<p><strong>ಸುರಪುರ</strong>: ಮತಕ್ಷೇತ್ರದ ಕನ್ನೆಳ್ಳಿ ಗ್ರಾಮದಲ್ಲಿ ಜಲಜೀವನ ಮಿಷನ್ ಯೋಜನೆಯ ಕಾಮಗಾರಿಗೆ ಶಾಸಕ ರಾಜಾ ವೇಣುಗೋಪಾಲ ನಾಯಕ ಗುರುವಾರ ಭೂಮಿ ಪೂಜೆ ನೆರವೇರಿಸಿದರು.</p>.<p>ಬಳಿಕ ಮಾತನಾಡಿದ ಅವರು, ‘ಜಲಜೀವನ ಮಿಷನ್ ಯೋಜನೆಯ ಅಡಿಯಲ್ಲಿ ಮನೆಮನೆಗೆ ನಲ್ಲಿ ಅಳವಡಿಸುವ ಹಾಗೂ ಪೈಪ್ಲೈನ್ ನಿರ್ಮಿಸುವ ಯೋಜನೆಯ ₹ 2 ಕೋಟಿ ವೆಚ್ಚದ ಕಾಮಗಾರಿ ಇದಾಗಿದೆ. ಈ ಕಾಮಗಾರಿಯಿಂದ ಗ್ರಾಮದಲ್ಲಿ ಸಮರ್ಪಕ ಕುಡಿಯುವ ನೀರಿನ ಸೌಲಭ್ಯ ದೊರಕಲಿದೆ’ ಎಂದು ಹೇಳಿದರು.</p>.<p>‘ಸಂಬಂಧಿಸಿದವರು ಗುಣಮಟ್ಟದೊಂದಿಗೆ ಅಚ್ಚುಕಟ್ಟಾಗಿ, ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು. ಸಂಬಂಧಿಸಿದ ಇಲಾಖೆಯವರು ಕಾಮಗಾರಿ ಪರಿಶೀಲಿಸಬೇಕು. ಗೊತ್ತುಪಡಿಸಿದ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸಲು ಕ್ರಮ ವಹಿಸಬೇಕು’ ಎಂದು ತಿಳಿಸಿದರು.</p>.<p>ಕೆವೈಡಿಸಿಸಿ ಬ್ಯಾಂಕ್ ಅಧ್ಯಕ್ಷ ವಿಠ್ಠಲ ಯಾದವ, ಜಿಪಂ ಮಾಜಿ ಅಧ್ಯಕ್ಷ ರಾಜಶೇಖರಗೌಡ ಪಾಟೀಲ ವಜ್ಜಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಿಂಗರಾಜ ಬಾಚಿಮಟ್ಟಿ, ಮುಖಂಡರಾದ ಮಲ್ಲಣ್ಣ ಸಾಹುಕಾರ ಮುಧೋಳ, ಭೀಮರಾಯ, ಗೋಪಾಲ ದೊರೆ, ಗ್ರಾಮದ ಮುಖಂಡರು, ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಪುರ</strong>: ಮತಕ್ಷೇತ್ರದ ಕನ್ನೆಳ್ಳಿ ಗ್ರಾಮದಲ್ಲಿ ಜಲಜೀವನ ಮಿಷನ್ ಯೋಜನೆಯ ಕಾಮಗಾರಿಗೆ ಶಾಸಕ ರಾಜಾ ವೇಣುಗೋಪಾಲ ನಾಯಕ ಗುರುವಾರ ಭೂಮಿ ಪೂಜೆ ನೆರವೇರಿಸಿದರು.</p>.<p>ಬಳಿಕ ಮಾತನಾಡಿದ ಅವರು, ‘ಜಲಜೀವನ ಮಿಷನ್ ಯೋಜನೆಯ ಅಡಿಯಲ್ಲಿ ಮನೆಮನೆಗೆ ನಲ್ಲಿ ಅಳವಡಿಸುವ ಹಾಗೂ ಪೈಪ್ಲೈನ್ ನಿರ್ಮಿಸುವ ಯೋಜನೆಯ ₹ 2 ಕೋಟಿ ವೆಚ್ಚದ ಕಾಮಗಾರಿ ಇದಾಗಿದೆ. ಈ ಕಾಮಗಾರಿಯಿಂದ ಗ್ರಾಮದಲ್ಲಿ ಸಮರ್ಪಕ ಕುಡಿಯುವ ನೀರಿನ ಸೌಲಭ್ಯ ದೊರಕಲಿದೆ’ ಎಂದು ಹೇಳಿದರು.</p>.<p>‘ಸಂಬಂಧಿಸಿದವರು ಗುಣಮಟ್ಟದೊಂದಿಗೆ ಅಚ್ಚುಕಟ್ಟಾಗಿ, ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು. ಸಂಬಂಧಿಸಿದ ಇಲಾಖೆಯವರು ಕಾಮಗಾರಿ ಪರಿಶೀಲಿಸಬೇಕು. ಗೊತ್ತುಪಡಿಸಿದ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸಲು ಕ್ರಮ ವಹಿಸಬೇಕು’ ಎಂದು ತಿಳಿಸಿದರು.</p>.<p>ಕೆವೈಡಿಸಿಸಿ ಬ್ಯಾಂಕ್ ಅಧ್ಯಕ್ಷ ವಿಠ್ಠಲ ಯಾದವ, ಜಿಪಂ ಮಾಜಿ ಅಧ್ಯಕ್ಷ ರಾಜಶೇಖರಗೌಡ ಪಾಟೀಲ ವಜ್ಜಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಿಂಗರಾಜ ಬಾಚಿಮಟ್ಟಿ, ಮುಖಂಡರಾದ ಮಲ್ಲಣ್ಣ ಸಾಹುಕಾರ ಮುಧೋಳ, ಭೀಮರಾಯ, ಗೋಪಾಲ ದೊರೆ, ಗ್ರಾಮದ ಮುಖಂಡರು, ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>