<p>ಶಹಾಪುರ: ನಗರದ ಸಿಪಿಎಸ್ ಶಾಲಾ ಮೈದಾನದಲ್ಲಿ ಏ.29ರಂದು ನಡೆಯಲಿರುವ ಬಸವಾದಿ ಶರಣರ ಹಿಂದೂ ಸಮಾವೇಶಕ್ಕೆ ಆಗಮಿಸುವಂತೆ ವಿವಿಧ ಮಠಗಳ ಮಠಾಧೀಶರು ಹಾಗೂ ಮುಖಂಡರು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಅವರಿಗೆ ಆಹ್ವಾನ ಪತ್ರ ನೀಡಿ ಮನವಿ ಮಾಡಿದರು.</p>.<p>ಇದೇ ಸಂದರ್ಭದಲ್ಲಿ ಮಾತನಾಡಿದ ಸೂಗೂರೇಶ್ವರ ಶಿವಾಚಾರ್ಯರು, ‘ಬಸವಾದಿ ಶಿವಶರಣರ ಹಿಂದೂ ಸಮಾವೇಶ ಪಕ್ಷಾತೀತವಾಗಿದೆ. ನಾವೆಲ್ಲ ಹಿಂದೂ ನಾವೆಲ್ಲ ಒಂದು ಎನ್ನುವ ತತ್ವದ ಅಡಿಯಲ್ಲಿ ಹಿಂದೂ ಸಮಾಜದ ಉನ್ನತೀಕರಣಕ್ಕಾಗಿ ಸಂಘಟಿತ ಸಮಾವೇಶ ಮಾಡುತ್ತಿದ್ದೇವೆ. ಇಂತಹ ಪವಿತ್ರ ಕಾರ್ಯಕ್ರಮಕ್ಕೆ ಕನ್ನೇರಿ ಶ್ರೀ ಆಗಮಿಸುತ್ತಿದ್ದಾರೆ’ ಎಂದರು.</p>.<p>‘ತಾವು ಕ್ಷೇತ್ರದ ಹಿರಿಯ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರಿಂದ ತಮ್ಮ ಉಪಸ್ಥಿತಿ ಅಗತ್ಯವಿದ್ದು, ಉತ್ತಮ ನಾಗಕರಿ ಸಮಾಜ ನಿರ್ಮಾಣಕ್ಕೆ ಸಹಕರಿಸಬೇಕು’ ಎಂದು ಮನವಿ ಮಾಡಿದರು.</p>.<p>ಗುಂಬಳಾಪುರ ಮಠದ ಸಿದ್ದೇಶ್ವರ ಶಿವಾಚಾರ್ಯರು, ಏಕದಂಡಗಿ ಮಠದ ವಿರೂಪಾಕ್ಷಯ್ಯ ಸ್ವಾಮೀಜಿ, ಸಿದ್ರಾಮೇಶ್ವರ ಸ್ವಾಮೀಜಿ ಹಾಗೂ ಮುಖಂಡರಾದ ಬಸವರಾಜ ಹೇರುಂಡಿ, ಮಲ್ಲಿಕಾರ್ಜುನ ಗಂಗಾಧರ ಮಠ, ಗುರು ಕಾಮಾ, ರಾಜೂ ಆನೇಗುಂದಿ, ಅರವಿಂದ ಉಪ್ಪಿನ, ರಾಘವೇಂದ್ರ ಯಕ್ಷಿಂತಿ, ಮಲ್ಲಿಕಾರ್ಜುನ ಚಿಂಚೋಳಿ ಉಪಸ್ಥಿತರಿದ್ದರು</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-30-672516901</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಹಾಪುರ: ನಗರದ ಸಿಪಿಎಸ್ ಶಾಲಾ ಮೈದಾನದಲ್ಲಿ ಏ.29ರಂದು ನಡೆಯಲಿರುವ ಬಸವಾದಿ ಶರಣರ ಹಿಂದೂ ಸಮಾವೇಶಕ್ಕೆ ಆಗಮಿಸುವಂತೆ ವಿವಿಧ ಮಠಗಳ ಮಠಾಧೀಶರು ಹಾಗೂ ಮುಖಂಡರು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಅವರಿಗೆ ಆಹ್ವಾನ ಪತ್ರ ನೀಡಿ ಮನವಿ ಮಾಡಿದರು.</p>.<p>ಇದೇ ಸಂದರ್ಭದಲ್ಲಿ ಮಾತನಾಡಿದ ಸೂಗೂರೇಶ್ವರ ಶಿವಾಚಾರ್ಯರು, ‘ಬಸವಾದಿ ಶಿವಶರಣರ ಹಿಂದೂ ಸಮಾವೇಶ ಪಕ್ಷಾತೀತವಾಗಿದೆ. ನಾವೆಲ್ಲ ಹಿಂದೂ ನಾವೆಲ್ಲ ಒಂದು ಎನ್ನುವ ತತ್ವದ ಅಡಿಯಲ್ಲಿ ಹಿಂದೂ ಸಮಾಜದ ಉನ್ನತೀಕರಣಕ್ಕಾಗಿ ಸಂಘಟಿತ ಸಮಾವೇಶ ಮಾಡುತ್ತಿದ್ದೇವೆ. ಇಂತಹ ಪವಿತ್ರ ಕಾರ್ಯಕ್ರಮಕ್ಕೆ ಕನ್ನೇರಿ ಶ್ರೀ ಆಗಮಿಸುತ್ತಿದ್ದಾರೆ’ ಎಂದರು.</p>.<p>‘ತಾವು ಕ್ಷೇತ್ರದ ಹಿರಿಯ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರಿಂದ ತಮ್ಮ ಉಪಸ್ಥಿತಿ ಅಗತ್ಯವಿದ್ದು, ಉತ್ತಮ ನಾಗಕರಿ ಸಮಾಜ ನಿರ್ಮಾಣಕ್ಕೆ ಸಹಕರಿಸಬೇಕು’ ಎಂದು ಮನವಿ ಮಾಡಿದರು.</p>.<p>ಗುಂಬಳಾಪುರ ಮಠದ ಸಿದ್ದೇಶ್ವರ ಶಿವಾಚಾರ್ಯರು, ಏಕದಂಡಗಿ ಮಠದ ವಿರೂಪಾಕ್ಷಯ್ಯ ಸ್ವಾಮೀಜಿ, ಸಿದ್ರಾಮೇಶ್ವರ ಸ್ವಾಮೀಜಿ ಹಾಗೂ ಮುಖಂಡರಾದ ಬಸವರಾಜ ಹೇರುಂಡಿ, ಮಲ್ಲಿಕಾರ್ಜುನ ಗಂಗಾಧರ ಮಠ, ಗುರು ಕಾಮಾ, ರಾಜೂ ಆನೇಗುಂದಿ, ಅರವಿಂದ ಉಪ್ಪಿನ, ರಾಘವೇಂದ್ರ ಯಕ್ಷಿಂತಿ, ಮಲ್ಲಿಕಾರ್ಜುನ ಚಿಂಚೋಳಿ ಉಪಸ್ಥಿತರಿದ್ದರು</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-30-672516901</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>