<p><strong>ಶಿರವಾಳ (ಶಹಾಪುರ):</strong> ಗ್ರಾಮವು ಭೀಮಾ ನದಿಯಿಂದ ಕೇವಲ ಎರಡು ಕಿ.ಮೀ ದೂರ ಇದೆ. ಆದರೆ ಗ್ರಾಮ ಪಂಚಾಯಿತಿಯ ನಿರ್ವಹಣೆಯ ಸಮಸ್ಯೆಯಿಂದಾಗಿ ಗ್ರಾಮಸ್ಥರು ಗ್ರಾಮಕ್ಕೆ ಹೊಂದಿಕೊಂಡಿರುವ ಹಳ್ಳದ ನೀರನ್ನು ಕುಡಿಯಲು ಉಪಯೋಗಿಸುತ್ತಾರೆ. ಮಳೆಗಾಲ ಆರಂಭವಾಗಿದ್ದರಿಂದ ಕಲುಷಿತ ನೀರು ಸೇವನೆಯಿಂದ ಸಾಂಕ್ರಾಮಿಕ ರೋಗದ ಭೀತಿ ಗ್ರಾಮಸ್ಥರಿಗೆ ಕಾಡುತ್ತಲಿದೆ.</p>.<p>‘ಸಾಕಷ್ಟು ಹಣ ವೆಚ್ಚ ಮಾಡಿ ಭೀಮಾ ನದಿಯಿಂದ ಕುಡಿಯುವ ನೀರು ಸರಬರಾಜು ಮಾಡುವ ವ್ಯವಸ್ಥೆಯನ್ನು ಮಾಡಲಾಗಿತ್ತು. ಆದರೆ ಗ್ರಾಮ ಪಂಚಾಯಿತಿ ಸಿಬ್ಬಂದಿಯಿಂದ ಸಮರ್ಪಕವಾಗಿ ನೀರು ನಿರ್ವಹಣೆ ಮಾಡುತ್ತಿಲ್ಲ. ಸಾಕಷ್ಟು ನೀರಿನ ಲಭ್ಯತೆ ಇದ್ದರೂ ಸಹ ಕೃತಕ ಅಭಾವ ಸೃಷ್ಟಿಯಾಗಿದೆ. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಾತ್ರ ಕಚೇರಿಗೆ ಆಗಮಿಸುವುದಿಲ್ಲ. ಗ್ರಾಮದ ಸಮಸ್ಯೆಯನ್ನು ಯಾರ ಮುಂದೆ ಹೇಳಬೇಕು ಎಂದು ಪ್ರಶ್ನಿಸುತ್ತಾರೆ‘ ಗ್ರಾಮದ ನಿವಾಸಿ ಶಾಂತಪ್ಪ ಮ್ಯಾಗೇರಿ.</p>.<p>ಗ್ರಾಮದ ವಾರ್ಡ್ ನಂಬರ್ 3,4,5 ರಲ್ಲಿ ನೀರಿನ ಸಮಸ್ಯೆ ತುಂಬಾ ಕಾಡುತ್ತಲಿದೆ. ಹಳ್ಳದ ನೀರು ಕುಡಿಯಲು ಉಪಯೋಗಿಸುವಂತೆ ಆಗಿದೆ. ಈಗ ಮಳೆಗಾಲ ಆರಂಭವಾಗಿದೆ. ಹಳ್ಳದಲ್ಲಿ ದುರ್ವಾಸನೆ ಕಲುಷಿತ ನೀರು ಹರಿದು ಬರುತ್ತಿರುವುದರಿಂದ ನೀರು ಸೇವನೆಯಿಂದ ಸಾಂಕ್ರಾಮಿಕ ರೋಗ ಹರಡುವ ಭೀತಿ ನಮ್ಮನ್ನು ಕಾಡುತ್ತಲಿದೆ. ಹಲವು ವರ್ಷದ ಹಿಂದೆ ನಿರ್ಮಿಸಿದ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ನಿಂತಿದೆ. ಹನಿ ನೀರು ಬಂದಿಲ್ಲ. ಸಮರ್ಪಕವಾದ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ರಸ್ತೆಯ ತುಂಬೆಲ್ಲ ಚರಂಡಿ ನೀರು ಹರಿಯುತ್ತಲಿವೆ. ಅಲ್ಲದೆ ಚರಂಡಿ ವ್ಯವಸ್ಥೆ ಇರುವ ಕಡೆ ಹೂಳು ತುಂಬಿಕೊಂಡಿವೆ ಎಂದು ಗ್ರಾಮಸ್ಥರು ಆರೋಪಿಸಿದರು.</p>.<p>ಗ್ರಾಮಕ್ಕೆ ತಕ್ಷಣ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಗ್ರಾಮದ ಜನತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರವಾಳ (ಶಹಾಪುರ):</strong> ಗ್ರಾಮವು ಭೀಮಾ ನದಿಯಿಂದ ಕೇವಲ ಎರಡು ಕಿ.