತುಗಳು ಹಿರಿಯರು ಹೇಳುತ್ತಾರೆ. ಆದರೆ, ಅವರ ಮಾತುಗಳನ್ನು ಸಕರಾತ್ಮಕವಾಗಿ ತೆಗೆದುಕೊಂಡು ನಿರ್ಲಕ್ಷ್ಯ ಮಾಡುವುದು ಹೆಚ್ಚಾಗಿದೆ’ ಎಂದು ಹೇಳಿದರು.</p>.<p>‘ಹಿರಿಯ ನಾಗರಿಕರು ಸಮಾಜದ ಆಸ್ತಿ. ಬಹಳಷ್ಟು ಜನರು ಅವರನ್ನು ಅನಾಥಾಶ್ರಮ, ಹಿರಿಯ ಮನೆಗಳಿಗೆ ಬಿಟ್ಟು ಬರುವ ಮೂಲಕ ಜೀವಂತ ಇರುವಾಗಲೇ ಅವರನ್ನು ಒಂಟಿಯಾಗಿ ಮಾಡಿ ನೋವು ಕೊಡುತ್ತಿದ್ದಾರೆ. ಹೀಗೆ ಮಾಡುವವರನ್ನು ಮುಂದೆ ಅವರ ಮಕ್ಕಳು ಅನಾಥರಾಗಿ ಅವರನ್ನೂ ದೂರ ಮಾಡಿದರೆ ಆಗ ಪರಿಸ್ಥಿತಿ ಏನಾಗುತ್ತದೆ ಎಂಬುವುದನ್ನು ಅರ್ಥೈಸಿಕೊಂಡು ಬದಲಾಗಬೇಕಿದೆ’ ಎಂದರು.</p>.<p>ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಧಿಕಾರಿ ಶರಣಪ್ಪ ಪಾಟೀಲ ಮಾತನಾಡಿ, ‘ಸರ್ಕಾರ ಹಿರಿಯ ನಾಗರಿಕರಿಗೆ ನೀಡುತ್ತಿರುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದರು.</p>.<p>ಹಿರಿಯರಾದ ಸಿ.ಎಂ ಪಟ್ಟೇದಾರ್ ಮಾತನಾಡಿದರು.</p>.<p>ಕಾರ್ಯಕ್ರಮದಲ್ಲಿ ಸರ್ಕಾರಿ ನಿವೃತ್ತ ನೌಕರರಾದ ಸ್ಯಾಮ್ಯುಯೆಲ್, ಲಕ್ಷ್ಮಣ ದೇಗಲಮಡಿ, ಮಲ್ಲಿನಾಥ ಮಲಗೊಂಡ, ವಾಹೀದ್ ಮಿಯಾ, ಚಂದ್ರಾಮಪ್ಪ ಬಳಿಚಕ್ರ, ಸಿದ್ದಪ್ಪ ಬಬಲಾದ, ಭೀಮರಾಯ, ಸಮಾಜ ಸೇವಕರಾದ ಮಹಾದೇವಪ್ಪ ಕಡ್ಡಿ, ಶರಣಪ್ಪ ಜಾಕಾ, ನಿರ್ಮಲ್ ಕುಮಾರ ಜೈನ್, ಬಿ.ಸಿ.ಪಾಟೀಲ, ಮಾಣಿಕಮ್ಮ ಸೋಮಯ್ಯ ಸ್ವಾಮಿ, ಶರಣಪ್ಪ ಆರ್.ಬಡಿಗೇರ್, ಯಂಕೋಬಾ ಚಿಂತನಳ್ಳಿ, ನಗರಸಭೆ ಮಾಜಿ ಸದಸ್ಯ ಸಂಗಣ್ಣ ಬುಕಿಸ್ಟಗಾರ ಅವರನ್ನು ಸನ್ಮಾನಿಸಲಾಯಿತು.</p>.<p>ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಬಾಬುರಾವ್ ಕಾಡ್ಲೂರ್, ನಗರ ಠಾಣೆಯ ಪಿಎಸ್ಐ ಮಂಜೇಗೌಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ತಿಪ್ಪಣ್ಣ ಶಿರಸಗಿ, ಹಿರಿಯರಾದ ಚನ್ನಪ್ಪಗೌಡ ಮೋಸಂಬಿ, ಜಿಲ್ಲಾ ನಿವೃತ್ತ ಸಂಘದ ಮುಖಂಡ ಬಂಡೆಪ್ಪ ಆಕಳ, ಸರ್ಕಾರಿ ಪದವಿ ಮಹಾವಿದ್ಯಾಲಯ ಪ್ರಾಂಶುಪಾಲ ಸುಭಾಶ್ಚಂದ್ರ ಕೌಲಗಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ: ‘</strong>ಹಿರಿಯರಿಂದಲೇ ಎಲ್ಲರೂ ಎನ್ನುವ ಸತ್ಯವನ್ನು ಅರ್ಥೈಸಿಕೊಂಡು, ಹಿರಿಯ ನಾಗರಿಕರನ್ನು ಗೌರವದಿಂದ ಕಾಣುವುದು ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿಯಾಗಿದೆ’ ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಹೇಳಿದರು.</p>.