<p><strong>ಸುರಪುರ</strong>: ನಾರಾಯಣಪುರ ಜಲಾಶಯದಿಂದ ಎರಡನೇ ಹಂಗಾಮಿಗೆ ಕಾಲುವೆಗೆ ನೀರು ಹರಿಸದಿರುವುದು ಮತ್ತು ಬರ ಪರಿಸ್ಥಿತಿಯಿಂದ ತಾಲ್ಲೂಕಿನಲ್ಲಿ ಕೃಷಿ ಚಟುವಟಿಕೆಗಳು ಸಂಪೂರ್ಣ ಸ್ಥಗಿತಗೊಂಡಿವೆ. ಕೃಷಿ ಕಾರ್ಮಿಕರಿಗೆ ಕೆಲಸವಿಲ್ಲದಂತಾಗಿದ್ದು, ತುತ್ತಿನ ಚೀಲ ತುಂಬಿಸಿಕೊಳ್ಳಲು ಕಾರ್ಮಿಕರು ಅನಿವಾರ್ಯವಾಗಿ ಮಹಾನಗರಗಳತ್ತ ಗುಳೆ ಆರಂಭಿಸಿದ್ದಾರೆ.</p>.<p>ಪ್ರತಿ ಗ್ರಾಮದಲ್ಲೂ ಶೇ60ರಿಂದ 70ರಷ್ಟು ಜನರು ದುಡಿಯಲು ಗುಳೆ ಹೋಗುವುದು ಸಾಮಾನ್ಯವಾಗಿದೆ. ಗ್ರಾಮಗಳಲ್ಲಿ ವೃದ್ಧರು, ಮಕ್ಕಳು ಮಾತ್ರವೇ ಉಳಿಯುತ್ತಿದ್ದು, ಗ್ರಾಮಗಳು ಬಿಕೋ ಎನ್ನುತ್ತಿವೆ.</p>.<p>ಹೆಚ್ಚುವರಿ ಬಸ್ ಓಡಾಟ: ಸುರಪುರ ಬಸ್ ಡಿಪೊದಿಂದ ಬೆಂಗಳೂರಿಗೆ ನಿತ್ಯ ನಾಲ್ಕು ಬಸ್ ಸಂಚರಿಸುತ್ತವೆ. ಈಗ ಪ್ರತಿ ದಿನ ನಾಲ್ಕು ಬಸ್ಗಳನ್ನು ಹೆಚ್ಚುವರಿಯಾಗಿ ಓಡಿಸಲಾಗುತ್ತಿದೆ. ಶನಿವಾರ ಮತ್ತು ಭಾನುವಾರ ಇನ್ನಷ್ಟು ಬಸ್ಗಳನ್ನು ಬಿಡಲು ಸಿದ್ಧತೆ ನಡೆದಿದೆ ಎಂದು ಮೂಲಗಳು ಹೇಳಿವೆ.</p>.<p>ಪ್ರತಿ ಗ್ರಾಮಗಳಲ್ಲಿ ಆರೇಳು ಕ್ರೂಸರ್ ಜೀಪ್ಗಳು ಕಾರ್ಮಿಕರನ್ನು ಬೆಂಗಳೂರು, ಪುಣೆ, ಮುಂಬೈ ನಗರಗಳಿಗೆ ಬಿಟ್ಟು ಬರಲೆಂದೇ ಇವೆ ಎನ್ನಲಾಗಿದೆ.</p>.<p>ಆರೋಗ್ಯ, ಶಿಕ್ಷಣ ಸಮಸ್ಯೆ: ಗುಳೆ ಹೋಗುವ ಕಾರ್ಮಿಕರು ಕಾಮಗಾರಿ ಸ್ಥಳದಲ್ಲೇ ವಾಸಿಸುವುದರಿಂದ ಆರೋಗ್ಯ ಸಮಸ್ಯೆ ಕಾಡುತ್ತದೆ. ಅವರ ಮಕ್ಕಳು ಶಿಕ್ಷಣದಿಂದ ವಂಚಿತರಾಗುವಂತಾಗಿದೆ.</p>.<p>ನೆರವಿಗೆ ಬರದ ನರೇಗಾ: ಗುಳೆ ತಪ್ಪಿಸಲೆಂದೇ ಸರ್ಕಾರ ಉದ್ಯೋಗ ಖಾತರಿ ಯೋಜನೆ ಜಾರಿಗೆ ತಂದಿದೆ. ಆದರೆ, ಯೋಜನೆಯಡಿ ಸಮರ್ಪಕ ಕೆಲಸ, ಕೂಲಿ ಸಿಗುತ್ತಿಲ್ಲ. ಯೋಜನೆಯ ದುರುಪಯೋಗವೇ ನಡೆದಿದೆ ಎಂಬುದು ಕಾರ್ಮಿಕರ ಅಸಮಾಧಾನ.</p>.