<p><strong>ಯಾದಗಿರಿ</strong>: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕದ ದೀರ್ಘಕಾಲದ ಮುಖ್ಯಮಂತ್ರಿಯಾಗಿ ಇತಿಹಾಸ ನಿರ್ಮಿಸಿದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರ ಅಭಿಮಾನಿಗಳು ನಗರದಲ್ಲಿ ಮಂಗಳವಾರ ಪಟಾಕಿ ಸಿಡಿಸಿ, ಪರಸ್ಪರ ಸಿಹಿ ತಿನಿಸಿ ಸಂಭ್ರಮಿಸಿದರು.</p>.<p>ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರು ಸುಮಾರು 2 ಕ್ವಿಂಟಲ್ ಚಿಕನ್ ಬಿರಿಯಾನಿ ತಯಾರಿಸಿ ಜನರಿಗೆ ವಿತರಣೆ ಮಾಡಿದರು.</p>.<p>ಕೇಕ್ ಕತ್ತರಿಸಿದ ಶಾಸಕ: ನಗರದ ಶಾಸಕರ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸಂಭ್ರಮೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಚೆನ್ನಾರೆಡ್ಡಿ ಪಾಟೀಲ ತುನ್ನೂರು ಅವರು ದೊಡ್ಡ ಕೇಕ್ ಕತ್ತರಿಸಿದರು. ಕೇಕ್ ಅನ್ನು ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ತಿನಿಸಿದರು.</p>.<p>ಈ ವೇಳೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುರಾವ ಕಾಡ್ಲರ್, ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ನಿಲೋಫರ್ ಬಾದಲ್, ಮುಖಂಡರಾದ ಸಿದ್ದಲಿಂಗರೆಡ್ಡಿ ಗೌಡ ಉಳ್ಳೆಸೂಗುರು, ಶರಣಪ್ಪಗೌಡ ಕೌಳೂರು, ಮರೆಪ್ಪ ಬಿಳ್ಳಾರ, ಶಾಮಸನ್ ಮಾಳಿಕೇರಿ, ಮಲ್ಲಿಕಾರ್ಜುನ ಈಟೆ, ಸಿದ್ದಪ್ರಕಾಶರಡ್ಡಿ ನಾಲವಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ</strong>: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕದ ದೀರ್ಘಕಾಲದ ಮುಖ್ಯಮಂತ್ರಿಯಾಗಿ ಇತಿಹಾಸ ನಿರ್ಮಿಸಿದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರ ಅಭಿಮಾನಿಗಳು ನಗರದಲ್ಲಿ ಮಂಗಳವಾರ ಪಟಾಕಿ ಸಿಡಿಸಿ, ಪರಸ್ಪರ ಸಿಹಿ ತಿನಿಸಿ ಸಂಭ್ರಮಿಸಿದರು.</p>.<p>ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರು ಸುಮಾರು 2 ಕ್ವಿಂಟಲ್ ಚಿಕನ್ ಬಿರಿಯಾನಿ ತಯಾರಿಸಿ ಜನರಿಗೆ ವಿತರಣೆ ಮಾಡಿದರು.</p>.<p>ಕೇಕ್ ಕತ್ತರಿಸಿದ ಶಾಸಕ: ನಗರದ ಶಾಸಕರ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸಂಭ್ರಮೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಚೆನ್ನಾರೆಡ್ಡಿ ಪಾಟೀಲ ತುನ್ನೂರು ಅವರು ದೊಡ್ಡ ಕೇಕ್ ಕತ್ತರಿಸಿದರು. ಕೇಕ್ ಅನ್ನು ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ತಿನಿಸಿದರು.</p>.<p>ಈ ವೇಳೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುರಾವ ಕಾಡ್ಲರ್, ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ನಿಲೋಫರ್ ಬಾದಲ್, ಮುಖಂಡರಾದ ಸಿದ್ದಲಿಂಗರೆಡ್ಡಿ ಗೌಡ ಉಳ್ಳೆಸೂಗುರು, ಶರಣಪ್ಪಗೌಡ ಕೌಳೂರು, ಮರೆಪ್ಪ ಬಿಳ್ಳಾರ, ಶಾಮಸನ್ ಮಾಳಿಕೇರಿ, ಮಲ್ಲಿಕಾರ್ಜುನ ಈಟೆ, ಸಿದ್ದಪ್ರಕಾಶರಡ್ಡಿ ನಾಲವಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>