<p><strong>ನಗನೂರ (ಕೆಂಭಾವಿ): </strong>ನಗನೂರ ಗ್ರಾಮದ ಶರಣಬಸವೇಶ್ವರ ದಾಸೋಹ ಮಠದ ಪೀಠಾಧಿಪತಿ ಶರಣಪ್ಪ ಶರಣ ಪೀಠ ತ್ಯಾಗ ಮಾಡಿದ್ದಾರೆ.</p>.<p>‘13 ವರ್ಷಗಳ ಕಾಲ ನಿರಂತರವಾಗಿ ಶರಣಬಸವೇಶ್ವರರ ಹಾಗೂ ಭಕ್ತರ ಸೇವೆ ಮಾಡಿದ ತೃಪ್ತಿ ನನಗಿದೆ. ವಯೋಸಹಜ ಕಾಯಿಲೆಗಳಿರುವ ಕಾರಣ ಮಠದ ಚಟುವಟಿಕೆಗಳಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಪೀಠ ತ್ಯಾಗ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ತಿಳಿಸಿದರು.</p>.<p>‘ನನಗೆ ನಾಲ್ಕು ಜನ ಗಂಡು ಮಕ್ಕಳಿದ್ದಾರೆ. ಅದರಲ್ಲಿ ಅರ್ಹರನ್ನು ದಾಸೋಹ ಮಠದ ಪೀಠಾಧಿಕಾರಿ, ಅರ್ಚಕ ಹಾಗೂ ಮಠದ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಬೇಕು ಎಂದು ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ’ ಎಂದು ತಿಳಿಸಿದರು.</p>.<p class="Subhead"><strong>ಭಕ್ತರಲ್ಲಿ ಆತಂಕ:</strong> ಕರ್ನಾಟಕ ಸೇರಿ ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ ಹಾಗೂ ಗೋವಾ ರಾಜ್ಯಗಳಲ್ಲಿ ಮಠದ ಭಕ್ತರಿದ್ದಾರೆ. ಈ ಬೆಳವಣಿಗೆಯಿಂದ ಅವರು ಆತಂಕಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಗನೂರ (ಕೆಂಭಾವಿ): </strong>ನಗನೂರ ಗ್ರಾಮದ ಶರಣಬಸವೇಶ್ವರ ದಾಸೋಹ ಮಠದ ಪೀಠಾಧಿಪತಿ ಶರಣಪ್ಪ ಶರಣ ಪೀಠ ತ್ಯಾಗ ಮಾಡಿದ್ದಾರೆ.</p>.<p>‘13 ವರ್ಷಗಳ ಕಾಲ ನಿರಂತರವಾಗಿ ಶರಣಬಸವೇಶ್ವರರ ಹಾಗೂ ಭಕ್ತರ ಸೇವೆ ಮಾಡಿದ ತೃಪ್ತಿ ನನಗಿದೆ. ವಯೋಸಹಜ ಕಾಯಿಲೆಗಳಿರುವ ಕಾರಣ ಮಠದ ಚಟುವಟಿಕೆಗಳಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಪೀಠ ತ್ಯಾಗ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ತಿಳಿಸಿದರು.</p>.<p>‘ನನಗೆ ನಾಲ್ಕು ಜನ ಗಂಡು ಮಕ್ಕಳಿದ್ದಾರೆ. ಅದರಲ್ಲಿ ಅರ್ಹರನ್ನು ದಾಸೋಹ ಮಠದ ಪೀಠಾಧಿಕಾರಿ, ಅರ್ಚಕ ಹಾಗೂ ಮಠದ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಬೇಕು ಎಂದು ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ’ ಎಂದು ತಿಳಿಸಿದರು.</p>.<p class="Subhead"><strong>ಭಕ್ತರಲ್ಲಿ ಆತಂಕ:</strong> ಕರ್ನಾಟಕ ಸೇರಿ ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ ಹಾಗೂ ಗೋವಾ ರಾಜ್ಯಗಳಲ್ಲಿ ಮಠದ ಭಕ್ತರಿದ್ದಾರೆ. ಈ ಬೆಳವಣಿಗೆಯಿಂದ ಅವರು ಆತಂಕಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>