<div><blockquote>ಕೃಷಿ ಕಾರ್ಮಿಕರು ವ್ಯಾಪಕವಾಗಿ ಬೆಂಗಳೂರಿಗೆ ದುಡಿಯಲು ಹೋಗುತ್ತಿದ್ದಾರೆ. ಹೆಚ್ಚಿನ ಬಸ್ ಬಿಡುವಂತೆ ಒತ್ತಡ ಹೆಚ್ಚಾಗಿದೆ </blockquote><span class="attribution">ಎಸ್.ಬಿ.ದಶವಂತ ವ್ಯವಸ್ಥಾಪಕ ಸುರಪುರ ಬಸ್ ಡಿಪೊ</span></div>.<div><blockquote>ಗುಳೆ ತಪ್ಪಿಸಲು ನರೇಗಾ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಬಸ್ನಿಲ್ದಾಣಗಳಲ್ಲೂ ಪ್ರಚಾರ ಮಾಡಲಾಗುತ್ತಿದೆ </blockquote><span class="attribution">ಬಸವರಾಜ ಸಜ್ಜನ್ ತಾಲ್ಲೂಕು ಪಂಚಾಯಿತಿ ಇ.ಒ</span></div>.<div><blockquote>ಬೆಂಗಳೂರಿನಲ್ಲಿ ದಂಪತಿ ಕಾರ್ಮಿಕರಿಗೆ ದಿನಕ್ಕೆ ₹1500 ಕೂಲಿ ಸಿಗುತ್ತದೆ. ನರೇಗಾ ಯೋಜನೆಯಲ್ಲಿ ಕೂಲಿ ಕಡಿಮೆ. ಕೃಷಿ ಕೆಲಸವೂ ಇಲ್ಲ. ಹೀಗಾಗಿ ಗುಳೆ ಹೆಚ್ಚಾಗಿದೆ </blockquote><span class="attribution">ವಿಶ್ವರಾಜ ಒಂಟೂರ ರೈತ ಮುಖಂಡ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಪುರ</strong>: ನಾರಾಯಣಪುರ ಜಲಾಶಯದಿಂದ ಎರಡನೇ ಹಂಗಾಮಿಗೆ ಕಾಲುವೆಗೆ ನೀರು ಹರಿಸದಿರುವುದು ಮತ್ತು ಬರ ಪರಿಸ್ಥಿತಿಯಿಂದ ತಾಲ್ಲೂಕಿನಲ್ಲಿ ಕೃಷಿ ಚಟುವಟಿಕೆಗಳು ಸಂಪೂರ್ಣ ಸ್ಥಗಿತಗೊಂಡಿವೆ. ಕೃಷಿ ಕಾರ್ಮಿಕರಿಗೆ ಕೆಲಸವಿಲ್ಲದಂತಾಗಿದ್ದು, ತುತ್ತಿನ ಚೀಲ ತುಂಬಿಸಿಕೊಳ್ಳಲು ಕಾರ್ಮಿಕರು ಅನಿವಾರ್ಯವಾಗಿ ಮಹಾನಗರಗಳತ್ತ ಗುಳೆ ಆರಂಭಿಸಿದ್ದಾರೆ.</p>.<p>ಪ್ರತಿ ಗ್ರಾಮದಲ್ಲೂ ಶೇ60ರಿಂದ 70ರಷ್ಟು ಜನರು ದುಡಿಯಲು ಗುಳೆ ಹೋಗುವುದು ಸಾಮಾನ್ಯವಾಗಿದೆ. ಗ್ರಾಮಗಳಲ್ಲಿ ವೃದ್ಧರು, ಮಕ್ಕಳು ಮಾತ್ರವೇ ಉಳಿಯುತ್ತಿದ್ದು, ಗ್ರಾಮಗಳು ಬಿಕೋ ಎನ್ನುತ್ತಿವೆ.</p>.<p>ಹೆಚ್ಚುವರಿ ಬಸ್ ಓಡಾಟ: ಸುರಪುರ ಬಸ್ ಡಿಪೊದಿಂದ ಬೆಂಗಳೂರಿಗೆ ನಿತ್ಯ ನಾಲ್ಕು ಬಸ್ ಸಂಚರಿಸುತ್ತವೆ. ಈಗ ಪ್ರತಿ ದಿನ ನಾಲ್ಕು ಬಸ್ಗಳನ್ನು ಹೆಚ್ಚುವರಿಯಾಗಿ ಓಡಿಸಲಾಗುತ್ತಿದೆ. ಶನಿವಾರ ಮತ್ತು ಭಾನುವಾರ ಇನ್ನಷ್ಟು ಬಸ್ಗಳನ್ನು ಬಿಡಲು ಸಿದ್ಧತೆ ನಡೆದಿದೆ ಎಂದು ಮೂಲಗಳು ಹೇಳಿವೆ.