<p><strong>ಯಾದಗಿರಿ</strong>: ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ರಾಜೀನಾಮೆ ಪಡೆಯಬಾರದು ಎಂದು ಒತ್ತಾಯಿಸಿ ಕರ್ನಾಟಕ ಪ್ರದೇಶ ಕುರುಬ ಸಂಘದ ಜಿಲ್ಲಾ ಘಟಕ ಹಾಗೂ ಸಿದ್ದರಾಮಯ್ಯ ಅಭಿಮಾನಿಗಳ ಬಳಗ ನಗರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯ ವೇಳೆ ಅಭಿಮಾನಿಯೊಬ್ಬರು ವಿಷ ಕುಡಿಯಲು ಯತ್ನಿಸಿದರು.</p>.<p>ಇಲ್ಲಿನ ನೇತಾಜಿ ಸುಭಾಷ್ ಚಂದ್ರ ಬೋಸ್ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಘೋಷಣೆ ಕೂಗಿದರು. ಮಾನವ ಸರಪಳಿ ರಚಿಸಿ ವಾಹನಗಳ ಸಂಚಾರ ತಡೆದರು.</p>.<p>ಆರಂಭದಲ್ಲಿ ಟೈರ್ಗೆ ಬೆಂಕಿ ಹಚ್ಚಲು ಮುಂದಾದ ಪ್ರತಿಭಟನಾಕಾರರನ್ನು ಪೊಲೀಸರು ತಡೆದರು. ಮಾನವ ಸರಪಳಿ ರಚಿಸಿ ವೃತ್ತದ ಸುತ್ತಲೂ ನೂರಾರು ಜನರು ನಿಂತು ಸಂಚಾರ ತಡೆದರು. ಈ ವೇಳೆ ವ್ಯಕ್ತಿಯೊಬ್ಬರು ಟೈರ್ಗೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚುತ್ತಿದ್ದಂತೆ ಪೊಲೀಸರು ತಡೆದು, ನೀರು ಹಾಕಲು ಯತ್ನಿಸಿದರು. </p>.<p>ಈ ವೇಳೆ ಸಿದ್ದರಾಮಯ್ಯ ಅಭಿಮಾನಯಾದ ಭೀಮು ಪೂಜಾರಿ, ‘ಬೆಂಕಿ ಹಚ್ಚಿದಕ್ಕೆ ಇಷ್ಟೋದು ಸಂಕಷ್ಟ ಆಗುತ್ತಿದೆ. ಸಿದ್ದರಾಮಯ್ಯ ಅವರಿಗಾಗಿ ವಿಷ ಕುಡಿಯುತ್ತೇನೆ’ ಎಂದು ಹೇಳಿ ಜೇಬಿನಿಂದ ವಿಷದ ಬಾಟಲಿ ತೆಗೆದು ಕುಡಿಯಲು ಯತ್ನಿಸಿದರು. ಹತ್ತಿರ ಇದ್ದವರು, ಪೊಲೀಸರು ತಡೆದು ವಿಷದ ಬಾಟಲಿಯನ್ನು ಕಸಿದುಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ</strong>: ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ರಾಜೀನಾಮೆ ಪಡೆಯಬಾರದು ಎಂದು ಒತ್ತಾಯಿಸಿ ಕರ್ನಾಟಕ ಪ್ರದೇಶ ಕುರುಬ ಸಂಘದ ಜಿಲ್ಲಾ ಘಟಕ ಹಾಗೂ ಸಿದ್ದರಾಮಯ್ಯ ಅಭಿಮಾನಿಗಳ ಬಳಗ ನಗರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯ ವೇಳೆ ಅಭಿಮಾನಿಯೊಬ್ಬರು ವಿಷ ಕುಡಿಯಲು ಯತ್ನಿಸಿದರು.</p>.<p>ಇಲ್ಲಿನ ನೇತಾಜಿ ಸುಭಾಷ್ ಚಂದ್ರ ಬೋಸ್ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಘೋಷಣೆ ಕೂಗಿದರು. ಮಾನವ ಸರಪಳಿ ರಚಿಸಿ ವಾಹನಗಳ ಸಂಚಾರ ತಡೆದರು.</p>.<p>ಆರಂಭದಲ್ಲಿ ಟೈರ್ಗೆ ಬೆಂಕಿ ಹಚ್ಚಲು ಮುಂದಾದ ಪ್ರತಿಭಟನಾಕಾರರನ್ನು ಪೊಲೀಸರು ತಡೆದರು. ಮಾನವ ಸರಪಳಿ ರಚಿಸಿ ವೃತ್ತದ ಸುತ್ತಲೂ ನೂರಾರು ಜನರು ನಿಂತು ಸಂಚಾರ ತಡೆದರು. ಈ ವೇಳೆ ವ್ಯಕ್ತಿಯೊಬ್ಬರು ಟೈರ್ಗೆ ಪೆಟ್ರೋಲ್ ಹಾಕಿ ಬೆಂಕಿ ಹಚ್ಚುತ್ತಿದ್ದಂತೆ ಪೊಲೀಸರು ತಡೆದು, ನೀರು ಹಾಕಲು ಯತ್ನಿಸಿದರು. </p>.<p>ಈ ವೇಳೆ ಸಿದ್ದರಾಮಯ್ಯ ಅಭಿಮಾನಯಾದ ಭೀಮು ಪೂಜಾರಿ, ‘ಬೆಂಕಿ ಹಚ್ಚಿದಕ್ಕೆ ಇಷ್ಟೋದು ಸಂಕಷ್ಟ ಆಗುತ್ತಿದೆ. ಸಿದ್ದರಾಮಯ್ಯ ಅವರಿಗಾಗಿ ವಿಷ ಕುಡಿಯುತ್ತೇನೆ’ ಎಂದು ಹೇಳಿ ಜೇಬಿನಿಂದ ವಿಷದ ಬಾಟಲಿ ತೆಗೆದು ಕುಡಿಯಲು ಯತ್ನಿಸಿದರು. ಹತ್ತಿರ ಇದ್ದವರು, ಪೊಲೀಸರು ತಡೆದು ವಿಷದ ಬಾಟಲಿಯನ್ನು ಕಸಿದುಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>