ಮೀ ದೂರ ಇದೆ. ಆದರೆ ಗ್ರಾಮ ಪಂಚಾಯಿತಿಯ ನಿರ್ವಹಣೆಯ ಸಮಸ್ಯೆಯಿಂದಾಗಿ ಗ್ರಾಮಸ್ಥರು ಗ್ರಾಮಕ್ಕೆ ಹೊಂದಿಕೊಂಡಿರುವ ಹಳ್ಳದ ನೀರನ್ನು ಕುಡಿಯಲು ಉಪಯೋಗಿಸುತ್ತಾರೆ. ಮಳೆಗಾಲ ಆರಂಭವಾಗಿದ್ದರಿಂದ ಕಲುಷಿತ ನೀರು ಸೇವನೆಯಿಂದ ಸಾಂಕ್ರಾಮಿಕ ರೋಗದ ಭೀತಿ ಗ್ರಾಮಸ್ಥರಿಗೆ ಕಾಡುತ್ತಲಿದೆ.</p>.<p>‘ಸಾಕಷ್ಟು ಹಣ ವೆಚ್ಚ ಮಾಡಿ ಭೀಮಾ ನದಿಯಿಂದ ಕುಡಿಯುವ ನೀರು ಸರಬರಾಜು ಮಾಡುವ ವ್ಯವಸ್ಥೆಯನ್ನು ಮಾಡಲಾಗಿತ್ತು. ಆದರೆ ಗ್ರಾಮ ಪಂಚಾಯಿತಿ ಸಿಬ್ಬಂದಿಯಿಂದ ಸಮರ್ಪಕವಾಗಿ ನೀರು ನಿರ್ವಹಣೆ ಮಾಡುತ್ತಿಲ್ಲ. ಸಾಕಷ್ಟು ನೀರಿನ ಲಭ್ಯತೆ ಇದ್ದರೂ ಸಹ ಕೃತಕ ಅಭಾವ ಸೃಷ್ಟಿಯಾಗಿದೆ. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಾತ್ರ ಕಚೇರಿಗೆ ಆಗಮಿಸುವುದಿಲ್ಲ. ಗ್ರಾಮದ ಸಮಸ್ಯೆಯನ್ನು ಯಾರ ಮುಂದೆ ಹೇಳಬೇಕು ಎಂದು ಪ್ರಶ್ನಿಸುತ್ತಾರೆ‘ ಗ್ರಾಮದ ನಿವಾಸಿ ಶಾಂತಪ್ಪ ಮ್ಯಾಗೇರಿ.</p>.<p>ಗ್ರಾಮದ ವಾರ್ಡ್ ನಂಬರ್ 3,4,5 ರಲ್ಲಿ ನೀರಿನ ಸಮಸ್ಯೆ ತುಂಬಾ ಕಾಡುತ್ತಲಿದೆ. ಹಳ್ಳದ ನೀರು ಕುಡಿಯಲು ಉಪಯೋಗಿಸುವಂತೆ ಆಗಿದೆ. ಈಗ ಮಳೆಗಾಲ ಆರಂಭವಾಗಿದೆ. ಹಳ್ಳದಲ್ಲಿ ದುರ್ವಾಸನೆ ಕಲುಷಿತ ನೀರು ಹರಿದು ಬರುತ್ತಿರುವುದರಿಂದ ನೀರು ಸೇವನೆಯಿಂದ ಸಾಂಕ್ರಾಮಿಕ ರೋಗ ಹರಡುವ ಭೀತಿ ನಮ್ಮನ್ನು ಕಾಡುತ್ತಲಿದೆ. ಹಲವು ವರ್ಷದ ಹಿಂದೆ ನಿರ್ಮಿಸಿದ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ನಿಂತಿದೆ. ಹನಿ ನೀರು ಬಂದಿಲ್ಲ. ಸಮರ್ಪಕವಾದ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ರಸ್ತೆಯ ತುಂಬೆಲ್ಲ ಚರಂಡಿ ನೀರು ಹರಿಯುತ್ತಲಿವೆ. ಅಲ್ಲದೆ ಚರಂಡಿ ವ್ಯವಸ್ಥೆ ಇರುವ ಕಡೆ ಹೂಳು ತುಂಬಿಕೊಂಡಿವೆ ಎಂದು ಗ್ರಾಮಸ್ಥರು ಆರೋಪಿಸಿದರು.</p>.<p>ಗ್ರಾಮಕ್ಕೆ ತಕ್ಷಣ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಗ್ರಾಮದ ಜನತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>