<p><strong>ಕೆಂಭಾವಿ:</strong> ಪಟ್ಟಣದ ವಾರ್ಡ ನಂ.11 ರ ಮುಖ್ಯರಸ್ತೆ ಮೇಲೆ ಚರಂಡಿ ನೀರು ಹರಿಯುತ್ತಿದೆ. ಇದರಿಂದ ಸಾರ್ವಜನಿಕರಿಗೆ ಬಹಳ ತೊಂದರೆಯಾಗುತ್ತಿದ್ದು ಪುರಸಭೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ಸಾರ್ವಜನಿಕರಿಗೆ ಸಹಕರಿಸಬೇಕು ಎಂದು ವಾರ್ಡ್ ನಿವಾಸಿ ಅಯ್ಯಪ್ಪಸ್ವಾಮಿ ಹೊಸಮನಿ ಆಗ್ರಹಿಸಿದ್ದಾರೆ.</p>.<p>‘ಈ ಕುರಿತು ಪುರಸಭೆ ಅಧಿಕಾರಿಗಳ ಗಮನಕ್ಕೆ ಹಲವು ಬಾರಿ ತಂದರೂ ಯಾವದೇ ಪ್ರಯೋಜನವಾಗಿಲ್ಲ. ಇದು ಈ ವಾರ್ಡಿನ ಮುಖ್ಯರಸ್ತೆಯಾಗಿದ್ದು ಹಳೆ ಬಸ್ ಸ್ಟ್ಯಾಂಡ್ ಹಾಗೂ ಮುಖ್ಯ ಬಾಜಾರಕ್ಕೆ ಕೊಂಡಿಯಂತಿದೆ. ಈ ರಸ್ತೆ ಮೂಲಕ ನೂರಾರು ವಾಹನಗಳು ತಿರುಗಾಡುತ್ತವೆ. ವೃದ್ಧರು, ಮಹಿಳೆಯರು, ಮಕ್ಕಳು ಈ ರಸ್ತೆಯನ್ನೇ ಅವಲಂಬಿಸಿದ್ದಾರೆ. ಯಾರಿಗಾದರೂ ಹೆಚ್ಚು ಕಡಿಮೆಯಾದರೆ ಪುರಸಭೆ ಅಧಿಕಾರಿಗಳೆ ನೇರ ಹೊಣೆಗಾರರು. ಚರಂಡಿ ನೀರು ರಸ್ತೆ ಮೇಲೆ ನಿಂತರೆ ಸಾಂಕ್ರಾಮಿಕ ರೋಗ ಹರಡುವ ಸಂಭವ ಜಾಸ್ತಿ. ಮಕ್ಕಳ ಹಾಗೂ ವೃದ್ಧರ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಪುರಸಭೆ ಮುಖ್ಯಾಧಿಕಾರಿಗಳು ಈ ಕುರಿತು ಮುತುವರ್ಜಿ ವಹಿಸಿ ರಸ್ತೆ ಮೇಲೆ ನೀರು ನಿಲ್ಲದಂತೆ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಂಭಾವಿ:</strong> ಪಟ್ಟಣದ ವಾರ್ಡ ನಂ.11 ರ ಮುಖ್ಯರಸ್ತೆ ಮೇಲೆ ಚರಂಡಿ ನೀರು ಹರಿಯುತ್ತಿದೆ. ಇದರಿಂದ ಸಾರ್ವಜನಿಕರಿಗೆ ಬಹಳ ತೊಂದರೆಯಾಗುತ್ತಿದ್ದು ಪುರಸಭೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ಸಾರ್ವಜನಿಕರಿಗೆ ಸಹಕರಿಸಬೇಕು ಎಂದು ವಾರ್ಡ್ ನಿವಾಸಿ ಅಯ್ಯಪ್ಪಸ್ವಾಮಿ ಹೊಸಮನಿ ಆಗ್ರಹಿಸಿದ್ದಾರೆ.</p>.<p>‘ಈ ಕುರಿತು ಪುರಸಭೆ ಅಧಿಕಾರಿಗಳ ಗಮನಕ್ಕೆ ಹಲವು ಬಾರಿ ತಂದರೂ ಯಾವದೇ ಪ್ರಯೋಜನವಾಗಿಲ್ಲ. ಇದು ಈ ವಾರ್ಡಿನ ಮುಖ್ಯರಸ್ತೆಯಾಗಿದ್ದು ಹಳೆ ಬಸ್ ಸ್ಟ್ಯಾಂಡ್ ಹಾಗೂ ಮುಖ್ಯ ಬಾಜಾರಕ್ಕೆ ಕೊಂಡಿಯಂತಿದೆ. ಈ ರಸ್ತೆ ಮೂಲಕ ನೂರಾರು ವಾಹನಗಳು ತಿರುಗಾಡುತ್ತವೆ. ವೃದ್ಧರು, ಮಹಿಳೆಯರು, ಮಕ್ಕಳು ಈ ರಸ್ತೆಯನ್ನೇ ಅವಲಂಬಿಸಿದ್ದಾರೆ. ಯಾರಿಗಾದರೂ ಹೆಚ್ಚು ಕಡಿಮೆಯಾದರೆ ಪುರಸಭೆ ಅಧಿಕಾರಿಗಳೆ ನೇರ ಹೊಣೆಗಾರರು. ಚರಂಡಿ ನೀರು ರಸ್ತೆ ಮೇಲೆ ನಿಂತರೆ ಸಾಂಕ್ರಾಮಿಕ ರೋಗ ಹರಡುವ ಸಂಭವ ಜಾಸ್ತಿ. ಮಕ್ಕಳ ಹಾಗೂ ವೃದ್ಧರ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಪುರಸಭೆ ಮುಖ್ಯಾಧಿಕಾರಿಗಳು ಈ ಕುರಿತು ಮುತುವರ್ಜಿ ವಹಿಸಿ ರಸ್ತೆ ಮೇಲೆ ನೀರು ನಿಲ್ಲದಂತೆ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>