<p><strong>ಶಹಾಪುರ/ವಡಗೇರಾ:</strong> ಶಹಾಪುರ ತಾಲ್ಲೂಕಿನ 10 ಹಾಗೂ ವಡಗೇರಾ ತಾಲ್ಲೂಕಿನ 14 ಹಳ್ಳಿಗಳು ಭೀಮಾ ನದಿ ದಂಡೆಯ ವ್ಯಾಪ್ತಿಗೆ ಬರುತ್ತಿವೆ. ನೆರೆಯ ಮಹಾರಾಷ್ಟ್ರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಭೀಮಾನದಿಗೆ 64 ಸಾವಿರ ಕ್ಯುಸೆಕ್ ನೀರು ಹರಿಬಿಡಲಾಗಿದೆ. ಸದ್ಯಕ್ಕೆ ನದಿ ದಂಡೆಯ ಗ್ರಾಮಗಳಿಗೆ ಸಮಸ್ಯೆಯಿಲ್ಲ. ಅಗತ್ಯ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಶಹಾಪುರ ತಹಶೀಲ್ದಾರ್ ಜಗನಾಥರಡ್ಡಿ ತಿಳಿಸಿದ್ದಾರೆ.</p>.<p>ಅದರಲ್ಲಿ ತಾಲ್ಲೂಕಿನ ಹುರಸಗುಂಡಗಿ ಗ್ರಾಮದ ಬಳಿ ಭೀಮಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸನ್ನತಿ ಬ್ರಿಜ್ ಕಂ ಬ್ಯಾರೇಜ್ ಗೇಟ್ ಎತ್ತರಿಸುವ ಹಾಗೂ ಇಳಿಸುವ ಬಗ್ಗೆ ಸುಸಜ್ಜಿತವಾಗಿ ಇಡುವಂತೆ ಕೆಬಿಜೆಎನ್ಎಲ್ ನಿಗಮದ ಎಂಜಿನಿಯರ್ ಅವರಿಗೆ ಕಟ್ಟುನಿಟ್ಟಾಗಿ ಸೂಚಿಸಿದೆ. ಯಾವುದೇ ಸಂದರ್ಭದಲ್ಲಿ ಹೆಚ್ಚಿನ ನೀರು ನದಿಗೆ ಬಂದರೆ ಗೇಟ್ ಎತ್ತರಿಸಲು ಮೇಲಧಿಕಾರಿಗಳ ಆದೇಶದಂತೆ ಸೂಚಿಸಲಾಗಿದೆ ಎಂದರು.</p>.<p>ಬ್ಯಾರೇಜ್ ಹಿನ್ನೀರಿನಿಂದ ಮುಳುಗಡೆಯಾಗಲಿರುವ ಹುರಸಗುಂಡಗಿ ಗ್ರಾಮಸ್ಥರನ್ನು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚಿಸಲಾಗಿದೆ. ಗ್ರಾಮದಲ್ಲಿ ಡಂಗೂರ ಸಾರಿ ಎಚ್ಚರಿಕೆ ನೀಡಲಾಗಿದೆ ಎಂದರು.</p>.<p>ಭೀಮಾ ನದಿಗೆ ಹೆಚ್ಚಿನ ನೀರು ಬಂದರೆ ಶಹಾಪುರ ತಾಲ್ಲೂಕಿನ ಶಿರವಾಳ, ಅಣಬಿ, ಹೊಸೂರ, ರೋಜಾ ಮುಂತಾದ ಹಳ್ಳಿಗಳಿಗೆ ಸಮಸ್ಯೆಯಾಗುತ್ತದೆ. ಈಗಾಗಲೇ ಭೀಮಾ ದಂಡೆಯ ಜಮೀನುಗಳಲ್ಲಿ ಭತ್ತ, ಹತ್ತಿಬೆಳೆ ಬಿತ್ತನೆ ಮಾಡಿದ್ದು ಪ್ರವಾಹದಿಂದ ಆತಂಕ ಶುರುವಾಗಿದೆ ಎಂದು ನದಿ ದಂಡೆಯ ಜನರು ತಿಳಿಸಿದರು.</p>.<p>ಅದರಂತೆ ವಡಗೇರಾ ತಾಲ್ಲೂಕಿನ ಶಿವನೂರ, ಜೋಳದಡಗಿ, ಮಾಚನೂರ ಮುಂತಾದ ಗ್ರಾಮದ ಜಮೀನುಗಳಿಗೆ ನೀರು ನುಗ್ಗಿವೆ. ನದಿ ದಂಡೆಯ ಗ್ರಾಮಸ್ಥರು ನದಿಯಲ್ಲಿ ಇಳಿಯಬಾರದು ಎಂದು ಆಯಾ ಗ್ರಾಮಗಳಲ್ಲಿ ಡಂಗೂರ ಸಾರಿ ಎಚ್ಚರಿಕೆ ನೀಡಿದೆ. ಭೀಮಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಜೋಳದಡಗಿ ಬ್ರಿಜ್ ಕಂ ಬ್ಯಾರೇಜ್ ಗೇಟ್ ತೆಗೆದು ಹಾಕಿದ್ದಾರೆ. ಯಾವುದೇ ತೊಂದರೆ ಇಲ್ಲ ಎಂದು ಕಂದಾಯ ನಿರೀಕ್ಷಕ ಸಂಜೀವಪ್ಪ ಕವಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಹಾಪುರ/ವಡಗೇರಾ:</strong> ಶಹಾಪುರ ತಾಲ್ಲೂಕಿನ 10 ಹಾಗೂ ವಡಗೇರಾ ತಾಲ್ಲೂಕಿನ 14 ಹಳ್ಳಿಗಳು ಭೀಮಾ ನದಿ ದಂಡೆಯ ವ್ಯಾಪ್ತಿಗೆ ಬರುತ್ತಿವೆ. ನೆರೆಯ ಮಹಾರಾಷ್ಟ್ರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಭೀಮಾನದಿಗೆ 64 ಸಾವಿರ ಕ್ಯುಸೆಕ್ ನೀರು ಹರಿಬಿಡಲಾಗಿದೆ. ಸದ್ಯಕ್ಕೆ ನದಿ ದಂಡೆಯ ಗ್ರಾಮಗಳಿಗೆ ಸಮಸ್ಯೆಯಿಲ್ಲ. ಅಗತ್ಯ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಶಹಾಪುರ ತಹಶೀಲ್ದಾರ್ ಜಗನಾಥರಡ್ಡಿ ತಿಳಿಸಿದ್ದಾರೆ.</p>.<p>ಅದರಲ್ಲಿ ತಾಲ್ಲೂಕಿನ ಹುರಸಗುಂಡಗಿ ಗ್ರಾಮದ ಬಳಿ ಭೀಮಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸನ್ನತಿ ಬ್ರಿಜ್ ಕಂ ಬ್ಯಾರೇಜ್ ಗೇಟ್ ಎತ್ತರಿಸುವ ಹಾಗೂ ಇಳಿಸುವ ಬಗ್ಗೆ ಸುಸಜ್ಜಿತವಾಗಿ ಇಡುವಂತೆ ಕೆಬಿಜೆಎನ್ಎಲ್ ನಿಗಮದ ಎಂಜಿನಿಯರ್ ಅವರಿಗೆ ಕಟ್ಟುನಿಟ್ಟಾಗಿ ಸೂಚಿಸಿದೆ. ಯಾವುದೇ ಸಂದರ್ಭದಲ್ಲಿ ಹೆಚ್ಚಿನ ನೀರು ನದಿಗೆ ಬಂದರೆ ಗೇಟ್ ಎತ್ತರಿಸಲು ಮೇಲಧಿಕಾರಿಗಳ ಆದೇಶದಂತೆ ಸೂಚಿಸಲಾಗಿದೆ ಎಂದರು.</p>.<p>ಬ್ಯಾರೇಜ್ ಹಿನ್ನೀರಿನಿಂದ ಮುಳುಗಡೆಯಾಗಲಿರುವ ಹುರಸಗುಂಡಗಿ ಗ್ರಾಮಸ್ಥರನ್ನು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚಿಸಲಾಗಿದೆ. ಗ್ರಾಮದಲ್ಲಿ ಡಂಗೂರ ಸಾರಿ ಎಚ್ಚರಿಕೆ ನೀಡಲಾಗಿದೆ ಎಂದರು.</p>.<p>ಭೀಮಾ ನದಿಗೆ ಹೆಚ್ಚಿನ ನೀರು ಬಂದರೆ ಶಹಾಪುರ ತಾಲ್ಲೂಕಿನ ಶಿರವಾಳ, ಅಣಬಿ, ಹೊಸೂರ, ರೋಜಾ ಮುಂತಾದ ಹಳ್ಳಿಗಳಿಗೆ ಸಮಸ್ಯೆಯಾಗುತ್ತದೆ. ಈಗಾಗಲೇ ಭೀಮಾ ದಂಡೆಯ ಜಮೀನುಗಳಲ್ಲಿ ಭತ್ತ, ಹತ್ತಿಬೆಳೆ ಬಿತ್ತನೆ ಮಾಡಿದ್ದು ಪ್ರವಾಹದಿಂದ ಆತಂಕ ಶುರುವಾಗಿದೆ ಎಂದು ನದಿ ದಂಡೆಯ ಜನರು ತಿಳಿಸಿದರು.</p>.<p>ಅದರಂತೆ ವಡಗೇರಾ ತಾಲ್ಲೂಕಿನ ಶಿವನೂರ, ಜೋಳದಡಗಿ, ಮಾಚನೂರ ಮುಂತಾದ ಗ್ರಾಮದ ಜಮೀನುಗಳಿಗೆ ನೀರು ನುಗ್ಗಿವೆ. ನದಿ ದಂಡೆಯ ಗ್ರಾಮಸ್ಥರು ನದಿಯಲ್ಲಿ ಇಳಿಯಬಾರದು ಎಂದು ಆಯಾ ಗ್ರಾಮಗಳಲ್ಲಿ ಡಂಗೂರ ಸಾರಿ ಎಚ್ಚರಿಕೆ ನೀಡಿದೆ. ಭೀಮಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಜೋಳದಡಗಿ ಬ್ರಿಜ್ ಕಂ ಬ್ಯಾರೇಜ್ ಗೇಟ್ ತೆಗೆದು ಹಾಕಿದ್ದಾರೆ. ಯಾವುದೇ ತೊಂದರೆ ಇಲ್ಲ ಎಂದು ಕಂದಾಯ ನಿರೀಕ್ಷಕ ಸಂಜೀವಪ್ಪ ಕವಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>