<p><strong>ಶಹಾಪುರ (ಯಾದಗಿರಿ ಜಿಲ್ಲೆ) : </strong>ತಾಲ್ಲೂಕಿನ ಹೊತಪೇಟ ಗ್ರಾಮದ ಬಳಿ ಇರುವ ನವೋದಯ ಮಹಾ ವಿದ್ಯಾಲಯದ ವಿದ್ಯಾರ್ಥಿಗಳು, ಸಿಬ್ಬಂದಿ ಸೇರಿ 75 ಜನರಿಗೆ ಗುರುವಾರ ಕೋವಿಡ್ ದೃಢಪಟ್ಟಿದೆ.</p>.<p>'ಶೀತಗಾಳಿಯ ಪರಿಣಾಮ ಆರೋಗ್ಯದಲ್ಲಿ ಏರುಪೇರಾಗಿದ್ದು, ನೆಗಡಿ, ಕೆಮ್ಮು, ಜ್ವರ ಕಾಣಿಸಿಕೊಂಡಿವೆ. ಪರೀಕ್ಷೆ ಮಾಡಿಸಿದಾಗ ಕೋವಿಡ್ ದೃಢಪಟ್ಟಿದೆ. ಅಲ್ಲದೇ ಇಲ್ಲಿ ಪೂರ್ಣಕಾಲಿಕ ಸ್ಟಾಫ್ ನರ್ಸ್ ಇಲ್ಲದ ಕಾರಣ ವಿದ್ಯಾರ್ಥಿಗಳು ಚಿಕ್ಕಪುಟ್ಟ ಆರೋಗ್ಯದ ಸಮಸ್ಯೆಯಿಂದ ಪರದಾಡುವಂತೆ ಆಗಿದೆ' ಎಂದು ಪಾಲಕರೊಬ್ಬರು ತಿಳಿಸಿದರು.</p>.<p>'ವಿದ್ಯಾಲಯದ 363 ಮಕ್ಕಳಿಗೆ ತಪಾಸಣೆ ಮಾಡಲಾಗಿದೆ. ಮಕ್ಕಳಿಗೆ ಪ್ರತ್ಯೇಕ ವಾಸ ಮಾಡಲು ವ್ಯವಸ್ಥೆ ಮಾಡಲಾಗಿದೆ. ಪಾಲಕರು ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗುತ್ತಿದ್ದಾರೆ' ಎಂದು ವೈದ್ಯೆ ಡಾ.ಕಾವ್ಯಾಶ್ರೀ ತಿಳಿಸಿದ್ದಾರೆ.</p>.<p><strong>ಜಿಲ್ಲಾಧಿಕಾರಿ ಭೇಟಿ:</strong>ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್, ನವೋದಯ ಮಹಾ ವಿದ್ಯಾಲಯಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು. ಮಕ್ಕಳಿಗೆ ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಹಾಪುರ (ಯಾದಗಿರಿ ಜಿಲ್ಲೆ) : </strong>ತಾಲ್ಲೂಕಿನ ಹೊತಪೇಟ ಗ್ರಾಮದ ಬಳಿ ಇರುವ ನವೋದಯ ಮಹಾ ವಿದ್ಯಾಲಯದ ವಿದ್ಯಾರ್ಥಿಗಳು, ಸಿಬ್ಬಂದಿ ಸೇರಿ 75 ಜನರಿಗೆ ಗುರುವಾರ ಕೋವಿಡ್ ದೃಢಪಟ್ಟಿದೆ.</p>.<p>'ಶೀತಗಾಳಿಯ ಪರಿಣಾಮ ಆರೋಗ್ಯದಲ್ಲಿ ಏರುಪೇರಾಗಿದ್ದು, ನೆಗಡಿ, ಕೆಮ್ಮು, ಜ್ವರ ಕಾಣಿಸಿಕೊಂಡಿವೆ. ಪರೀಕ್ಷೆ ಮಾಡಿಸಿದಾಗ ಕೋವಿಡ್ ದೃಢಪಟ್ಟಿದೆ. ಅಲ್ಲದೇ ಇಲ್ಲಿ ಪೂರ್ಣಕಾಲಿಕ ಸ್ಟಾಫ್ ನರ್ಸ್ ಇಲ್ಲದ ಕಾರಣ ವಿದ್ಯಾರ್ಥಿಗಳು ಚಿಕ್ಕಪುಟ್ಟ ಆರೋಗ್ಯದ ಸಮಸ್ಯೆಯಿಂದ ಪರದಾಡುವಂತೆ ಆಗಿದೆ' ಎಂದು ಪಾಲಕರೊಬ್ಬರು ತಿಳಿಸಿದರು.</p>.<p>'ವಿದ್ಯಾಲಯದ 363 ಮಕ್ಕಳಿಗೆ ತಪಾಸಣೆ ಮಾಡಲಾಗಿದೆ. ಮಕ್ಕಳಿಗೆ ಪ್ರತ್ಯೇಕ ವಾಸ ಮಾಡಲು ವ್ಯವಸ್ಥೆ ಮಾಡಲಾಗಿದೆ. ಪಾಲಕರು ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗುತ್ತಿದ್ದಾರೆ' ಎಂದು ವೈದ್ಯೆ ಡಾ.ಕಾವ್ಯಾಶ್ರೀ ತಿಳಿಸಿದ್ದಾರೆ.</p>.<p><strong>ಜಿಲ್ಲಾಧಿಕಾರಿ ಭೇಟಿ:</strong>ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್, ನವೋದಯ ಮಹಾ ವಿದ್ಯಾಲಯಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು. ಮಕ್ಕಳಿಗೆ ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>