<p><strong>ಸೈದಾಪೂರ</strong>: ‘ಸಿದ್ದರಾಮಯ್ಯನವರು ತಮ್ಮ ದೀರ್ಘಾವಧಿ ಆಡಳಿತದಲ್ಲಿ ಒಂದೇ ಒಂದು ಕಪ್ಪುಚುಕ್ಕೆ ಇಲ್ಲದೇ ಎಲ್ಲರಿಗೂ ಸಾಮಾಜಿಕ ನ್ಯಾಯ ಒದಗಿಸುವ ಮೂಲಕ ಹಿಂದುಳಿದ ವರ್ಗಗಳ ಪಾಲಿನ ದೇವರಾಗಿದ್ದಾರೆ’ ಎಂದು ಕೆಪಿಸಿಸಿ ಸದಸ್ಯ ಶರಣಪ್ಪ ಡಿ.ಮಾನೇಗಾರ ಯರಗೋಳ ಅಭಿಪ್ರಾಯಪಟ್ಟರು.</p>.<p>ಸಿದ್ದರಾಮಯ್ಯನವರು ಕರ್ನಾಟಕದ ದೀರ್ಘಾವಧಿಯ ಮುಖ್ಯಮಂತ್ರಿಯಾಗಿ ಇತಿಹಾಸ ನಿರ್ಮಿಸಿದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಸಿದ್ಧರಾಮಯ್ಯನವರ ಅಭಿಮಾನಿ ಬಳಗ ಹಾಗೂ ಸಮಾಜದ ಬಾಂಧವರು ಬುಧವಾರ ಮುಖ್ಯಮಂತ್ರಿ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.</p>.<p>‘ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಆಡಳಿತಾವಧಿಯ ದಾಖಲೆಯನ್ನು ಸಿದ್ದರಾಮಯ್ಯನವರು ಮುರಿದಿದ್ದಾರೆ. ಅವರೇ ಪೂರ್ಣ ಅವಧಿಗೆ ಸಿಎಂ ಆಗಿ ಮುಂದುವರಿಯಲಿ’ ಎಂದರು.</p>.<p>ನಂತರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸರೆಡ್ಡಿ ಅನಪುರ ಮಾತನಾಡಿದರು. ಇದಕ್ಕೂ ಡೊಳ್ಳು ವಾದ್ಯಗಳೊಂದಿಗೆ ವಿಜೃಂಭಣೆಯಿಂದ ಸಿಎಂ ಅವರ ಭಾವಚಿತ್ರದ ಮೆರವಣಿಗೆ ನಡೆಸಿ ಕನಕ ವೃತ್ತದಲ್ಲಿ ಹಾಲಿನ ಅಭಿಷೇಕ ಮಾಡಿದರು. ನಂತರ ಭರ್ಜರಿ ಬಾಡೂಟ ಸವಿಯುವ ಮೂಲಕ ಸಂಭ್ರಮಿಸಿದರು.</p>.<p>ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಶರಣಿಕ ಕುಮಾರ ದೋಖಾ, ಸೈದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಿರಂಜನರಡ್ಡಿ ಪಾಟೀಲ ಶೆಟ್ಟಿಹಳ್ಳಿ, ಚಂದ್ರಶೇಖರ ವಾರದ , ಪ್ರಭುಲಿಂಗ ವಾರದ , ವಿಶ್ವನಾಥ ನೀಲಹಳ್ಳಿ, ಬಸವರಾಜಪ್ಪ ಬಾಗ್ಲಿ, ಲಕ್ಷ್ಮೀಕಾಂತರೆಡ್ಡಿ ಪಲ್ಲಾ, ಕೃಷ್ಣಾ ಚಪೆಟ್ಲಾ, ರವಿಕುಮಾರ್ ಕಡೇಚೂರ ಸೇರಿದಂತೆ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೈದಾಪೂರ</strong>: ‘ಸಿದ್ದರಾಮಯ್ಯನವರು ತಮ್ಮ ದೀರ್ಘಾವಧಿ ಆಡಳಿತದಲ್ಲಿ ಒಂದೇ ಒಂದು ಕಪ್ಪುಚುಕ್ಕೆ ಇಲ್ಲದೇ ಎಲ್ಲರಿಗೂ ಸಾಮಾಜಿಕ ನ್ಯಾಯ ಒದಗಿಸುವ ಮೂಲಕ ಹಿಂದುಳಿದ ವರ್ಗಗಳ ಪಾಲಿನ ದೇವರಾಗಿದ್ದಾರೆ’ ಎಂದು ಕೆಪಿಸಿಸಿ ಸದಸ್ಯ ಶರಣಪ್ಪ ಡಿ.ಮಾನೇಗಾರ ಯರಗೋಳ ಅಭಿಪ್ರಾಯಪಟ್ಟರು.</p>.<p>ಸಿದ್ದರಾಮಯ್ಯನವರು ಕರ್ನಾಟಕದ ದೀರ್ಘಾವಧಿಯ ಮುಖ್ಯಮಂತ್ರಿಯಾಗಿ ಇತಿಹಾಸ ನಿರ್ಮಿಸಿದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಸಿದ್ಧರಾಮಯ್ಯನವರ ಅಭಿಮಾನಿ ಬಳಗ ಹಾಗೂ ಸಮಾಜದ ಬಾಂಧವರು ಬುಧವಾರ ಮುಖ್ಯಮಂತ್ರಿ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.</p>.<p>‘ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಆಡಳಿತಾವಧಿಯ ದಾಖಲೆಯನ್ನು ಸಿದ್ದರಾಮಯ್ಯನವರು ಮುರಿದಿದ್ದಾರೆ. ಅವರೇ ಪೂರ್ಣ ಅವಧಿಗೆ ಸಿಎಂ ಆಗಿ ಮುಂದುವರಿಯಲಿ’ ಎಂದರು.</p>.<p>ನಂತರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸರೆಡ್ಡಿ ಅನಪುರ ಮಾತನಾಡಿದರು. ಇದಕ್ಕೂ ಡೊಳ್ಳು ವಾದ್ಯಗಳೊಂದಿಗೆ ವಿಜೃಂಭಣೆಯಿಂದ ಸಿಎಂ ಅವರ ಭಾವಚಿತ್ರದ ಮೆರವಣಿಗೆ ನಡೆಸಿ ಕನಕ ವೃತ್ತದಲ್ಲಿ ಹಾಲಿನ ಅಭಿಷೇಕ ಮಾಡಿದರು. ನಂತರ ಭರ್ಜರಿ ಬಾಡೂಟ ಸವಿಯುವ ಮೂಲಕ ಸಂಭ್ರಮಿಸಿದರು.</p>.<p>ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಶರಣಿಕ ಕುಮಾರ ದೋಖಾ, ಸೈದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಿರಂಜನರಡ್ಡಿ ಪಾಟೀಲ ಶೆಟ್ಟಿಹಳ್ಳಿ, ಚಂದ್ರಶೇಖರ ವಾರದ , ಪ್ರಭುಲಿಂಗ ವಾರದ , ವಿಶ್ವನಾಥ ನೀಲಹಳ್ಳಿ, ಬಸವರಾಜಪ್ಪ ಬಾಗ್ಲಿ, ಲಕ್ಷ್ಮೀಕಾಂತರೆಡ್ಡಿ ಪಲ್ಲಾ, ಕೃಷ್ಣಾ ಚಪೆಟ್ಲಾ, ರವಿಕುಮಾರ್ ಕಡೇಚೂರ ಸೇರಿದಂತೆ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>