ವಡಗೇರಾ (ಯಾದಗಿರಿ ಜಿಲ್ಲೆ): ತಾಲ್ಲೂಕಿನ ಗೋಡಿಹಾಳ ಗ್ರಾಮದಲ್ಲಿ ಶನಿವಾರ ಹಾವು ಐದಕ್ಕೂ ಹೆಚ್ಚು ಬಾರಿ ಕಚ್ಚಿದ್ದರಿಂದ ಗ್ರಾಮಸ್ಥ ಬಸವರಾಜ ಪೂಜಾರಿ (65) ಮೃತಪಟ್ಟಿದ್ದಾರೆ. ಹಾವನ್ನು ಕೈಯಲ್ಲಿ ಹಿಡಿದು ದೂರಕ್ಕೆ ಬಿಡಲು ಹೋಗುತ್ತಿದ್ದ ವೇಳೆ ಸತತ ಕಚ್ಚಿದರೂ ಬಿಡದ ಅವರು ಅದನ್ನು ಹಿಡಿದುಕೊಂಡೇ ಸಾವನ್ನಪ್ಪಿದ್ದಾರೆ.