ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಳಿಚಕ್ರ: ಗ್ರಾಮೀಣ ಕ್ರೀಡಾಕೂಟ

Last Updated 17 ನವೆಂಬರ್ 2022, 5:51 IST
ಅಕ್ಷರ ಗಾತ್ರ

ಸೈದಾಪುರ: ‘ಗ್ರಾಮೀಣ ಪ್ರತಿಭೆಗಳ ಅನಾವರಣಕ್ಕೆ ಸರ್ಕಾರ ಮುಂದಾಗಿರುವುದು ಉತ್ತಮ ಕಾರ್ಯ’ ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅನುರಾಧ ಅಭಿಪ್ರಾಯಪಟ್ಟರು.

ಸಮೀಪದ ಬಳಿಚಕ್ರ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ ರಾಜ್ ಇಲಾಖೆ ಹಾಗೂ ಗ್ರಾಮ ಪಂಚಾಯಿತಿಯಿಂದ ಆಯೋಜಿಸಿದ ಗ್ರಾಮೀಣ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು. ದೇಶಿಯ ಕ್ರೀಡೆಗಳಾದ ಕಬ್ಬಡಿ, ಕೊಕ್ಕೊ, ಎತ್ತಿನ ಬಂಡಿ, ಕುಸ್ತಿಯಂತಹ ಕ್ರೀಡೆಗಳಿಗೆ ಉತ್ತೇಜನ ನೀಡಲು ಪಂಚಾಯಿತಿ ಮಟ್ಟದಿಂದ ರಾಜ್ಯ ಮಟ್ಟದವರೆಗೂ ಗ್ರಾಮೀಣ ಕ್ರೀಡಾಕೂಟ ಆಯೋಜನೆ ಮಾಡಲಾಗುತ್ತಿದ್ದು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಫಾತಿಮಾ.ಬಿ, ಉಪಾಧ್ಯಕ್ಷೆ ಗಂಗಮ್ಮ, ಕಾರ್ಯದರ್ಶಿ ಕೆ.ಪ್ರಭು, ಗ್ರಾಮ ಪಂಚಾಯಿತಿ ಸದಸ್ಯರು, ಸಿಬ್ಬಂದಿ, ತಾಯಪ್ಪ ಬೊಮ್ಮಣ್ಣೋರ್, ದೈಹಿಕ ಶಿಕ್ಷಣ ಶಿಕ್ಷಕರು
ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT