<p><strong>ಯಾದಗಿರಿ: </strong>ವಚನ ಸಾಹಿತ್ಯ ಕನ್ನಡ ಸಾಹಿತ್ಯದ ತಾಯಿಬೇರು ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಅಪ್ಪಾರಾವ ಅಕ್ಕೋಣಿ ಹೇಳಿದರು.</p>.<p>ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ವತಿಯಿಂದ ನಗರದಲ್ಲಿ ಭಾನುವಾರ ಏರ್ಪಡಿಸಿದ್ದ ಡಾ.ಪ್ರದೀಪ ಕುಮಾರ ಹೆಬ್ರಿ ರಚಿಸಿರುವ ‘ಶರಣ ಶ್ರೇಷ್ಠರು’ ಕೃತಿ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಶರಣರು ರಚಿಸಿದ ವಚನಗಳು ಸರಳವಾಗಿದ್ದವು. ಅವು ಜನಸಾಮಾನ್ಯರಿಗೆ ಸುಲಭವಾಗಿ ಅರ್ಥವಾಗುತ್ತಿದ್ದವು. ಜಗತ್ತಿನ ಎಲ್ಲ ಕ್ರಾಂತಿಗಳಿಗಿಂತ ವಚನ ಕ್ರಾಂತಿ ಶ್ರೇಷ್ಠ ಎಂದು ಅಭಿಪ್ರಾಯಪಟ್ಟರು.</p>.<p>ವಚನಕಾರರು ಕೇವಲ ಬೋಧನೆ ಮಾಡಲಿಲ್ಲ. ನುಡಿದಂತೆ ನಡೆದರು. ಆದರೆ, ಇಂದು ನಡೆ, ನುಡಿ ಒಂದೇ ಆಗಿರುವವರು ಸಿಗುವುದು ಕಷ್ಟ ಎಂದರು.</p>.<p>ಪ್ರಸ್ತುತ ದಿನಗಳಲ್ಲಿ ಮಠಗಳು ಶಾಲೆ, ಕಾಲೇಜುಗಳನ್ನು ಕಟ್ಟುವ ಅಗತ್ಯವಿಲ್ಲ. ಬದಲಿಗೆ ಧರ್ಮದ ಮಾರ್ಗದಲ್ಲಿ ನಡೆಯುವಂತೆ ಜನರಿಗೆ ಮಾರ್ಗದರ್ಶನ ಮಾಡಬೇಕು ಎಂದು ಹೇಳಿದರು.</p>.<p>ಶಾಸಕ ನಾಗನಗೌಡ ಕಂದಕೂರ ಮಾತನಾಡಿ, ಪುಸ್ತಕಗಳನ್ನು ಖರೀದಿಸಿ ಓದುವುದರಿಂದ ಸಾಹಿತಿಗಳನ್ನು ಪ್ರೋತ್ಸಾಹಿಸಿದಂತಾಗುತ್ತದೆ. ಓದುವುದರಿಂದ ಏಕಾಗ್ರತೆ ಸಾಧಿಸಬಹುದು ಎಂದರು.</p>.<p>ಇಂದಿನ ಆಧುನಿಕ ತಂತ್ರಜ್ಞಾನಗಳ ಭರಾಟೆಯಲ್ಲಿಯೂ ಪುಸ್ತಕ ಓದುವವರ ಸಂಖ್ಯೆ ಕಡಿಮೆ ಆಗಿಲ್ಲ ಎಂಬುದು ಸಮಾಧಾನಕರ ಸಂಗತಿ ಎಂದು ಅಭಿಪ್ರಾಯಪಟ್ಟರು.</p>.<p>ಶರಣರು ತಮ್ಮ ಅನುಭವಗಳನ್ನು ವಚನಗಳ ಮೂಲಕ ದಾಖಲಿಸಿದರು. ಕಾಯಕ, ದಾಸೋಹಕ್ಕೆ ಶರಣರು ಮಹತ್ವ ನೀಡಿದರು. ಶರಣರ ವಿಚಾರಗಳು ಇಂದಿಗೂ ಪ್ರಸ್ತುತವಾಗಿವೆ ಎಂದರು.</p>.<p>ವಚನಗಳನ್ನು ಮಕ್ಕಳಿಗೆ ತಿಳಿಸುವ ಅಗತ್ಯವಿದೆ. ಇದರಿಂದ ಮಕ್ಕಳಲ್ಲಿ ಉತ್ತಮ ಮೌಲ್ಯಗಳನ್ನು ಬೆಳೆಸಿದಂತಾಗುತ್ತದೆ ಎಂದು ಅಭಿಪ್ರಾಯಪಟ್ಟರು.</p>.<p>ಸಾಹಿತಿ ಡಾ.