ಅಲ್ಲಿ ಕನ್ನಡಿಗರು ನಿರ್ಮಾಣ ಮಾಡಿರುವ ದೇವಸ್ಥಾನದಲ್ಲಿ ಮುಖ್ಯ ಅರ್ಚಕ ಗುರುಪಾದಯ್ಯ ಸ್ವಾಮಿ ನೇತೃತ್ವದಲ್ಲಿ ಓಂಕಾರಯ್ಯ ಸ್ವಾಮಿ ಅವರು ಮಲ್ಲಮ್ಮ ಮೂರ್ತಿಗೆ ವಿಶೇಷ ಅಲಂಕಾರ ಮಾಡಿ ಪೂಜೆ ಸಲ್ಲಿಸಿ, ಭಕ್ತರಿಗೆ ಮಲ್ಲಮ್ಮಳ ಸಂದೇಶ ತಿಳಿಸಿದರು. ಜಯಂತಿ ಅಂಗವಾಗಿ ಕರ್ನಾಟಕ, ತೆಲಂಗಾಣ, ಮಹಾರಾಷ್ಟ್ರ ರಾಜ್ಯಗಳಿಂದ ಸಾವಿರಾರು ಭಕ್ತರು ಭೇಟಿ ನೀಡಿ ಮಲ್ಲಮ್ಮ ದರ್ಶನ ಪಡೆದರು.