<p>ಇಲ್ಲಿನ ಪದವಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ವತಿಯಿಂದ ಆಯೋಜಿಸಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಪ್ರಸ್ತುತ ದಿನಗಳಲ್ಲಿ ಹಿರಿಯರನ್ನು ಕಡೆಗಣಿಸುವವರು ಹೆಚ್ಚಾಗುತ್ತಿದೆ. ನಮ್ಮ ತಂದೆ, ತಾಯಿ, ಅಜ್ಜ, ಅಜ್ಜಿ ಅಲ್ಲದೆ, ಪ್ರತಿ ಮನೆಯ ಹಿರಿಯರಾದ ಅಮೂಲ್ಯ ಜೀವಗಳಿಗೆ ನಾವೆಲ್ಲರೂ ರಕ್ಷಕರಾಗಬೇಕು’ ಎಂದರು.</p>.<p>‘ಹಿರಿಯರು ಇದ್ದ ಮನೆ ತುಂಬಿದ ಕೊಡವಿದ್ದಂತೆ. ಅವರ ಮಾರ್ಗದರ್ಶನ, ಸಲಹೆಗಳು ಕಿರಿಯರಿಗೆ ಸದಾ ಬೇಕಾಗುತ್ತದೆ. ದಾರಿ ತಪ್ಪದಂತೆ ನಮ್ಮನ್ನು ತಿದ್ದಿ ತೀಡಿ ಸರಿ ದಾರಿಯಲ್ಲಿ ನಡೆಯುವಂತಹ ಮಾತುಗಳು ಹಿರಿಯರು ಹೇಳುತ್ತಾರೆ. ಆದರೆ, ಅವರ ಮಾತುಗಳನ್ನು ಸಕರಾತ್ಮಕವಾಗಿ ತೆಗೆದುಕೊಂಡು ನಿರ್ಲಕ್ಷ್ಯ ಮಾಡುವುದು ಹೆಚ್ಚಾಗಿದೆ’ ಎಂದು ಹೇಳಿದರು.</p>.<p>‘ಹಿರಿಯ ನಾಗರಿಕರು ಸಮಾಜದ ಆಸ್ತಿ. ಬಹಳಷ್ಟು ಜನರು ಅವರನ್ನು ಅನಾಥಾಶ್ರಮ, ಹಿರಿಯ ಮನೆಗಳಿಗೆ ಬಿಟ್ಟು ಬರುವ ಮೂಲಕ ಜೀವಂತ ಇರುವಾಗಲೇ ಅವರನ್ನು ಒಂಟಿಯಾಗಿ ಮಾಡಿ ನೋವು ಕೊಡುತ್ತಿದ್ದಾರೆ. ಹೀಗೆ ಮಾಡುವವರನ್ನು ಮುಂದೆ ಅವರ ಮಕ್ಕಳು ಅನಾಥರಾಗಿ ಅವರನ್ನೂ ದೂರ ಮಾಡಿದರೆ ಆಗ ಪರಿಸ್ಥಿತಿ ಏನಾಗುತ್ತದೆ ಎಂಬುವುದನ್ನು ಅರ್ಥೈಸಿಕೊಂಡು ಬದಲಾಗಬೇಕಿದೆ’ ಎಂದರು.</p>.<p>ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಧಿಕಾರಿ ಶರಣಪ್ಪ ಪಾಟೀಲ ಮಾತನಾಡಿ, ‘ಸರ್ಕಾರ ಹಿರಿಯ ನಾಗರಿಕರಿಗೆ ನೀಡುತ್ತಿರುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದರು.</p>.<p>ಹಿರಿಯರಾದ ಸಿ.ಎಂ ಪಟ್ಟೇದಾರ್ ಮಾತನಾಡಿದರು.</p>.<p>ಕಾರ್ಯಕ್ರಮದಲ್ಲಿ ಸರ್ಕಾರಿ ನಿವೃತ್ತ ನೌಕರರಾದ ಸ್ಯಾಮ್ಯುಯೆಲ್, ಲಕ್ಷ್ಮಣ ದೇಗಲಮಡಿ, ಮಲ್ಲಿನಾಥ ಮಲಗೊಂಡ, ವಾಹೀದ್ ಮಿಯಾ, ಚಂದ್ರಾಮಪ್ಪ ಬಳಿಚಕ್ರ, ಸಿದ್ದಪ್ಪ ಬಬಲಾದ, ಭೀಮರಾಯ, ಸಮಾಜ ಸೇವಕರಾದ ಮಹಾದೇವಪ್ಪ ಕಡ್ಡಿ, ಶರಣಪ್ಪ ಜಾಕಾ, ನಿರ್ಮಲ್ ಕುಮಾರ ಜೈನ್, ಬಿ.ಸಿ.ಪಾಟೀಲ, ಮಾಣಿಕಮ್ಮ ಸೋಮಯ್ಯ ಸ್ವಾಮಿ, ಶರಣಪ್ಪ ಆರ್.ಬಡಿಗೇರ್, ಯಂಕೋಬಾ ಚಿಂತನಳ್ಳಿ, ನಗರಸಭೆ ಮಾಜಿ ಸದಸ್ಯ ಸಂಗಣ್ಣ ಬುಕಿಸ್ಟಗಾರ ಅವರನ್ನು ಸನ್ಮಾನಿಸಲಾಯಿತು.</p>.<p>ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಬಾಬುರಾವ್ ಕಾಡ್ಲೂರ್, ನಗರ ಠಾಣೆಯ ಪಿಎಸ್ಐ ಮಂಜೇಗೌಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ತಿಪ್ಪಣ್ಣ ಶಿರಸಗಿ, ಹಿರಿಯರಾದ ಚನ್ನಪ್ಪಗೌಡ ಮೋಸಂಬಿ, ಜಿಲ್ಲಾ ನಿವೃತ್ತ ಸಂಘದ ಮುಖಂಡ ಬಂಡೆಪ್ಪ ಆಕಳ, ಸರ್ಕಾರಿ ಪದವಿ ಮಹಾವಿದ್ಯಾಲಯ ಪ್ರಾಂಶುಪಾಲ ಸುಭಾಶ್ಚಂದ್ರ ಕೌಲಗಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>