<p><strong>ಶಹಾಪುರ</strong>: ನಗರದ ಮಾರ್ಟ್ ಅಂಗಡಿಯಲ್ಲಿ ₹ 4.50 ಲಕ್ಷ ಮೌಲ್ಯದ ಡ್ರೈ ಫ್ರುಟ್ಸ್ ಕಳವು ಆರೋಪ ಸಾಬೀತಾಗಿದ್ದರಿಂದ ಬುಧವಾರ ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶೆ ಶೋಭಾ ಅವರು ಅಪರಾಧಿಗೆ 4 ವರ್ಷ ಜೈಲು ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಿ ಆದೇಶಿಸಿದ್ದಾರೆ.</p>.<p>ಬೀದರ್ ಜಿಲ್ಲೆಯ ಔರಾದ್ ತಾಲ್ಲೂಕಿನ ಇಟಗಿಹಾಳ ಗ್ರಾಮದ ಓಂಕಾರ ತುಕಾರಾಮ ಕಾಂಬ್ಳೆ ಶಿಕ್ಷೆಗೆ ಒಳಗಾದ ಅಪರಾಧಿ.</p>.<p>2024 ಅಕ್ಬೋಬರ್ 23ರಂದು ನಗರದ ರಾಕಂಗೇರಾ ಬಡಾವಣೆಯಲ್ಲಿರುವ ಮಾರ್ಟ್ ಅಂಗಡಿಯ ಮೇಲಿನ ಟಿನ್ ಶೆಡ್ ಕತ್ತರಿಸಿ, ರಾತ್ರಿ ವೇಳೆಯಲ್ಲಿ ₹ 4.50 ಲಕ್ಷ ಮೌಲ್ಯದ ಬೆಳೆಬಾಳುವ ಡ್ರೈ ಫ್ರುಟ್ಸ್ , ಕಿರಾಣಿ ಸಾಮಾನು, ಸ್ಟೇಷನರಿ ಸಾಮಗ್ರಿಗಳನ್ನು ಕಳವು ಮಾಡಿಕೊಂಡು ತೆರಳಿದ್ದ. ಗಲ್ಲಾದಲ್ಲಿದ್ದ ₹ 45 ಸಾವಿರ ನಗದು ಹಣ ದೋಚಿಕೊಂಡು ಪರಾರಿಯಾಗಿದ್ದ ಎಂದು ಅಂಗಡಿ ಮಾಲೀಕ ಮಹ್ಮದ್ ಇಲಿಯಾಸ್ ದಾದುಲ್ಲಾ ಅವರು ಶಹಾಪುರ ಠಾಣೆಯಲ್ಲಿ ದೂರು ದಾಖಲಿಸಿದ್ದರು.</p>.<p>ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಎಸ್.ಎನ್. ಪಾಟೀಲ ಅವರು ನ್ಯಾಯಾಲಯಕ್ಕೆ ದೋಷಾರೋಪಣೆ ವರದಿ ಸಲ್ಲಿಸಿದ್ದರು. ದೂರುದಾರ ಪರವಾಗಿ ಎಪಿಪಿ ದಿವ್ಯಾರಾಣಿ ನಾಯಕ ಸುರಪುರ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಹಾಪುರ</strong>: ನಗರದ ಮಾರ್ಟ್ ಅಂಗಡಿಯಲ್ಲಿ ₹ 4.50 ಲಕ್ಷ ಮೌಲ್ಯದ ಡ್ರೈ ಫ್ರುಟ್ಸ್ ಕಳವು ಆರೋಪ ಸಾಬೀತಾಗಿದ್ದರಿಂದ ಬುಧವಾರ ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶೆ ಶೋಭಾ ಅವರು ಅಪರಾಧಿಗೆ 4 ವರ್ಷ ಜೈಲು ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಿ ಆದೇಶಿಸಿದ್ದಾರೆ.</p>.<p>ಬೀದರ್ ಜಿಲ್ಲೆಯ ಔರಾದ್ ತಾಲ್ಲೂಕಿನ ಇಟಗಿಹಾಳ ಗ್ರಾಮದ ಓಂಕಾರ ತುಕಾರಾಮ ಕಾಂಬ್ಳೆ ಶಿಕ್ಷೆಗೆ ಒಳಗಾದ ಅಪರಾಧಿ.</p>.<p>2024 ಅಕ್ಬೋಬರ್ 23ರಂದು ನಗರದ ರಾಕಂಗೇರಾ ಬಡಾವಣೆಯಲ್ಲಿರುವ ಮಾರ್ಟ್ ಅಂಗಡಿಯ ಮೇಲಿನ ಟಿನ್ ಶೆಡ್ ಕತ್ತರಿಸಿ, ರಾತ್ರಿ ವೇಳೆಯಲ್ಲಿ ₹ 4.50 ಲಕ್ಷ ಮೌಲ್ಯದ ಬೆಳೆಬಾಳುವ ಡ್ರೈ ಫ್ರುಟ್ಸ್ , ಕಿರಾಣಿ ಸಾಮಾನು, ಸ್ಟೇಷನರಿ ಸಾಮಗ್ರಿಗಳನ್ನು ಕಳವು ಮಾಡಿಕೊಂಡು ತೆರಳಿದ್ದ. ಗಲ್ಲಾದಲ್ಲಿದ್ದ ₹ 45 ಸಾವಿರ ನಗದು ಹಣ ದೋಚಿಕೊಂಡು ಪರಾರಿಯಾಗಿದ್ದ ಎಂದು ಅಂಗಡಿ ಮಾಲೀಕ ಮಹ್ಮದ್ ಇಲಿಯಾಸ್ ದಾದುಲ್ಲಾ ಅವರು ಶಹಾಪುರ ಠಾಣೆಯಲ್ಲಿ ದೂರು ದಾಖಲಿಸಿದ್ದರು.</p>.<p>ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಎಸ್.ಎನ್. ಪಾಟೀಲ ಅವರು ನ್ಯಾಯಾಲಯಕ್ಕೆ ದೋಷಾರೋಪಣೆ ವರದಿ ಸಲ್ಲಿಸಿದ್ದರು. ದೂರುದಾರ ಪರವಾಗಿ ಎಪಿಪಿ ದಿವ್ಯಾರಾಣಿ ನಾಯಕ ಸುರಪುರ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>