<p><strong>ಯಾದಗಿರಿ:</strong> ನಗರದ ಉತ್ತರಾದಿಮಠದ ರಾಘವೇಂದ್ರ ಸ್ವಾಮಿಗಳ ಪರಿಮಳ ಮಂಟಪದಲ್ಲಿ ವಿಶ್ವಮಧ್ವ ಮಹಾಪರಿಷತ್ತಿನ ವತಿಯಿಂದ ನೂಲಹುಣ್ಣಿಮೆಯ ಅಂಗವಾಗಿ ಸಾಮೂಹಿಕ ಯಜ್ಞಪವಿತ್ರಧಾರಣೆ ಕಾರ್ಯಕ್ರಮವನ್ನು ಶನಿವಾರ ಹಮ್ಮಿಕೊಳ್ಳಲಾಗಿತ್ತು.</p>.<p>ನರಸಿಂಹಾಚಾರ್ಯ ಪುರಾಣಿಕ ಅವರು ಹೋಮ– ಹವನಗಳನ್ನು ನಡೆಸುವ ಮೂಲಕ ನೂತನ ಯಜ್ಞ ಪವಿತ್ರಧಾರಣೆಯನ್ನು ಎಲ್ಲಾ ವಿಪ್ರಬಂಧುಗಳಿಗೆ ಮಾಡಿಸಿದರು. </p>.<p>ಬಳಿಕ ಮಾತನಾಡಿದ ಅವರು, ‘ಉಪನಯನರಾದ ಪ್ರತಿಯೊಬ್ಬರು ಪ್ರತಿ ವರ್ಷ ಈ ಪೂರ್ಣಿಮೆಯಂದು ಬದಲಾವಣೆ ಮಾಡಬೇಕು. ತ್ರಿಕಾಲ ಸಂಧ್ಯಾವಂದನೆ, ಗಾಯತ್ರಿ ಜಪ ಮಾಡಬೇಕು. ದೇವತೆಗಳಿಗೆ ಮತ್ತು ಪಿತೃಗಳಿಗೆ ತರ್ಪಣ ಕೊಡುವುದರಿಂದ ಮನಸ್ಸಿಗೆ ನೆಮ್ಮದಿ ಸಿಗುವುದರ ಜೊತೆಗೆ ಭಗವಂತನ ಪ್ರೀತಿಗೆ ಪಾತ್ರರಾಗಬಹುದು’ ಎಂದರು.</p>.<p>‘ಇಂದಿನ ಒತ್ತಡದ ಬದುಕಿನಲ್ಲಿ ಮನಸ್ಸಿನ ನೆಮ್ಮದಿಯನ್ನು ಕಾಪಾಡಿಕೊಳ್ಳಲು ಆಗದೆ, ನಮ್ಮ ಸಂಸ್ಕಾರ ಮತ್ತು ಪರಂಪರೆಯನ್ನು ಮರೆಯುತ್ತಿದ್ದೇವೆ. ಇದರಿಂದ ಪರಿಸರದ ಮೇಲೆ ದುಷ್ಪರಿಣಾಮ ಬೀರಲಿದೆ. ಹೀಗಾಗಿ, ಹಿರಿಯರು ತೋರಿದ ಸಂಸ್ಕಾರ ಮತ್ತು ಪರಂಪರೆಯನ್ನು ಉಳಿಸಿಕೊಳ್ಳಬೇಕು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ನಗರದ ಉತ್ತರಾದಿಮಠದ ರಾಘವೇಂದ್ರ ಸ್ವಾಮಿಗಳ ಪರಿಮಳ ಮಂಟಪದಲ್ಲಿ ವಿಶ್ವಮಧ್ವ ಮಹಾಪರಿಷತ್ತಿನ ವತಿಯಿಂದ ನೂಲಹುಣ್ಣಿಮೆಯ ಅಂಗವಾಗಿ ಸಾಮೂಹಿಕ ಯಜ್ಞಪವಿತ್ರಧಾರಣೆ ಕಾರ್ಯಕ್ರಮವನ್ನು ಶನಿವಾರ ಹಮ್ಮಿಕೊಳ್ಳಲಾಗಿತ್ತು.</p>.<p>ನರಸಿಂಹಾಚಾರ್ಯ ಪುರಾಣಿಕ ಅವರು ಹೋಮ– ಹವನಗಳನ್ನು ನಡೆಸುವ ಮೂಲಕ ನೂತನ ಯಜ್ಞ ಪವಿತ್ರಧಾರಣೆಯನ್ನು ಎಲ್ಲಾ ವಿಪ್ರಬಂಧುಗಳಿಗೆ ಮಾಡಿಸಿದರು. </p>.<p>ಬಳಿಕ ಮಾತನಾಡಿದ ಅವರು, ‘ಉಪನಯನರಾದ ಪ್ರತಿಯೊಬ್ಬರು ಪ್ರತಿ ವರ್ಷ ಈ ಪೂರ್ಣಿಮೆಯಂದು ಬದಲಾವಣೆ ಮಾಡಬೇಕು. ತ್ರಿಕಾಲ ಸಂಧ್ಯಾವಂದನೆ, ಗಾಯತ್ರಿ ಜಪ ಮಾಡಬೇಕು. ದೇವತೆಗಳಿಗೆ ಮತ್ತು ಪಿತೃಗಳಿಗೆ ತರ್ಪಣ ಕೊಡುವುದರಿಂದ ಮನಸ್ಸಿಗೆ ನೆಮ್ಮದಿ ಸಿಗುವುದರ ಜೊತೆಗೆ ಭಗವಂತನ ಪ್ರೀತಿಗೆ ಪಾತ್ರರಾಗಬಹುದು’ ಎಂದರು.</p>.<p>‘ಇಂದಿನ ಒತ್ತಡದ ಬದುಕಿನಲ್ಲಿ ಮನಸ್ಸಿನ ನೆಮ್ಮದಿಯನ್ನು ಕಾಪಾಡಿಕೊಳ್ಳಲು ಆಗದೆ, ನಮ್ಮ ಸಂಸ್ಕಾರ ಮತ್ತು ಪರಂಪರೆಯನ್ನು ಮರೆಯುತ್ತಿದ್ದೇವೆ. ಇದರಿಂದ ಪರಿಸರದ ಮೇಲೆ ದುಷ್ಪರಿಣಾಮ ಬೀರಲಿದೆ. ಹೀಗಾಗಿ, ಹಿರಿಯರು ತೋರಿದ ಸಂಸ್ಕಾರ ಮತ್ತು ಪರಂಪರೆಯನ್ನು ಉಳಿಸಿಕೊಳ್ಳಬೇಕು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>