4 ತಿಂಗಳು ಕಳೆದರೂ ಬಾರದ ವರದಿ
ಶಹಾಪುರ: ನಗರದ ಐಡಿಎಸ್ಎಂಟಿ ಯೋಜನೆಯಡಿ 15ಕ್ಕೂ ಹೆಚ್ಚು ನಿವೇಶನಗಳನ್ನು ಅಕ್ರಮವಾಗಿ ಕೆಲ ವ್ಯಕ್ತಿಗಳಿಗೆ ಉಪನೋಂದಣಿ ಕಚೇರಿಯಲ್ಲಿ ನೋಂದಣಿ ಮಾಡಲಾಗಿದೆ ಎಂದು ಸಾರ್ವಜನಿಕರಿಂದ ದೂರು ಕೇಳಿ ಬಂದಿತ್ತು. ಈ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಅಂದಿನ ನಗರಸಭೆಯ ಆಡಳಿತಾಧಿಕಾರಿ ಹಾಗೂ ಐಡಿಎಸ್ಎಂಟಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಬಿ.ಸುಶೀಲಾ ಆದೇಶಿಸಿದ್ದರು.
ಜಿಲ್ಲಾಧಿಕಾರಿ ಕಂದಾಯ ಇಲಾಖೆಯ ಅಧಿಕಾರಿಗಳ ತಂಡ ರಚಿಸಿ ಅಕ್ರಮ ನಿವೇಶನ ನೋಂದಣಿಯಾಗಿರುವ ಬಗ್ಗೆ ಪತ್ತೆ ಹಚ್ಚಿ ವರದಿ ನೀಡುವಂತೆ ಸೂಚಿಸಿ ನಾಲ್ಕು ತಿಂಗಳು ಕಳೆದರೂ ಕಂದಾಯ ಇಲಾಖೆಯ ತಂಡವು ವರದಿಯನ್ನು ನೀಡಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.