<p><strong>ಯಾದಗಿರಿ</strong>: ಜಿಲ್ಲೆಯ ಹುಣಸಗಿ ತಾಲ್ಲೂಕಿನ ಹಗರಟಗಿ ಗ್ರಾಮದಲ್ಲಿ 2021–22ನೇ ಸಾಲಿನ ಸರ್ವೆ ನಂ 18ರಲ್ಲಿ ಘನತ್ಯಾಜ್ಯ ವಿಲೇವಾರಿ ಸಂಸ್ಕರಣ ಘಟಕ ನಿರ್ಮಿಸದೇ ಬಿಲ್ ಎತ್ತುವಳಿ ಮಾಡಿರುವ ಆರೋಪ ಕೇಳಿ ಬಂದಿದೆ.</p>.<p>‘ಉದ್ಯೋಗ ಖಾತ್ರಿ ಯೋಜನೆಯಡಿ ಕಾಮಗಾರಿ ಕೈಗೆತ್ತುಕೊಳ್ಳಲಾಗಿದ್ದು, ಆದರೆ, ಮಾನವ ಬಳಕೆ ಮಾಡದೇ ಯಂತ್ರಗಳಿಂದ ಕಾಮಗಾರಿ ಮಾಡಿಸಲಾಗಿದೆ’ ಎಂದು ಗ್ರಾಮದ ಯುವ ಮುಖಂಡ ಅರುಣಕುಮಾರ ಬ ಮಲ್ಕಾಪುರ ಅವರು ಹುಣಸಗಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗೆ ದೂರು ಸಲ್ಲಿಸಿದ್ದಾರೆ.</p>.<p>‘ಘಟಕದ ಸ್ಥಳದಲ್ಲಿ ಕೂಲಿ ಕಾರ್ಮಿರಿಲ್ಲದೇ ಯಂತ್ರಗಳನ್ನು ಬಳಕೆ ಮಾಡಲಾಗುತ್ತಿದೆ. ಈ ಮೂಲಕ ಕೂಲಿ ಕಾರ್ಮಿಕರ ಹೆಸರಲ್ಲಿ ಹಣ ಲೂಟಿ ಮಾಡುವ ಕೆಲಸ ಪಂಚಾಯಿತಿ ಅಧಿಕಾರಿಗಳಿಂದ ನಡೆಯುತ್ತಿದೆ. ಹೀಗಾಗಿ ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ’ ಆಗ್ರಹಿಸಿದ್ದಾರೆ.</p>.<p>‘ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿಕಾರರ ಹೆಸರುಗಳನ್ನು ಸೃಷ್ಟಿಸಲಾಗಿದ್ದು, ಅವರು ಯಾರೂ ಕಾಮಗಾರಿಯೇ ಮಾಡಿಲ್ಲ. ಆದರೂ ಅವರ ಖಾತೆಗಳಿಗೆ ಹಣ ಜಮಾ ಮಾಡಿ ನಂತರ ಅವರಿಗೆ ಇಂತಿಷ್ಟು ಕೊಟ್ಟು ಎಲ್ಲ ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ’ ಎಂದು ಆರೋಪಿಸಿದ್ದಾರೆ.<br /><br /><strong>ಕಸ ಬುಟ್ಟಿ ವಿತರಿಸಿಲ್ಲ: </strong>‘ಒಣ ಕಸ ಮತ್ತು ಹಸಿ ಕಸ ಬೇರ್ಪಡಿಸಿ ಸಂಗ್ರಹಿಸುವ ಬುಟ್ಟಿಗಳನ್ನು ಇನ್ನೂ ವಿತರಿಸಿಲ್ಲ. ಇದರಿಂದ ಈ ಯೋಜನೆ ಬಗ್ಗೆ ಜಾಗೃತಿ ಇಲ್ಲದಿರುವುದು ಸೇರಿದಂತೆ ಬುಟ್ಟಿಗಳು ಉಪಯೋಗ ಇಲ್ಲದಂತೆ ಆಗಿದೆ’ ಎನ್ನುವುದು ಹಗರಟಗಿ ಗ್ರಾಮದ ಯುವ ಮುಖಂಡ ಅರುಣಕುಮಾರ ಮಲ್ಕಾಪುರ ಅವರ ಆರೋಪವಾಗಿದೆ.</p>.<p>‘ತ್ಯಾಜ್ಯ ವಿಲೇವಾರಿ ಸಂಸ್ಕರಣ ಘಟಕದ ಕಾಮಗಾರಿ ನಡೆಯುತ್ತಿದ್ದು, ಬಾಬ್ ಕಾರ್ಡ್ದಾರರ ಖಾತೆಗೆ ಹಣ ಜಮಾ ಆಗುತ್ತದೆ. ಮಾನವ ದಿನಗಳನ್ನು ಸೃಷ್ಟಿಸಲಾಗಿದೆ’ ಎನ್ನುತ್ತಾರೆ ಹಗರಟಗಿ ಪಿಡಿಒ ರಾಮು ಅಗ್ನಿ.</p>.<p>***</p>.<p><strong>ಖಾತ್ರಿ ಯೋಜನೆಯಡಿ ಜೆಸಿಬಿ ಹಚ್ಚಿ ಕೆಲಸ ಮಾಡಿ ಬಿಲ್ ಎತ್ತುವಳಿ ಮಾಡಲಾಗಿದೆ. ಇದರ ಬಗ್ಗೆ ಸಮಗ್ರ ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು</strong></p>.<p><strong>-ಅರುಣಕುಮಾರ ಹಗರಟಗಿ, ಯುವ ಮುಖಂಡ</strong></p>.<p>**</p>.<p><strong>ಮನರೇಗಾ ಯೋಜನೆಯ ಮೂಲಕ ಘನತ್ಯಾಜ್ಯ ವಿಲೇವಾರಿ ಘಟಕ ಕಾಮಗಾರಿ ಮಾಡಿಸಲಾಗಿದೆ. ಈ ಬಗ್ಗೆ ಪರಿಶೀಲಿಸಲು ಮೇಲಧಿಕಾರಿಗಳು ಆಗಮಿಸಿದ್ದಾರೆ</strong></p>.<p><strong>-ರಾಮು ಅಗ್ನಿ, ಹಗರಟಗಿ ಪಿಡಿಒ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ</strong>: ಜಿಲ್ಲೆಯ ಹುಣಸಗಿ ತಾಲ್ಲೂಕಿನ ಹಗರಟಗಿ ಗ್ರಾಮದಲ್ಲಿ 2021–22ನೇ ಸಾಲಿನ ಸರ್ವೆ ನಂ 18ರಲ್ಲಿ ಘನತ್ಯಾಜ್ಯ ವಿಲೇವಾರಿ ಸಂಸ್ಕರಣ ಘಟಕ ನಿರ್ಮಿಸದೇ ಬಿಲ್ ಎತ್ತುವಳಿ ಮಾಡಿರುವ ಆರೋಪ ಕೇಳಿ ಬಂದಿದೆ.</p>.<p>‘ಉದ್ಯೋಗ ಖಾತ್ರಿ ಯೋಜನೆಯಡಿ ಕಾಮಗಾರಿ ಕೈಗೆತ್ತುಕೊಳ್ಳಲಾಗಿದ್ದು, ಆದರೆ, ಮಾನವ ಬಳಕೆ ಮಾಡದೇ ಯಂತ್ರಗಳಿಂದ ಕಾಮಗಾರಿ ಮಾಡಿಸಲಾಗಿದೆ’ ಎಂದು ಗ್ರಾಮದ ಯುವ ಮುಖಂಡ ಅರುಣಕುಮಾರ ಬ ಮಲ್ಕಾಪುರ ಅವರು ಹುಣಸಗಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗೆ ದೂರು ಸಲ್ಲಿಸಿದ್ದಾರೆ.</p>.<p>‘ಘಟಕದ ಸ್ಥಳದಲ್ಲಿ ಕೂಲಿ ಕಾರ್ಮಿರಿಲ್ಲದೇ ಯಂತ್ರಗಳನ್ನು ಬಳಕೆ ಮಾಡಲಾಗುತ್ತಿದೆ. ಈ ಮೂಲಕ ಕೂಲಿ ಕಾರ್ಮಿಕರ ಹೆಸರಲ್ಲಿ ಹಣ ಲೂಟಿ ಮಾಡುವ ಕೆಲಸ ಪಂಚಾಯಿತಿ ಅಧಿಕಾರಿಗಳಿಂದ ನಡೆಯುತ್ತಿದೆ. ಹೀಗಾಗಿ ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ’ ಆಗ್ರಹಿಸಿದ್ದಾರೆ.</p>.<p>‘ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿಕಾರರ ಹೆಸರುಗಳನ್ನು ಸೃಷ್ಟಿಸಲಾಗಿದ್ದು, ಅವರು ಯಾರೂ ಕಾಮಗಾರಿಯೇ ಮಾಡಿಲ್ಲ. ಆದರೂ ಅವರ ಖಾತೆಗಳಿಗೆ ಹಣ ಜಮಾ ಮಾಡಿ ನಂತರ ಅವರಿಗೆ ಇಂತಿಷ್ಟು ಕೊಟ್ಟು ಎಲ್ಲ ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ’ ಎಂದು ಆರೋಪಿಸಿದ್ದಾರೆ.<br /><br /><strong>ಕಸ ಬುಟ್ಟಿ ವಿತರಿಸಿಲ್ಲ: </strong>‘ಒಣ ಕಸ ಮತ್ತು ಹಸಿ ಕಸ ಬೇರ್ಪಡಿಸಿ ಸಂಗ್ರಹಿಸುವ ಬುಟ್ಟಿಗಳನ್ನು ಇನ್ನೂ ವಿತರಿಸಿಲ್ಲ. ಇದರಿಂದ ಈ ಯೋಜನೆ ಬಗ್ಗೆ ಜಾಗೃತಿ ಇಲ್ಲದಿರುವುದು ಸೇರಿದಂತೆ ಬುಟ್ಟಿಗಳು ಉಪಯೋಗ ಇಲ್ಲದಂತೆ ಆಗಿದೆ’ ಎನ್ನುವುದು ಹಗರಟಗಿ ಗ್ರಾಮದ ಯುವ ಮುಖಂಡ ಅರುಣಕುಮಾರ ಮಲ್ಕಾಪುರ ಅವರ ಆರೋಪವಾಗಿದೆ.</p>.<p>‘ತ್ಯಾಜ್ಯ ವಿಲೇವಾರಿ ಸಂಸ್ಕರಣ ಘಟಕದ ಕಾಮಗಾರಿ ನಡೆಯುತ್ತಿದ್ದು, ಬಾಬ್ ಕಾರ್ಡ್ದಾರರ ಖಾತೆಗೆ ಹಣ ಜಮಾ ಆಗುತ್ತದೆ. ಮಾನವ ದಿನಗಳನ್ನು ಸೃಷ್ಟಿಸಲಾಗಿದೆ’ ಎನ್ನುತ್ತಾರೆ ಹಗರಟಗಿ ಪಿಡಿಒ ರಾಮು ಅಗ್ನಿ.</p>.<p>***</p>.<p><strong>ಖಾತ್ರಿ ಯೋಜನೆಯಡಿ ಜೆಸಿಬಿ ಹಚ್ಚಿ ಕೆಲಸ ಮಾಡಿ ಬಿಲ್ ಎತ್ತುವಳಿ ಮಾಡಲಾಗಿದೆ. ಇದರ ಬಗ್ಗೆ ಸಮಗ್ರ ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು</strong></p>.<p><strong>-ಅರುಣಕುಮಾರ ಹಗರಟಗಿ, ಯುವ ಮುಖಂಡ</strong></p>.<p>**</p>.<p><strong>ಮನರೇಗಾ ಯೋಜನೆಯ ಮೂಲಕ ಘನತ್ಯಾಜ್ಯ ವಿಲೇವಾರಿ ಘಟಕ ಕಾಮಗಾರಿ ಮಾಡಿಸಲಾಗಿದೆ. ಈ ಬಗ್ಗೆ ಪರಿಶೀಲಿಸಲು ಮೇಲಧಿಕಾರಿಗಳು ಆಗಮಿಸಿದ್ದಾರೆ</strong></p>.<p><strong>-ರಾಮು ಅಗ್ನಿ, ಹಗರಟಗಿ ಪಿಡಿಒ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>