<p><strong>ಶಹಾಪುರ (ಯಾದಗಿರಿ ಜಿಲ್ಲೆ):</strong> ತಾಲ್ಲೂಕಿನ ಶಿರವಾಳ ಗ್ರಾಮದಲ್ಲಿ ಮೊಹರಂ ಹಬ್ಬದ ಕೊನೆ ದಿನ ಮಂಗಳವಾರ ರಾತ್ರಿ ‘ದೇವರ ದಫನ್’ ಮಾಡಿ ಮನೆಗೆ ಬರುತ್ತಿರುವಾಗ ಕುರುಬ ಹಾಗೂ ಮಾದಿಗ ಸಮುದಾಯದವರ ಮಧ್ಯೆ ಕಲ್ಲು ತೂರಾಟ ನಡೆದಿದೆ.</p>.<p>ಮರೆಮ್ಮ, ಮಲ್ಲಪ್ಪ ಪೂಜಾರಿ ಎನ್ನುವವರು ಗಾಯಗೊಂಡಿದ್ದು, ಶಹಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>‘ದೇವರ ದಫನ್’ ಮಾಡಿ ಮನೆ ಕಡೆ ಬರುತ್ತಿರುವಾಗ ಕುರುಬ ಸಮುದಾಯದ ಯುವಕ ಮಾದಿಗ ಸಮಾಜದ ವ್ಯಕ್ತಿಯೊಬ್ಬರ ಕಾಲು ತುಳಿದಿದ್ದಾರೆ. ಇದರಿಂದ ಮಾದಿಗ ಸಮುದಾಯದವರು ಕೋಪಗೊಂಡು ಮಾತಿಗೆ ಮಾತು ಬೆಳೆದು ಕಲ್ಲು ತೂರಾಟವಾಗಿದೆ’ ಎಂದು ಪೊಲೀಸರು ತಿಳಿಸಿದರು.</p>.<p>ಸುದ್ದಿ ತಿಳಿದ ತಕ್ಷಣ ಡಿವೈಎಸ್ಪಿ ಶಿವಣ್ಣಗೌಡ ಪಾಟೀಲ ಭೇಟಿ ನೀಡಿ ಪರಿಸ್ಥಿತಿ ತಹಬಂದಿಗೆ ತಂದಿದ್ದಾರೆ. ಗ್ರಾಮದಲ್ಲಿ ಬಿಗುವಿನ ವಾತಾವರಣ ಇದೆ. ಮುಂಜಾಗ್ರತಾ ಕ್ರಮವಾಗಿ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.</p>.<p>ಕುರುಬ ಸಮುದಾಯದ 15 ಜನ ಹಾಗೂ ಇನ್ನಿತರರ ಮೇಲೆ ಭೀಮರಾಯನಗುಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಹಾಪುರ (ಯಾದಗಿರಿ ಜಿಲ್ಲೆ):</strong> ತಾಲ್ಲೂಕಿನ ಶಿರವಾಳ ಗ್ರಾಮದಲ್ಲಿ ಮೊಹರಂ ಹಬ್ಬದ ಕೊನೆ ದಿನ ಮಂಗಳವಾರ ರಾತ್ರಿ ‘ದೇವರ ದಫನ್’ ಮಾಡಿ ಮನೆಗೆ ಬರುತ್ತಿರುವಾಗ ಕುರುಬ ಹಾಗೂ ಮಾದಿಗ ಸಮುದಾಯದವರ ಮಧ್ಯೆ ಕಲ್ಲು ತೂರಾಟ ನಡೆದಿದೆ.</p>.<p>ಮರೆಮ್ಮ, ಮಲ್ಲಪ್ಪ ಪೂಜಾರಿ ಎನ್ನುವವರು ಗಾಯಗೊಂಡಿದ್ದು, ಶಹಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>‘ದೇವರ ದಫನ್’ ಮಾಡಿ ಮನೆ ಕಡೆ ಬರುತ್ತಿರುವಾಗ ಕುರುಬ ಸಮುದಾಯದ ಯುವಕ ಮಾದಿಗ ಸಮಾಜದ ವ್ಯಕ್ತಿಯೊಬ್ಬರ ಕಾಲು ತುಳಿದಿದ್ದಾರೆ. ಇದರಿಂದ ಮಾದಿಗ ಸಮುದಾಯದವರು ಕೋಪಗೊಂಡು ಮಾತಿಗೆ ಮಾತು ಬೆಳೆದು ಕಲ್ಲು ತೂರಾಟವಾಗಿದೆ’ ಎಂದು ಪೊಲೀಸರು ತಿಳಿಸಿದರು.</p>.<p>ಸುದ್ದಿ ತಿಳಿದ ತಕ್ಷಣ ಡಿವೈಎಸ್ಪಿ ಶಿವಣ್ಣಗೌಡ ಪಾಟೀಲ ಭೇಟಿ ನೀಡಿ ಪರಿಸ್ಥಿತಿ ತಹಬಂದಿಗೆ ತಂದಿದ್ದಾರೆ. ಗ್ರಾಮದಲ್ಲಿ ಬಿಗುವಿನ ವಾತಾವರಣ ಇದೆ. ಮುಂಜಾಗ್ರತಾ ಕ್ರಮವಾಗಿ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.</p>.<p>ಕುರುಬ ಸಮುದಾಯದ 15 ಜನ ಹಾಗೂ ಇನ್ನಿತರರ ಮೇಲೆ ಭೀಮರಾಯನಗುಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>