ಕಕ್ಕೇರಾ: ಇಲ್ಲಿಗೆ ಸಮೀಪದ ಬೋನಾಳದ ಖಾಸಗಿ ಆಸ್ಪತ್ರೆಗಳಿಗೆ ಹಾಗೂ ಔಷಧಿ ಅಂಗಡಿಗಳಿಗೆ ಉಪ ತಹಶೀಲ್ದಾರ್ ರೇವಪ್ಪ ತೆಗ್ಗಿಮನಿ ಭೇಟಿ ನೀಡಿ ಪರಿಶೀಲಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,‘ಕೆಮ್ಮು, ಜ್ವರ, ನೆಗಡಿ ಸೇರಿದಂತೆ ಇನ್ನಿತರ ಕಾಯಿಲೆಯ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ರೋಗಿಗಳ ವೈಯಕ್ತಿಕ ಮಾಹಿತಿ ದಾಖಲಿಸಿಕೊಂಡು ಸರ್ಕಾರಿ ಆಸ್ಪತ್ರೆಗೆ ಕಳುಹಿಸಿಕೊಡಬೇಕು. ಖಾಸಗಿ ಆಸ್ಪತ್ರೆಗಳನ್ನು ಸಂಪೂರ್ಣ ಬಂದ್ ಮಾಡಬೇಕು’ ಎಂದು ಹೇಳಿದರು.
ಗ್ರಾಮ ಸಹಾಯಕರಾದ ಮದನ್ಸಾಬ ಹಾಗೂ ಅಲ್ಲಾಭಕ್ಷ ಶ್ಯಾನಿ ಇದ್ದರು.