</p>.<p>ಪ್ರತಿ ಗ್ರಾಮಗಳಲ್ಲಿ ಆರೇಳು ಕ್ರೂಸರ್ ಜೀಪ್ಗಳು ಕಾರ್ಮಿಕರನ್ನು ಬೆಂಗಳೂರು, ಪುಣೆ, ಮುಂಬೈ ನಗರಗಳಿಗೆ ಬಿಟ್ಟು ಬರಲೆಂದೇ ಇವೆ ಎನ್ನಲಾಗಿದೆ.</p>.<p>ಆರೋಗ್ಯ, ಶಿಕ್ಷಣ ಸಮಸ್ಯೆ: ಗುಳೆ ಹೋಗುವ ಕಾರ್ಮಿಕರು ಕಾಮಗಾರಿ ಸ್ಥಳದಲ್ಲೇ ವಾಸಿಸುವುದರಿಂದ ಆರೋಗ್ಯ ಸಮಸ್ಯೆ ಕಾಡುತ್ತದೆ. ಅವರ ಮಕ್ಕಳು ಶಿಕ್ಷಣದಿಂದ ವಂಚಿತರಾಗುವಂತಾಗಿದೆ.</p>.<p>ನೆರವಿಗೆ ಬರದ ನರೇಗಾ: ಗುಳೆ ತಪ್ಪಿಸಲೆಂದೇ ಸರ್ಕಾರ ಉದ್ಯೋಗ ಖಾತರಿ ಯೋಜನೆ ಜಾರಿಗೆ ತಂದಿದೆ. ಆದರೆ, ಯೋಜನೆಯಡಿ ಸಮರ್ಪಕ ಕೆಲಸ, ಕೂಲಿ ಸಿಗುತ್ತಿಲ್ಲ. ಯೋಜನೆಯ ದುರುಪಯೋಗವೇ ನಡೆದಿದೆ ಎಂಬುದು ಕಾರ್ಮಿಕರ ಅಸಮಾಧಾನ.</p>.<div><blockquote>ಕೃಷಿ ಕಾರ್ಮಿಕರು ವ್ಯಾಪಕವಾಗಿ ಬೆಂಗಳೂರಿಗೆ ದುಡಿಯಲು ಹೋಗುತ್ತಿದ್ದಾರೆ. ಹೆಚ್ಚಿನ ಬಸ್ ಬಿಡುವಂತೆ ಒತ್ತಡ ಹೆಚ್ಚಾಗಿದೆ </blockquote><span class="attribution">ಎಸ್.ಬಿ.ದಶವಂತ ವ್ಯವಸ್ಥಾಪಕ ಸುರಪುರ ಬಸ್ ಡಿಪೊ</span></div>.<div><blockquote>ಗುಳೆ ತಪ್ಪಿಸಲು ನರೇಗಾ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಬಸ್ನಿಲ್ದಾಣಗಳಲ್ಲೂ ಪ್ರಚಾರ ಮಾಡಲಾಗುತ್ತಿದೆ </blockquote><span class="attribution">ಬಸವರಾಜ ಸಜ್ಜನ್ ತಾಲ್ಲೂಕು ಪಂಚಾಯಿತಿ ಇ.ಒ</span></div>.<div><blockquote>ಬೆಂಗಳೂರಿನಲ್ಲಿ ದಂಪತಿ ಕಾರ್ಮಿಕರಿಗೆ ದಿನಕ್ಕೆ ₹1500 ಕೂಲಿ ಸಿಗುತ್ತದೆ. ನರೇಗಾ ಯೋಜನೆಯಲ್ಲಿ ಕೂಲಿ ಕಡಿಮೆ. ಕೃಷಿ ಕೆಲಸವೂ ಇಲ್ಲ. ಹೀಗಾಗಿ ಗುಳೆ ಹೆಚ್ಚಾಗಿದೆ </blockquote><span class="attribution">ವಿಶ್ವರಾಜ ಒಂಟೂರ ರೈತ ಮುಖಂಡ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>