‘ಕಳೆದ ವರ್ಷ ನಕಲಿ ಹತ್ತಿ ಬೀಜ ಬಿತ್ತನೆ ಮಾಡಿ ರೈತರು ನಷ್ಟ ಅನುಭವಿಸಿದ್ದರು. ಈಗ ಮತ್ತೆ ನಕಲಿ ಬೀಜ ಮಾರಾಟದ ಶಂಕೆ ಇದ್ದು, ಅಧಿಕಾರಿಗಳು ಕ್ರಮವಹಿಸುತ್ತಿಲ್ಲ. ಅಂಥ ಮಳಿಗೆಗಳ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳು ಇಲ್ಲದ ನೆಪ ಹೇಳಿ ಜಾರಿಕೊಳ್ಳುತ್ತಿದ್ದಾರೆ. ನಕಲಿ ಬೀಜ ಮಾರಾಟ ಮಾಡಿದ ಕಂಪನಿಯ ವಿರುದ್ಧ ದೂರು ದಾಖಲಾಗಿ ಎಂಟು ತಿಂಗಳಾದರೂ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಮೃದು ಧೋರಣೆ ತಾಳಿದ್ದಾರೆ’ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಕಾರ್ಯದರ್ಶಿ ಚೆನ್ನಪ್ಪ ಆನೇಗುಂದಿ ಆರೋಪಿಸಿದರು.