ಪ್ರದೀಪಕುಮಾರ್ ಹೆಬ್ರಿ ಮಾತನಾಡಿ, ವಚನಗಳು ಸಾಹಿತ್ಯದ ರತ್ನಗಳಾಗಿವೆ. ಅವುಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಅಗತ್ಯ ಇದೆ ಎಂದರು.</p>.<p>ಶರಣ ಸಂಸ್ಕೃತಿ ಈ ನೆಲದ ಶ್ರೇಷ್ಠ ಸಂಸ್ಕೃತಿ ಆಗಿದೆ. ವಚನಗಳಲ್ಲಿ ಮಾನವೀಯ ಮೌಲ್ಯಗಳು ಅಡಗಿವೆ. ಎಲ್ಲ ಶಾಲೆಗಳು, ಗ್ರಾಮ ಪಂಚಾಯಿತಿಗಳಿಗೆ ವಚನಗಳ ಕೃತಿಯನ್ನು ನೀಡಬೇಕು ಎಂದು ಹೇಳಿದರು.</p>.<p>ಪೋಷಕರು ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸಿದರೆ ಅದು ಬದುಕಿನುದ್ದಕ್ಕೂ ಅವರನ್ನು ಕಾಪಾಡುತ್ತದೆ. ಆ ಸಂಸ್ಕಾರ ವಚನಗಳನ್ನು ಓದುವುದರಿಂದ ಸಿಗುತ್ತದೆ. ಶರಣರು ಶ್ರೇಷ್ಠರು ಎಂದು ಹೇಳುವ ಬದಲು ಅವರ ಶ್ರೇಷ್ಠವಾದ ವಚನಗಳನ್ನು ಓದಬೇಕು ಎಂದರು.</p>.<p>ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಸಿದ್ದಪ್ಪ ಎಸ್.ಹೊಟ್ಟಿ, ಚಂದ್ರಕಾಂತ ಕರದಳ್ಳಿ, ಲಿಂಗಣ್ಣ ಪಡಶೆಟ್ಟಿ, ರಾಜನಗೌಡ ಮುದ್ನಾಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ: </strong>ವಚನ ಸಾಹಿತ್ಯ ಕನ್ನಡ ಸಾಹಿತ್ಯದ ತಾಯಿಬೇರು ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಅಪ್ಪಾರಾವ ಅಕ್ಕೋಣಿ ಹೇಳಿದರು.</p>.<p>ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ವತಿಯಿಂದ ನಗರದಲ್ಲಿ ಭಾನುವಾರ ಏರ್ಪಡಿಸಿದ್ದ ಡಾ.ಪ್ರದೀಪ ಕುಮಾರ ಹೆಬ್ರಿ ರಚಿಸಿರುವ ‘ಶರಣ ಶ್ರೇಷ್ಠರು’ ಕೃತಿ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಶರಣರು ರಚಿಸಿದ ವಚನಗಳು ಸರಳವಾಗಿದ್ದವು. ಅವು ಜನಸಾಮಾನ್ಯರಿಗೆ ಸುಲಭವಾಗಿ ಅರ್ಥವಾಗುತ್ತಿದ್ದವು. ಜಗತ್ತಿನ ಎಲ್ಲ ಕ್ರಾಂತಿಗಳಿಗಿಂತ ವಚನ ಕ್ರಾಂತಿ ಶ್ರೇಷ್ಠ ಎಂದು ಅಭಿಪ್ರಾಯಪಟ್ಟರು.</p>.<p>ವಚನಕಾರರು ಕೇವಲ ಬೋಧನೆ ಮಾಡಲಿಲ್ಲ. ನುಡಿದಂತೆ ನಡೆದರು. ಆದರೆ, ಇಂದು ನಡೆ, ನುಡಿ ಒಂದೇ ಆಗಿರುವವರು ಸಿಗುವುದು ಕಷ್ಟ ಎಂದರು.</p>.