ಯಾದಗಿರಿ: ಶ್ರೀಶೈಲದಲ್ಲಿ ವಿಶೇಷ ಪೂಜೆ

ಯಾದಗಿರಿ: ಮಹಾಸಾಧ್ವಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಅವರ 600ನೇ ಜಯಂತಿ ಅಂಗವಾಗಿ ಅವರ ಕರ್ಮಭೂಮಿ ನೆರೆಯ ಆಂಧ್ರಪ್ರದೇಶದ ಶ್ರೀಶೈಲದಲ್ಲಿರುವ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದಲ್ಲಿ ಮಂಗಳವಾರ ಬೆಳಿಗ್ಗೆ ವಿಶೇಷ ಪೂಜೆ ಕೈಕಂರ್ಯಗಳು ನಡೆದವು.
ಅಲ್ಲಿ ಕನ್ನಡಿಗರು ನಿರ್ಮಾಣ ಮಾಡಿರುವ ದೇವಸ್ಥಾನದಲ್ಲಿ ಮುಖ್ಯ ಅರ್ಚಕ ಗುರುಪಾದಯ್ಯ ಸ್ವಾಮಿ ನೇತೃತ್ವದಲ್ಲಿ ಓಂಕಾರಯ್ಯ ಸ್ವಾಮಿ ಅವರು ಮಲ್ಲಮ್ಮ ಮೂರ್ತಿಗೆ ವಿಶೇಷ ಅಲಂಕಾರ ಮಾಡಿ ಪೂಜೆ ಸಲ್ಲಿಸಿ, ಭಕ್ತರಿಗೆ ಮಲ್ಲಮ್ಮಳ ಸಂದೇಶ ತಿಳಿಸಿದರು. ಜಯಂತಿ ಅಂಗವಾಗಿ ಕರ್ನಾಟಕ, ತೆಲಂಗಾಣ, ಮಹಾರಾಷ್ಟ್ರ ರಾಜ್ಯಗಳಿಂದ ಸಾವಿರಾರು ಭಕ್ತರು ಭೇಟಿ ನೀಡಿ ಮಲ್ಲಮ್ಮ ದರ್ಶನ ಪಡೆದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.