ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

​ಕ್ರೀಡೆಗಳಿಂದ ಸರ್ವತೋಮುಖ ವಿಕಾಸ

Last Updated 28 ನವೆಂಬರ್ 2022, 7:33 IST
ಅಕ್ಷರ ಗಾತ್ರ

ಯಾದಗಿರಿ: ಕ್ರೀಡೆಗಳಲ್ಲಿ ಭಾಗವಹಿಸು ವುದರಿಂದ ಆರೋಗ್ಯಯುತ ದೈಹಿಕ ಮತ್ತು ಉತ್ತಮ ಮಾನಸಿಕ ಆರೋಗ್ಯದಿಂದ ಸರ್ವತೋಮುಖ ವಿಕಾಸವಾಗುತ್ತದೆ ಎಂದು ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ ಸಂಗ್ವಾರ ಅಭಿಪ್ರಾಯಪಟ್ಟರು.

ಜಿಲ್ಲೆಯ ವಡಗೇರಾ ತಾಲ್ಲೂಕಿನ ಹಾಲಗೇರಾ ಗ್ರಾಮದಲ್ಲಿ ಜಿಲ್ಲಾ ಪಂಚಾಯಿತಿ ಯಾದಗಿರಿ, ತಾಲ್ಲೂಕು ಪಂಚಾಯಿತಿ ವಡಗೇರಾ ಸಹಯೋಗದಲ್ಲಿ ಆಯೊಜಿಸಿದ್ದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.

ಪಿಡಿಒ ಮಲ್ಲಿಕಾರ್ಜುನ ಸಜ್ಜನಶೆಟ್ಟಿ ಮಾತನಾಡಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಿವಮ್ಮ ಮಹಾದೇವಪ್ಪ, ಉಪಾಧ್ಯಕ್ಷ ನಾಗರೆಡ್ಡಿ ರಾಮನಾಳ, ಜಿಲ್ಲಾ ಪಂಚಾಯಿತಿ ವ್ಯವಸ್ಥಾಪಕ ಅಶೋಕ ಕಲಾಲ, ಗ್ರಾಮ ಪಂಚಾಯಿತಿ ಸದಸ್ಯ ಶರಣು ಕುರಿ, ಅಜ್ಮೀರಭಾಷಾ, ನೂರಬಾಯಿ ಹಾಲಗೇರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT