ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ: ಶ್ರೀಶೈಲದಲ್ಲಿ ವಿಶೇಷ ಪೂಜೆ

Last Updated 10 ಮೇ 2022, 16:35 IST
ಅಕ್ಷರ ಗಾತ್ರ

ಯಾದಗಿರಿ: ಮಹಾಸಾಧ್ವಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಅವರ 600ನೇ ಜಯಂತಿ ಅಂಗವಾಗಿ ಅವರ ಕರ್ಮಭೂಮಿ ನೆರೆಯ ಆಂಧ್ರಪ್ರದೇಶದ ಶ್ರೀಶೈಲದಲ್ಲಿರುವ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದಲ್ಲಿ ಮಂಗಳವಾರ ಬೆಳಿಗ್ಗೆ ವಿಶೇಷ ಪೂಜೆ ಕೈಕಂರ್ಯಗಳು ನಡೆದವು.

ಅಲ್ಲಿ ಕನ್ನಡಿಗರು ನಿರ್ಮಾಣ ಮಾಡಿರುವ ದೇವಸ್ಥಾನದಲ್ಲಿ ಮುಖ್ಯ ಅರ್ಚಕ ಗುರುಪಾದಯ್ಯ ಸ್ವಾಮಿ ನೇತೃತ್ವದಲ್ಲಿ ಓಂಕಾರಯ್ಯ ಸ್ವಾಮಿ ಅವರು ಮಲ್ಲಮ್ಮ ಮೂರ್ತಿಗೆ ವಿಶೇಷ ಅಲಂಕಾರ ಮಾಡಿ ಪೂಜೆ ಸಲ್ಲಿಸಿ, ಭಕ್ತರಿಗೆ ಮಲ್ಲಮ್ಮಳ ಸಂದೇಶ ತಿಳಿಸಿದರು. ಜಯಂತಿ ಅಂಗವಾಗಿ ಕರ್ನಾಟಕ, ತೆಲಂಗಾಣ, ಮಹಾರಾಷ್ಟ್ರ ರಾಜ್ಯಗಳಿಂದ ಸಾವಿರಾರು ಭಕ್ತರು ಭೇಟಿ ನೀಡಿ ಮಲ್ಲಮ್ಮ ದರ್ಶನ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT