ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಡ ಮಕ್ಕಳ ಬಾಳಿಗೆ ಬೆಳಕಾದ ಶಿವಕುಮಾರ ಸ್ವಾಮೀಜಿ- ಮಲ್ಲಿಕಾರ್ಜುನ ಅಲ್ಲಿಪುರ

Last Updated 21 ಜನವರಿ 2022, 12:15 IST
ಅಕ್ಷರ ಗಾತ್ರ

ಸೈದಾಪುರ: ‘ಶಿವಕುಮಾರ ಸ್ವಾಮೀಜಿ ಅನ್ನ, ಅಕ್ಷರ, ಆಶ್ರಯ ವ್ಯವಸ್ಥೆ ನೀಡಿ ಬಡ ಮಕ್ಕಳ ಬಾಳಿಗೆ ಬೆಳಕಾಗಿ ತ್ರಿವಿಧ ದಾಸೋಹಿ ಎಂದು ಪ್ರಖ್ಯಾತಿ ಗಳಿಸಿದ್ದರು’ ಎಂದು ಪ್ರಜ್ಞಾ ಕೈಗಾರಿಕಾ ತರಬೇತಿ ಸಂಸ್ಥೆಯ ಅಧ್ಯಕ್ಷ ಮಲ್ಲಿಕಾರ್ಜುನ ಅಲ್ಲಿಪುರ ಅಭಿಪ್ರಾಯಪಟ್ಟರು.

ಪಟ್ಟಣದ ಪ್ರಜ್ಞಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ನಡೆದ ಡಾ. ಶಿವಕುಮಾರ ಸ್ವಾಮೀಜಿ ಪುಣ್ಯಸ್ಮರಣೆ ಹಾಗೂ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಶಿವಕುಮಾರ ಸ್ವಾಮೀಜಿ ಅವರು ಶಿಕ್ಷಣ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ನೀಡುವ ಮೂಲಕ ಸಮಾಜದಲ್ಲಿನ ಅಂಧಕಾರ ತೊಡೆದು ಹಾಕಿ, ದೇಶದ ಮನೆ ಮನೆಗಳಲ್ಲಿ ಜ್ಞಾನದ ಪ್ರಜ್ವಲ ಜ್ಯೋತಿ ಸದಾ ಬೆಳಗುವಂತೆ ಮಾಡಿ ಹೋಗಿದ್ದಾರೆ. ಲಕ್ಷಾಂತರ ಹಸಿದ ಬಡ ಮಕ್ಕಳಿಗೆ ಅನ್ನವನ್ನಿಟ್ಟು ಧರ್ಮದ ಉಳಿವಿಗೆ ಕಾರಣರಾಗಿದ್ದಾರೆ ಎಂದು ಹೇಳಿದರು.

ಕಿರಿಯ ತರಬೇತಿ ಅಧಿಕಾರಿಗಳಾದ ಭೀಮಣ್ಣ ಮಡಿವಾಳಕರ್, ಶಂಕರ್ ರೆಡ್ಡಿ ಗೌಡ ಬಿಳ್ಹಾರ, ಮಹಾದೇವಪ್ಪ ದದ್ದಲ್, ಪರ್ವತರೆಡ್ಡಿ ದದ್ದಲ್, ವೆಂಕಟರೆಡ್ಡಿ ಮಡಿವಾಳ, ಮಲ್ಲಿಕಾರ್ಜುನ ಕಣೇಕಲ್ ಸೇರಿದಂತೆ ಇತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT