<p>ಶಹಾಪುರ: ಶಾಸಕ ಶರಣಬಸಪ್ಪ ದರ್ಶನಾಪುರ ಮಂಗಳವಾರ ನಗರದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು.</p>.<p>ನಗರದ ಹೊರವಲಯದ ಕನ್ಯಾಕೊಳ್ಳೂರ ರಸ್ತೆ ಬಳಿ ₹4.70 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಮೌಲಾನಾ ಆಜಾದ್ ಶಾಲೆಯ ಕಟ್ಟಡ ಕಾಮಗಾರಿ ವೀಕ್ಷಿಸಿದರು. ನಿಗದಿತ ಅವಧಿಯಲ್ಲಿ ಕೆಲಸ ಪೂರ್ಣಗೊಳಿಸಬೇಕು ಎಂದು ಎಂಜಿನಿಯರ್ಗೆ ಸೂಚಿಸಿದರು.</p>.<p>ಕ್ರೀಡಾಂಗಣಕ್ಕೆ ಭೇಟಿ: ನಗರದ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಕೆಕೆಆರ್ಡಿಬಿ ಯೋಜನೆ ಅಡಿಯಲ್ಲಿ ₹2 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಲಾನ್ ಟೆನ್ನಿಸ್ ಕ್ರೀಡಾಂಗಣ ಕಾಮಗಾರಿಯನ್ನು ಪರಿಶೀಲಿಸಿದರು.</p>.<p>ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹೊರ ಕ್ರೀಡಾಂಗಣದೊಳಗೆ ₹1ಕೋಟಿ ವೆಚ್ಚದಲ್ಲಿ ನೀರು ನಿಲ್ಲದಂತೆ ಇನ್ನರ್ ಡ್ರೈನೇಜ್ ನಿರ್ಮಾಣ ಮಾಡಲಾಗುತ್ತಿದೆ. ಜೊತೆಗೆ ಹಿರಿಯರಿಗೆ ವಾಯು ವಿಹಾರಕ್ಕೆ ಟ್ರ್ಯಾಕಿಂಗ್ ವ್ಯವಸ್ಥೆ, ಕ್ರೀಡಾಂಗಣ ಸುತ್ತಲೂ ಗೋಡೆಗಳ ಭದ್ರತೆಗೆ ವ್ಯವಸ್ಥಿತ ಪಿಚ್ಚಿಂಗ್ ಮಾಡಲಾಗಿದೆ ಎಂದರು.</p>.<p>ಚೆಕ್ ವಿತರಣೆ: ಮತಕ್ಷೇತ್ರದ ವ್ಯಾಪ್ತಿಯಲ್ಲಿ ಮಠ ಮಂದಿರಗಳ ಜೀರ್ಣೋದ್ಧಾರಕ್ಕೆ ಮತ್ತು ನೂತನ ಕಟ್ಟಡಕ್ಕೆ ಹೆಚ್ಚಿನ ಅನುದಾನವನ್ನು ಒದಗಿಸಲಾಗಿದೆ. ಉಳಿದ 25 ಮಠ ಮಂದಿರಗಳಿಗೆ ಶಾಸಕರು ಕಾರ್ಯಾಲಯದಲ್ಲಿ ಅನುದಾನದ ಚೆಕ್ ವಿತರಿಸಿದರು.</p>.<p>ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಮಹಾಂತ ಚಂದಾಪುರ, ನಗರ ಆಶ್ರಯ ಸಮಿತಿ ಅಧ್ಯಕ್ಷ ವಸಂತಕುಮಾರ ಸುರಪುರಕರ್ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-30-1716720150</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಹಾಪುರ: ಶಾಸಕ ಶರಣಬಸಪ್ಪ ದರ್ಶನಾಪುರ ಮಂಗಳವಾರ ನಗರದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು.</p>.<p>ನಗರದ ಹೊರವಲಯದ ಕನ್ಯಾಕೊಳ್ಳೂರ ರಸ್ತೆ ಬಳಿ ₹4.70 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಮೌಲಾನಾ ಆಜಾದ್ ಶಾಲೆಯ ಕಟ್ಟಡ ಕಾಮಗಾರಿ ವೀಕ್ಷಿಸಿದರು. ನಿಗದಿತ ಅವಧಿಯಲ್ಲಿ ಕೆಲಸ ಪೂರ್ಣಗೊಳಿಸಬೇಕು ಎಂದು ಎಂಜಿನಿಯರ್ಗೆ ಸೂಚಿಸಿದರು.</p>.<p>ಕ್ರೀಡಾಂಗಣಕ್ಕೆ ಭೇಟಿ: ನಗರದ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಕೆಕೆಆರ್ಡಿಬಿ ಯೋಜನೆ ಅಡಿಯಲ್ಲಿ ₹2 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಲಾನ್ ಟೆನ್ನಿಸ್ ಕ್ರೀಡಾಂಗಣ ಕಾಮಗಾರಿಯನ್ನು ಪರಿಶೀಲಿಸಿದರು.</p>.<p>ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹೊರ ಕ್ರೀಡಾಂಗಣದೊಳಗೆ ₹1ಕೋಟಿ ವೆಚ್ಚದಲ್ಲಿ ನೀರು ನಿಲ್ಲದಂತೆ ಇನ್ನರ್ ಡ್ರೈನೇಜ್ ನಿರ್ಮಾಣ ಮಾಡಲಾಗುತ್ತಿದೆ. ಜೊತೆಗೆ ಹಿರಿಯರಿಗೆ ವಾಯು ವಿಹಾರಕ್ಕೆ ಟ್ರ್ಯಾಕಿಂಗ್ ವ್ಯವಸ್ಥೆ, ಕ್ರೀಡಾಂಗಣ ಸುತ್ತಲೂ ಗೋಡೆಗಳ ಭದ್ರತೆಗೆ ವ್ಯವಸ್ಥಿತ ಪಿಚ್ಚಿಂಗ್ ಮಾಡಲಾಗಿದೆ ಎಂದರು.</p>.<p>ಚೆಕ್ ವಿತರಣೆ: ಮತಕ್ಷೇತ್ರದ ವ್ಯಾಪ್ತಿಯಲ್ಲಿ ಮಠ ಮಂದಿರಗಳ ಜೀರ್ಣೋದ್ಧಾರಕ್ಕೆ ಮತ್ತು ನೂತನ ಕಟ್ಟಡಕ್ಕೆ ಹೆಚ್ಚಿನ ಅನುದಾನವನ್ನು ಒದಗಿಸಲಾಗಿದೆ. ಉಳಿದ 25 ಮಠ ಮಂದಿರಗಳಿಗೆ ಶಾಸಕರು ಕಾರ್ಯಾಲಯದಲ್ಲಿ ಅನುದಾನದ ಚೆಕ್ ವಿತರಿಸಿದರು.</p>.<p>ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಮಹಾಂತ ಚಂದಾಪುರ, ನಗರ ಆಶ್ರಯ ಸಮಿತಿ ಅಧ್ಯಕ್ಷ ವಸಂತಕುಮಾರ ಸುರಪುರಕರ್ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-30-1716720150</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>