ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಈ ಸಂದರ್ಭದಲ್ಲಿ ಮಾತನಾಡಿ, ‘ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗ ಮಹಿಳೆಗೆ ಮೀಸಲಾಗಿದ್ದರೂ ಸಹ ಕಾಂಗ್ರೆಸ್ ಪಕ್ಷದ ಸಿದ್ಧಾಂತದಂತೆ ಸಾಮಾಜಿಕ ನ್ಯಾಯ ಕಲ್ಪಿಸಲು ಅಲ್ಪಸಂಖ್ಯಾತ ಮಹಿಳೆಗೆ ನೀಡಿದೆ. ಅಲ್ಲದೇ, ವಾಲ್ಮೀಕಿ ಜಯಂತ್ಯುತ್ಸವ ಸಂಭ್ರಮದಲ್ಲಿ ಪರಿಶಿಷ್ಟ ಪಂಗಡದ ಭೀಮಬಾಯಿ ದೇವೀಂದ್ರ ಅವರಿಗೆ ಉಪಾಧ್ಯಕ್ಷ ಸ್ಥಾನ ನೀಡಲಾಗಿದೆ. ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು ಎಲ್ಲಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಆಡಳಿತ ನಡೆಸಬೇಕು. ನಗರದ ಅಭಿವೃದ್ಧಿಗೆ ಶ್ರಮಿಸಬೇಕು’ ಎಂದು ಸಲಹೆ ನೀಡಿದರು.