<p><strong>ಯಾದಗಿರಿ</strong>: ‘ಮಹಿಳೆಯರು ಸ್ವಾವಲಂಬಿಗಳಾಗಲು ಕೌಶಲಾಭಿವೃದ್ಧಿ ಹಾಗೂ ಉದ್ಯಮಶೀಲತೆ ಅಗತ್ಯವಿದೆ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲವೀಶ್ ಒರಡಿಯಾ ಹೇಳಿದರು.</p>.<p>ತಾಲ್ಲೂಕಿನ ಬಂದಳ್ಳಿ ಗ್ರಾಮದಲ್ಲಿ ಶುಕ್ರವಾರ ಮಹಿಳಾ ದಿನಾಚರಣೆ, ಸಮುದಾಯ ನಿರ್ವಹಿತ ತರಬೇತಿ ಕೇಂದ್ರ ಹಾಗೂ ಯಾದವ ವನಧನ್ ಅಭಿವೃದ್ಧಿ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಒಂದು ಗ್ರಾಮ ಒಂದು ಉತ್ಪನ್ನ ಯೋಜನೆಯನ್ನು ಎಲ್ಲಾ ಗ್ರಾಮ ಪಂಚಾಯಿತಿಗಳು ಸ್ವ ಸಹಾಯ ಗುಂಪುಗಳ ಮೂಲಕ ಪ್ರಯೋಜನ ಪಡೆದುಕೊಳಬೇಕು’ ಎಂದರು.</p>.<p>ಯೋಜನಾ ನಿರ್ದೇಶಕ ಸಿ.ಬಿ.ದೇವರಮನಿ ಮಾತನಾಡಿ, ‘ಮಹಿಳೆಯರು ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳು ಮತ್ತು ಸ್ವ ಸಹಾಯ ಸಂಘಗಳ ಮೂಲಕ ಸ್ವಾವಲಂಬನೆ ಬದುಕು ಸಾಧಿಸಬೇಕು’ ಎಂದು ಹೇಳಿದರು.</p>.<p>ಕೌಶಲಾಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕ ಬಸಪ್ಪ ಅವರು ಸ್ವ ಸಹಾಯ ಸಂಘದ ಮಹಿಳೆಯರಿಗೆ ಪ್ರಮಾಣ ಪತ್ರ ವಿತರಿಸಿದರು. ಜಿಲ್ಲಾ ಪಂಚಾಯಿತಿ ಸಹಾಯಕ ಯೋಜನಾ ಅಧಿಕಾರಿ ಸಂತೋಷ್ ಶೇಷಲು ಅವರು ಬಹುಮಾನ ವಿತರಿಸಿದರು. ಉತ್ತಮವಾಗಿ ಕಾರ್ಯನಿರ್ವಹಿಸಿದ ಜಿಪಿಎಲ್ಎಫ್, ಸ್ವಸಹಾಯ ಗುಂಪುಗಳ ಪ್ರತಿನಿಧಿಗಳಿಗೆ ಸನ್ಮಾನಿಸಲಾಯಿತು.</p>.<p>ಎಂಕೆಪಿಸಿ ನಿರ್ದೇಶಕರಾದ ಸುಗಂಧಮ್ಮಾ, ಶರಣಮ್ಮ ಪಾರ್ವತಿ, ಎನ್ಆರ್ಎಲ್ಎಂ ಸಿಬಂದ್ದಿ ಗಿರೀಶ್, ಕಾವೇರಿ, ಸಿದ್ರಾಮಪ್ಪ, ದತ್ತಾತ್ರೇಯ ಸೇರಿ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ</strong>: ‘ಮಹಿಳೆಯರು ಸ್ವಾವಲಂಬಿಗಳಾಗಲು ಕೌಶಲಾಭಿವೃದ್ಧಿ ಹಾಗೂ ಉದ್ಯಮಶೀಲತೆ ಅಗತ್ಯವಿದೆ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲವೀಶ್ ಒರಡಿಯಾ ಹೇಳಿದರು.</p>.<p>ತಾಲ್ಲೂಕಿನ ಬಂದಳ್ಳಿ ಗ್ರಾಮದಲ್ಲಿ ಶುಕ್ರವಾರ ಮಹಿಳಾ ದಿನಾಚರಣೆ, ಸಮುದಾಯ ನಿರ್ವಹಿತ ತರಬೇತಿ ಕೇಂದ್ರ ಹಾಗೂ ಯಾದವ ವನಧನ್ ಅಭಿವೃದ್ಧಿ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಒಂದು ಗ್ರಾಮ ಒಂದು ಉತ್ಪನ್ನ ಯೋಜನೆಯನ್ನು ಎಲ್ಲಾ ಗ್ರಾಮ ಪಂಚಾಯಿತಿಗಳು ಸ್ವ ಸಹಾಯ ಗುಂಪುಗಳ ಮೂಲಕ ಪ್ರಯೋಜನ ಪಡೆದುಕೊಳಬೇಕು’ ಎಂದರು.</p>.<p>ಯೋಜನಾ ನಿರ್ದೇಶಕ ಸಿ.ಬಿ.ದೇವರಮನಿ ಮಾತನಾಡಿ, ‘ಮಹಿಳೆಯರು ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳು ಮತ್ತು ಸ್ವ ಸಹಾಯ ಸಂಘಗಳ ಮೂಲಕ ಸ್ವಾವಲಂಬನೆ ಬದುಕು ಸಾಧಿಸಬೇಕು’ ಎಂದು ಹೇಳಿದರು.</p>.<p>ಕೌಶಲಾಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕ ಬಸಪ್ಪ ಅವರು ಸ್ವ ಸಹಾಯ ಸಂಘದ ಮಹಿಳೆಯರಿಗೆ ಪ್ರಮಾಣ ಪತ್ರ ವಿತರಿಸಿದರು. ಜಿಲ್ಲಾ ಪಂಚಾಯಿತಿ ಸಹಾಯಕ ಯೋಜನಾ ಅಧಿಕಾರಿ ಸಂತೋಷ್ ಶೇಷಲು ಅವರು ಬಹುಮಾನ ವಿತರಿಸಿದರು. ಉತ್ತಮವಾಗಿ ಕಾರ್ಯನಿರ್ವಹಿಸಿದ ಜಿಪಿಎಲ್ಎಫ್, ಸ್ವಸಹಾಯ ಗುಂಪುಗಳ ಪ್ರತಿನಿಧಿಗಳಿಗೆ ಸನ್ಮಾನಿಸಲಾಯಿತು.</p>.<p>ಎಂಕೆಪಿಸಿ ನಿರ್ದೇಶಕರಾದ ಸುಗಂಧಮ್ಮಾ, ಶರಣಮ್ಮ ಪಾರ್ವತಿ, ಎನ್ಆರ್ಎಲ್ಎಂ ಸಿಬಂದ್ದಿ ಗಿರೀಶ್, ಕಾವೇರಿ, ಸಿದ್ರಾಮಪ್ಪ, ದತ್ತಾತ್ರೇಯ ಸೇರಿ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>