<p><strong>ಯಾದಗಿರಿ:</strong> ‘ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಹಲವಾರು ಸಮಸ್ಯೆಗಳ ಮಧ್ಯೆ ಜೀವನ ನಡೆಸುತ್ತಿದ್ದೇವೆ. ಶಿಕ್ಷಣಕ್ಕೆ ಹೆಚ್ಚಿನ ಮಹತ್ವವಿದ್ದು, ಕಲಿಕೆಯಿಂದ ನಾವು ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು‘ ಎಂದು ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್. ಹೇಳಿದರು.</p>.<p>ನಗರದ ಆರ್ಯಭಟ್ಟ ಇಂಟರ್ ನ್ಯಾಷನಲ್ ಅಕಾಡೆಮಿ ಶಾಲೆಯಲ್ಲಿ ಆಯೋಜಿಸಿದ 10ನೇ ತರಗತಿ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ಜಿಲ್ಲೆಯ ಹಲವು ಶಾಲೆಗಳಿಗೆ ಭೇಟಿ ನೀಡಿದ್ದೇನೆ. ಇಲ್ಲಿನ ಕ್ಯಾಂಪಸ್ನಲ್ಲಿ ಬೆಳೆಸಿರುವ ಸಾವಿರಾರು ಗಿಡಮರಗಳು ಸಂತಸ ತಂದಿದೆ. ಹಸಿರಿನ ವಾತಾವರಣದ ನಡುವೆ ಕಲಿಯುವುದು ಉತ್ತಮವಾದದ್ದು‘ ಎಂದರು.</p>.<p>‘ವಿದ್ಯಾರ್ಥಿಗಳಿಗೆ ಆರೋಗ್ಯಕರ ವಾತಾವರಣಕ್ಕೆ ಶಾಲಾ ಆಡಳಿತ ಮಂಡಳಿ ಒತ್ತು ನೀಡಬೇಕು. ಇದು ಮಕ್ಕಳ ಮನಸ್ಸಿನ ಮೇಲೆ ಸಕಾರಾತ್ಮಕ ಪರಿಣಾಮ ಬೀರಿ, ಅವರ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗುತ್ತದೆ‘ ಎಂದುಅಭಿಪ್ರಾಯಪಟ್ಟರು.</p>.<p>ಬಡತನ ಹಾಗೂ ಸಂಕಷ್ಟಗಳ ನಡುವೆಯೂ ಗ್ರಾಮೀಣ ಭಾಗದ ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಲು ಪ್ರಯತ್ನಿಸುತ್ತಿದ್ದಾರೆ. ಇದು ಬದಲಾವಣೆಯ ಸಂಕೇತ. ಶಿಕ್ಷಣದಿಂದ ಸಮಾಜದ ಪ್ರತಿಯೊಬ್ಬರಿಗೂ ಅವಕಾಶಗಳು ಸಿಗಬೇಕು‘ ಎಂದು ಹೇಳಿದರು.</p>.<p>’ಶಾಲಾ ಶಿಕ್ಷಕರು ಹಾಗೂ ಪೋಷಕರು ತಮ್ಮ ಮಕ್ಕಳ ಮನಸ್ಥಿತಿ, ಆಸಕ್ತಿ ಗಮನಿಸಿ ಆ ದಿಸೆಯಲ್ಲಿ ಅವರಿಗೆ ಸೂಕ್ತ ಪ್ರೋತ್ಸಾಹ ನೀಡಬೇಕು. ಮುಂದಿನ ದಿನಗಳಲ್ಲಿ ಅವರು ತಮ್ಮ ಗುರಿ ತಲುಪುತ್ತಾರೆ. ಪಠ್ಯ-ಪುಸ್ತಕಗಳ ಅಭ್ಯಾಸದ ಜೊತೆಗೆ ಸ್ಪರ್ಧಾತ್ಮಕ ಪುಸ್ತಕಗಳತ್ತ ಗಮನಹರಿಸಬೇಕು. ಇದರಿಂದ ಮಕ್ಕಳಲ್ಲಿ ಜ್ಞಾನ್ ಸಂಪತ್ತು ವೃದ್ಧಿಯಾಗುತ್ತದೆ‘ ಎಂದು ಅವರು ಹೇಳಿದರು.</p>.<p>ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಧಾಕರರೆಡ್ಡಿ ಮಾಲಿಪಾಟೀಲ ಅನಪುರ ಮಾತನಾಡಿ, ’ಹಿಂದುಳಿದ ಭಾಗದಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಜತೆಗೆ ಅವರಲ್ಲಿ ಶಿಸ್ತು, ಸಮಯ ಪ್ರಜ್ಞೆ ಹಾಗೂ ದೇಶಾಭಿಮಾನ ಮೂಡಿಸಲು ಆದ್ಯತೆ ನೀಡಿದ್ದೇವೆ‘ ಎಂದು ತಿಳಿಸಿದರು.</p>.<p>‘ಕಳೆದ 2 ವರ್ಷಗಳಿಂದ ಕಂಡುಬರುತ್ತಿರುವ ಕೋವಿಡ್ ಪಿಡುಗು ಶಿಕ್ಷಣ ಕ್ಷೇತ್ರ ಮೇಲೆ ಕೆಟ್ಟ ಪರಿಣಾಮ ಬೀರಿತ್ತು. ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಶಿಕ್ಷಣ ನೀಡಿದ್ದೇವೆ. ಬರುವ ದಿನಗಳಲ್ಲಿ ಪರಿಣಾಮಕಾರಿಯಾದ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಪ್ರಯತ್ನಿಸುತ್ತೇವೆ‘ ಎಂದರು.</p>.<p>ವೇದಿಕೆ ಮೇಲೆ ಶಾಲಾ ಪ್ರಾಂಶುಪಾಲ ಅರವಿಂದಾಕ್ಷಣ ಇದ್ದರು. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶ್ರುತಿ ಗುಪ್ತಾ ಪ್ರಥಮ ಸ್ಥಾನ, ಶಯಿಸ್ತಾ ದ್ವಿತೀಯ ಸ್ಥಾನ ಪಡೆದಿದ್ದಾರೆ.</p>.<p>ಇದೇ ವೇಳೆ ಜಿಲ್ಲಾಧಿಕಾರಿ ಸಾಧಕ ವಿದ್ಯಾರ್ಥಿಗಳಿಗೆ ಪ್ರಶಸ್ತಿ, ಪ್ರಮಾಣ ಪತ್ರ ನೀಡಿ ಗೌರವಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ‘ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಹಲವಾರು ಸಮಸ್ಯೆಗಳ ಮಧ್ಯೆ ಜೀವನ ನಡೆಸುತ್ತಿದ್ದೇವೆ. ಶಿಕ್ಷಣಕ್ಕೆ ಹೆಚ್ಚಿನ ಮಹತ್ವವಿದ್ದು, ಕಲಿಕೆಯಿಂದ ನಾವು ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು‘ ಎಂದು ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್. ಹೇಳಿದರು.</p>.<p>ನಗರದ ಆರ್ಯಭಟ್ಟ ಇಂಟರ್ ನ್ಯಾಷನಲ್ ಅಕಾಡೆಮಿ ಶಾಲೆಯಲ್ಲಿ ಆಯೋಜಿಸಿದ 10ನೇ ತರಗತಿ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ಜಿಲ್ಲೆಯ ಹಲವು ಶಾಲೆಗಳಿಗೆ ಭೇಟಿ ನೀಡಿದ್ದೇನೆ. ಇಲ್ಲಿನ ಕ್ಯಾಂಪಸ್ನಲ್ಲಿ ಬೆಳೆಸಿರುವ ಸಾವಿರಾರು ಗಿಡಮರಗಳು ಸಂತಸ ತಂದಿದೆ. ಹಸಿರಿನ ವಾತಾವರಣದ ನಡುವೆ ಕಲಿಯುವುದು ಉತ್ತಮವಾದದ್ದು‘ ಎಂದರು.</p>.<p>‘ವಿದ್ಯಾರ್ಥಿಗಳಿಗೆ ಆರೋಗ್ಯಕರ ವಾತಾವರಣಕ್ಕೆ ಶಾಲಾ ಆಡಳಿತ ಮಂಡಳಿ ಒತ್ತು ನೀಡಬೇಕು. ಇದು ಮಕ್ಕಳ ಮನಸ್ಸಿನ ಮೇಲೆ ಸಕಾರಾತ್ಮಕ ಪರಿಣಾಮ ಬೀರಿ, ಅವರ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗುತ್ತದೆ‘ ಎಂದುಅಭಿಪ್ರಾಯಪಟ್ಟರು.</p>.<p>ಬಡತನ ಹಾಗೂ ಸಂಕಷ್ಟಗಳ ನಡುವೆಯೂ ಗ್ರಾಮೀಣ ಭಾಗದ ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಲು ಪ್ರಯತ್ನಿಸುತ್ತಿದ್ದಾರೆ. ಇದು ಬದಲಾವಣೆಯ ಸಂಕೇತ. ಶಿಕ್ಷಣದಿಂದ ಸಮಾಜದ ಪ್ರತಿಯೊಬ್ಬರಿಗೂ ಅವಕಾಶಗಳು ಸಿಗಬೇಕು‘ ಎಂದು ಹೇಳಿದರು.</p>.<p>’ಶಾಲಾ ಶಿಕ್ಷಕರು ಹಾಗೂ ಪೋಷಕರು ತಮ್ಮ ಮಕ್ಕಳ ಮನಸ್ಥಿತಿ, ಆಸಕ್ತಿ ಗಮನಿಸಿ ಆ ದಿಸೆಯಲ್ಲಿ ಅವರಿಗೆ ಸೂಕ್ತ ಪ್ರೋತ್ಸಾಹ ನೀಡಬೇಕು. ಮುಂದಿನ ದಿನಗಳಲ್ಲಿ ಅವರು ತಮ್ಮ ಗುರಿ ತಲುಪುತ್ತಾರೆ. ಪಠ್ಯ-ಪುಸ್ತಕಗಳ ಅಭ್ಯಾಸದ ಜೊತೆಗೆ ಸ್ಪರ್ಧಾತ್ಮಕ ಪುಸ್ತಕಗಳತ್ತ ಗಮನಹರಿಸಬೇಕು. ಇದರಿಂದ ಮಕ್ಕಳಲ್ಲಿ ಜ್ಞಾನ್ ಸಂಪತ್ತು ವೃದ್ಧಿಯಾಗುತ್ತದೆ‘ ಎಂದು ಅವರು ಹೇಳಿದರು.</p>.<p>ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಧಾಕರರೆಡ್ಡಿ ಮಾಲಿಪಾಟೀಲ ಅನಪುರ ಮಾತನಾಡಿ, ’ಹಿಂದುಳಿದ ಭಾಗದಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಜತೆಗೆ ಅವರಲ್ಲಿ ಶಿಸ್ತು, ಸಮಯ ಪ್ರಜ್ಞೆ ಹಾಗೂ ದೇಶಾಭಿಮಾನ ಮೂಡಿಸಲು ಆದ್ಯತೆ ನೀಡಿದ್ದೇವೆ‘ ಎಂದು ತಿಳಿಸಿದರು.</p>.<p>‘ಕಳೆದ 2 ವರ್ಷಗಳಿಂದ ಕಂಡುಬರುತ್ತಿರುವ ಕೋವಿಡ್ ಪಿಡುಗು ಶಿಕ್ಷಣ ಕ್ಷೇತ್ರ ಮೇಲೆ ಕೆಟ್ಟ ಪರಿಣಾಮ ಬೀರಿತ್ತು. ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಶಿಕ್ಷಣ ನೀಡಿದ್ದೇವೆ. ಬರುವ ದಿನಗಳಲ್ಲಿ ಪರಿಣಾಮಕಾರಿಯಾದ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಪ್ರಯತ್ನಿಸುತ್ತೇವೆ‘ ಎಂದರು.</p>.<p>ವೇದಿಕೆ ಮೇಲೆ ಶಾಲಾ ಪ್ರಾಂಶುಪಾಲ ಅರವಿಂದಾಕ್ಷಣ ಇದ್ದರು. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶ್ರುತಿ ಗುಪ್ತಾ ಪ್ರಥಮ ಸ್ಥಾನ, ಶಯಿಸ್ತಾ ದ್ವಿತೀಯ ಸ್ಥಾನ ಪಡೆದಿದ್ದಾರೆ.</p>.<p>ಇದೇ ವೇಳೆ ಜಿಲ್ಲಾಧಿಕಾರಿ ಸಾಧಕ ವಿದ್ಯಾರ್ಥಿಗಳಿಗೆ ಪ್ರಶಸ್ತಿ, ಪ್ರಮಾಣ ಪತ್ರ ನೀಡಿ ಗೌರವಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>