<p>ಪ್ರಸ್ತುತ ದಿನಗಳಲ್ಲಿ ಮಠಗಳು ಶಾಲೆ, ಕಾಲೇಜುಗಳನ್ನು ಕಟ್ಟುವ ಅಗತ್ಯವಿಲ್ಲ. ಬದಲಿಗೆ ಧರ್ಮದ ಮಾರ್ಗದಲ್ಲಿ ನಡೆಯುವಂತೆ ಜನರಿಗೆ ಮಾರ್ಗದರ್ಶನ ಮಾಡಬೇಕು ಎಂದು ಹೇಳಿದರು.</p>.<p>ಶಾಸಕ ನಾಗನಗೌಡ ಕಂದಕೂರ ಮಾತನಾಡಿ, ಪುಸ್ತಕಗಳನ್ನು ಖರೀದಿಸಿ ಓದುವುದರಿಂದ ಸಾಹಿತಿಗಳನ್ನು ಪ್ರೋತ್ಸಾಹಿಸಿದಂತಾಗುತ್ತದೆ. ಓದುವುದರಿಂದ ಏಕಾಗ್ರತೆ ಸಾಧಿಸಬಹುದು ಎಂದರು.</p>.<p>ಇಂದಿನ ಆಧುನಿಕ ತಂತ್ರಜ್ಞಾನಗಳ ಭರಾಟೆಯಲ್ಲಿಯೂ ಪುಸ್ತಕ ಓದುವವರ ಸಂಖ್ಯೆ ಕಡಿಮೆ ಆಗಿಲ್ಲ ಎಂಬುದು ಸಮಾಧಾನಕರ ಸಂಗತಿ ಎಂದು ಅಭಿಪ್ರಾಯಪಟ್ಟರು.</p>.<p>ಶರಣರು ತಮ್ಮ ಅನುಭವಗಳನ್ನು ವಚನಗಳ ಮೂಲಕ ದಾಖಲಿಸಿದರು. ಕಾಯಕ, ದಾಸೋಹಕ್ಕೆ ಶರಣರು ಮಹತ್ವ ನೀಡಿದರು. ಶರಣರ ವಿಚಾರಗಳು ಇಂದಿಗೂ ಪ್ರಸ್ತುತವಾಗಿವೆ ಎಂದರು.</p>.<p>ವಚನಗಳನ್ನು ಮಕ್ಕಳಿಗೆ ತಿಳಿಸುವ ಅಗತ್ಯವಿದೆ. ಇದರಿಂದ ಮಕ್ಕಳಲ್ಲಿ ಉತ್ತಮ ಮೌಲ್ಯಗಳನ್ನು ಬೆಳೆಸಿದಂತಾಗುತ್ತದೆ ಎಂದು ಅಭಿಪ್ರಾಯಪಟ್ಟರು.</p>.<p>ಸಾಹಿತಿ ಡಾ.ಪ್ರದೀಪಕುಮಾರ್ ಹೆಬ್ರಿ ಮಾತನಾಡಿ, ವಚನಗಳು ಸಾಹಿತ್ಯದ ರತ್ನಗಳಾಗಿವೆ. ಅವುಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಅಗತ್ಯ ಇದೆ ಎಂದರು.</p>.<p>ಶರಣ ಸಂಸ್ಕೃತಿ ಈ ನೆಲದ ಶ್ರೇಷ್ಠ ಸಂಸ್ಕೃತಿ ಆಗಿದೆ. ವಚನಗಳಲ್ಲಿ ಮಾನವೀಯ ಮೌಲ್ಯಗಳು ಅಡಗಿವೆ. ಎಲ್ಲ ಶಾಲೆಗಳು, ಗ್ರಾಮ ಪಂಚಾಯಿತಿಗಳಿಗೆ ವಚನಗಳ ಕೃತಿಯನ್ನು ನೀಡಬೇಕು ಎಂದು ಹೇಳಿದರು.</p>.<p>ಪೋಷಕರು ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸಿದರೆ ಅದು ಬದುಕಿನುದ್ದಕ್ಕೂ ಅವರನ್ನು ಕಾಪಾಡುತ್ತದೆ. ಆ ಸಂಸ್ಕಾರ ವಚನಗಳನ್ನು ಓದುವುದರಿಂದ ಸಿಗುತ್ತದೆ. ಶರಣರು ಶ್ರೇಷ್ಠರು ಎಂದು ಹೇಳುವ ಬದಲು ಅವರ ಶ್ರೇಷ್ಠವಾದ ವಚನಗಳನ್ನು ಓದಬೇಕು ಎಂದರು.</p>.<p>ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಸಿದ್ದಪ್ಪ ಎಸ್.ಹೊಟ್ಟಿ, ಚಂದ್ರಕಾಂತ ಕರದಳ್ಳಿ, ಲಿಂಗಣ್ಣ ಪಡಶೆಟ್ಟಿ, ರಾಜನಗೌಡ ಮುದ್ನಾಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>