<p>ಸುರಪುರ: ‘ನಮ್ಮ ಸಂಘಟನೆಯ ರಾಜ್ಯ ನಾಯಕ ಮಾವಳ್ಳಿ ಶಂಕರ್ ಅವರು ನೀಡಿದ ಅವಕಾಶ ಬಳಸಿಕೊಂಡು ಶೋಷಿತರ ಸೇವೆ ಮಾಡಲಾಗುವುದು’ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ಯ ರಾಜ್ಯ ಸಂಘಟನಾ ಸಂಚಾಲಕ ರಾಮಣ್ಣ ಕಲ್ಲದೇವನಹಳ್ಳಿ ಹೇಳಿದರು.</p>.<p>ನಗರದಲ್ಲಿ ಸೋಮವಾರ ದಸಂಸಯ ತಾಲ್ಲೂಕು ಘಟಕದಿಂದ ಸನ್ಮಾನ ಸ್ವೀಕರಿಸಿ ಮಾತನಾಡಿ,‘ವಿಭಾಗೀಯ ಸಂಚಾಲಕನಾಗಿ ಮಾಡಿದ ಕೆಲಸ ಗುರುತಿಸಿ ಹೆಚ್ಚಿನ ಜವಾಬ್ದಾರಿ ನೀಡಲಾಗಿದೆ. ಎಲ್ಲರೂ ಸಹಕಾರ ನೀಡಬೇಕು’ ಎಂದು ಮನವಿ ಮಾಡಿದರು.</p>.<p>ಜಿಲ್ಲಾ ಸಂಘಟನಾ ಸಂಚಾಲಕ ಮಾಳಪ್ಪ ಕಿರದಳ್ಳಿ ಮಾತನಾಡಿ, ‘ಕಲಬುರಗಿ ವಿಭಾಗೀಯ ಸಂಚಾಲಕರಾಗಿ ಹೋರಾಟ ಮಾಡಿ ನಮ್ಮ ಭಾಗದಲ್ಲಿನ ಸಮಸ್ಯೆಗಳ ಪರಿಹಾರಕ್ಕೆ ಯತ್ನಿಸಿದ ರಾಮಣ್ಣ ಕಲ್ಲದೇವನಹಳ್ಳಿ ಅವರನ್ನು ರಾಜ್ಯ ಸಂಘಟನಾ ಸಂಚಾಲಕರನ್ನಾಗಿ ನೇಮಕ ಮಾಡಲಾಗಿದೆ. ಅವರ ಮಾರ್ಗದರ್ಶನದಲ್ಲಿ ಕೆಲಸ ಮಾಡಲಾಗುವುದು’ ಎಂದು ತಿಳಿಸಿದರು.</p>.<p>ಮುಖಂಡ ಪ್ರಶಾಂತ ಉಗ್ರಂ ಮಾತನಾಡಿದರು.</p>.<p>ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದ ಜೂಡೊ ಕ್ರೀಡೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ರಾಹುಲ್ ಕಿರದಳ್ಳಿ ಅವರನ್ನು ಸನ್ಮಾನಿಸಲಾಯಿತು.</p>.<p>ತಾಲ್ಲೂಕು ಸಂಚಾಲಕ ಶರಣಪ್ಪ ತಳವಾರಗೇರ, ಮಲ್ಲಿಕಾರ್ಜುನ ಹಾದಿಮನಿ, ಕೆಂಚಪ್ಪ ಕಟ್ಟಿಮನಿ, ಪ್ರಕಾಶ ಮುಷ್ಠಳ್ಳಿ, ಪರಶುರಾಮ ದೊಡ್ಮನಿ, ಮಲ್ಲಪ್ಪ ದೊಡ್ಮನಿ, ಶರಣಪ್ಪ ಕನ್ನೆಳ್ಳಿ, ಲಾಲು ಚವ್ಹಾಣ್, ವಿಶ್ವನಾಥ ಹೊಸ್ಮನಿ, ಗೊಲ್ಲಾಳಪ್ಪ ಕಟ್ಟಿಮನಿ, ಬಸವರಾಜ ಕನ್ನೆಳ್ಳಿ ಹಾಗೂ ಹಣಮಂತ ಕಿರದಳ್ಳಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸುರಪುರ: ‘ನಮ್ಮ ಸಂಘಟನೆಯ ರಾಜ್ಯ ನಾಯಕ ಮಾವಳ್ಳಿ ಶಂಕರ್ ಅವರು ನೀಡಿದ ಅವಕಾಶ ಬಳಸಿಕೊಂಡು ಶೋಷಿತರ ಸೇವೆ ಮಾಡಲಾಗುವುದು’ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ಯ ರಾಜ್ಯ ಸಂಘಟನಾ ಸಂಚಾಲಕ ರಾಮಣ್ಣ ಕಲ್ಲದೇವನಹಳ್ಳಿ ಹೇಳಿದರು.</p>.<p>ನಗರದಲ್ಲಿ ಸೋಮವಾರ ದಸಂಸಯ ತಾಲ್ಲೂಕು ಘಟಕದಿಂದ ಸನ್ಮಾನ ಸ್ವೀಕರಿಸಿ ಮಾತನಾಡಿ,‘ವಿಭಾಗೀಯ ಸಂಚಾಲಕನಾಗಿ ಮಾಡಿದ ಕೆಲಸ ಗುರುತಿಸಿ ಹೆಚ್ಚಿನ ಜವಾಬ್ದಾರಿ ನೀಡಲಾಗಿದೆ. ಎಲ್ಲರೂ ಸಹಕಾರ ನೀಡಬೇಕು’ ಎಂದು ಮನವಿ ಮಾಡಿದರು.</p>.<p>ಜಿಲ್ಲಾ ಸಂಘಟನಾ ಸಂಚಾಲಕ ಮಾಳಪ್ಪ ಕಿರದಳ್ಳಿ ಮಾತನಾಡಿ, ‘ಕಲಬುರಗಿ ವಿಭಾಗೀಯ ಸಂಚಾಲಕರಾಗಿ ಹೋರಾಟ ಮಾಡಿ ನಮ್ಮ ಭಾಗದಲ್ಲಿನ ಸಮಸ್ಯೆಗಳ ಪರಿಹಾರಕ್ಕೆ ಯತ್ನಿಸಿದ ರಾಮಣ್ಣ ಕಲ್ಲದೇವನಹಳ್ಳಿ ಅವರನ್ನು ರಾಜ್ಯ ಸಂಘಟನಾ ಸಂಚಾಲಕರನ್ನಾಗಿ ನೇಮಕ ಮಾಡಲಾಗಿದೆ. ಅವರ ಮಾರ್ಗದರ್ಶನದಲ್ಲಿ ಕೆಲಸ ಮಾಡಲಾಗುವುದು’ ಎಂದು ತಿಳಿಸಿದರು.</p>.<p>ಮುಖಂಡ ಪ್ರಶಾಂತ ಉಗ್ರಂ ಮಾತನಾಡಿದರು.</p>.<p>ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದ ಜೂಡೊ ಕ್ರೀಡೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ರಾಹುಲ್ ಕಿರದಳ್ಳಿ ಅವರನ್ನು ಸನ್ಮಾನಿಸಲಾಯಿತು.</p>.<p>ತಾಲ್ಲೂಕು ಸಂಚಾಲಕ ಶರಣಪ್ಪ ತಳವಾರಗೇರ, ಮಲ್ಲಿಕಾರ್ಜುನ ಹಾದಿಮನಿ, ಕೆಂಚಪ್ಪ ಕಟ್ಟಿಮನಿ, ಪ್ರಕಾಶ ಮುಷ್ಠಳ್ಳಿ, ಪರಶುರಾಮ ದೊಡ್ಮನಿ, ಮಲ್ಲಪ್ಪ ದೊಡ್ಮನಿ, ಶರಣಪ್ಪ ಕನ್ನೆಳ್ಳಿ, ಲಾಲು ಚವ್ಹಾಣ್, ವಿಶ್ವನಾಥ ಹೊಸ್ಮನಿ, ಗೊಲ್ಲಾಳಪ್ಪ ಕಟ್ಟಿಮನಿ, ಬಸವರಾಜ ಕನ್ನೆಳ್ಳಿ ಹಾಗೂ ಹಣಮಂತ ಕಿರದಳ್ಳಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>