<p><strong>ಶಹಾಪುರ</strong>: ‘ಕ್ಷಯರೋಗ ಗುಣಪಡಿಸಿಬಹುದಾದ ರೋಗವಾಗಿದೆ. ಆರಂಭಿಕ ಹಂತದಲ್ಲಿಯೇ ಪತ್ತೆ ಹಚ್ಚಿ ಸರಿಯಾದ ಚಿಕಿತ್ಸೆ ಪಡೆದರೆ ಸಂಪೂರ್ಣವಾಗಿ ಗುಣಮುಖರಾಗಲು ಸಾಧ್ಯ’ ಎಂದು ವನದುರ್ಗ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾ ಅಧಿಕಾರಿ ಮಲ್ಲೇಶ ಕುರಕುಂದಿ ತಿಳಿಸಿದರು.<br><br> ತಾಲ್ಲೂಕಿನ ವನದುರ್ಗ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರಾಷ್ಟ್ರೀಯ ಕ್ಷಯ ರೋಗ ನಿರ್ಮೂಲನಾ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಕ್ಷಯರೋಗದ ಪ್ರಮುಖ ಲಕ್ಷಣಗಳೆಂದರೆ, 2 ವಾರಕ್ಕಿಂತ ಹೆಚ್ಚು ನಿರಂತರ ಕೆಮ್ಮು, ಕಫದಲ್ಲಿ ರಕ್ತ ಕಾಣಿಸಿಕೊಳ್ಳುವುದು, ರಾತ್ರಿ ಹೆಚ್ಚು ಬೆವರುವುದು, ತೂಕ ಕಡಿಮೆಯಾಗುವುದು, ನಿರಂತರ ಜ್ವರ, ಉಸಿರಾಟದ ಸಮಸ್ಯೆ, ಎದೆನೋವು ಕಾಣಿಸಿಕೊಳ್ಳುವುದಾಗಿದೆ. ಕ್ಷಯ ರೋಗವು ಸೋಂಕಿನ ವ್ಯಕ್ತಿ ಕೆಮ್ಮಿದಾಗ ಸೂಕ್ಷ್ಮ ವೀವಾಣುಗಳ ಮೂಲಕ ಗಾಳಿಯಲ್ಲಿ ಹರಡುತ್ತದೆ’ ಎಂದರು.</p>.<p>‘ಕ್ಷಯರೋಗಕ್ಕೆ ಸರ್ಕಾರದಿಂದ ಉಚಿತ ಔಷದೋಪಚಾರ, ಮನೆ ಬಾಗಿಲಿಗೆ ಔಷಧಿ ವಿತರಣೆ ನೀಡಲಾಗುತ್ತದೆ’ ಎಂದರು.</p>.<p>ಆರೋಗ್ಯ ಕೇಂದ್ರ ಸಂರಕ್ಷಣಾಧಿಕಾರಿ ವಿಜಯಲಕ್ಷ್ಮಿ, ನೇತ್ರಾವತಿ, ಬಸವರಾಜ ಕಕ್ಕೇರಿ, ಮಲ್ಲಿಕಾರ್ಜುನ ಕುಂಬಾರ, ತಾಯಮ್ಮ, ಮಂಜುಳಾ, ಸುಮಾ, ಶರಬಮ್ಮ, ವೇದಾವತಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಹಾಪುರ</strong>: ‘ಕ್ಷಯರೋಗ ಗುಣಪಡಿಸಿಬಹುದಾದ ರೋಗವಾಗಿದೆ. ಆರಂಭಿಕ ಹಂತದಲ್ಲಿಯೇ ಪತ್ತೆ ಹಚ್ಚಿ ಸರಿಯಾದ ಚಿಕಿತ್ಸೆ ಪಡೆದರೆ ಸಂಪೂರ್ಣವಾಗಿ ಗುಣಮುಖರಾಗಲು ಸಾಧ್ಯ’ ಎಂದು ವನದುರ್ಗ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾ ಅಧಿಕಾರಿ ಮಲ್ಲೇಶ ಕುರಕುಂದಿ ತಿಳಿಸಿದರು.<br><br> ತಾಲ್ಲೂಕಿನ ವನದುರ್ಗ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರಾಷ್ಟ್ರೀಯ ಕ್ಷಯ ರೋಗ ನಿರ್ಮೂಲನಾ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಕ್ಷಯರೋಗದ ಪ್ರಮುಖ ಲಕ್ಷಣಗಳೆಂದರೆ, 2 ವಾರಕ್ಕಿಂತ ಹೆಚ್ಚು ನಿರಂತರ ಕೆಮ್ಮು, ಕಫದಲ್ಲಿ ರಕ್ತ ಕಾಣಿಸಿಕೊಳ್ಳುವುದು, ರಾತ್ರಿ ಹೆಚ್ಚು ಬೆವರುವುದು, ತೂಕ ಕಡಿಮೆಯಾಗುವುದು, ನಿರಂತರ ಜ್ವರ, ಉಸಿರಾಟದ ಸಮಸ್ಯೆ, ಎದೆನೋವು ಕಾಣಿಸಿಕೊಳ್ಳುವುದಾಗಿದೆ. ಕ್ಷಯ ರೋಗವು ಸೋಂಕಿನ ವ್ಯಕ್ತಿ ಕೆಮ್ಮಿದಾಗ ಸೂಕ್ಷ್ಮ ವೀವಾಣುಗಳ ಮೂಲಕ ಗಾಳಿಯಲ್ಲಿ ಹರಡುತ್ತದೆ’ ಎಂದರು.</p>.<p>‘ಕ್ಷಯರೋಗಕ್ಕೆ ಸರ್ಕಾರದಿಂದ ಉಚಿತ ಔಷದೋಪಚಾರ, ಮನೆ ಬಾಗಿಲಿಗೆ ಔಷಧಿ ವಿತರಣೆ ನೀಡಲಾಗುತ್ತದೆ’ ಎಂದರು.</p>.<p>ಆರೋಗ್ಯ ಕೇಂದ್ರ ಸಂರಕ್ಷಣಾಧಿಕಾರಿ ವಿಜಯಲಕ್ಷ್ಮಿ, ನೇತ್ರಾವತಿ, ಬಸವರಾಜ ಕಕ್ಕೇರಿ, ಮಲ್ಲಿಕಾರ್ಜುನ ಕುಂಬಾರ, ತಾಯಮ್ಮ, ಮಂಜುಳಾ, ಸುಮಾ, ಶರಬಮ್ಮ, ವೇದಾವತಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>