<p><strong>ಯಾದಗಿರಿ</strong>: ರಾಜ್ಯದಲ್ಲಿ ವ್ಯಾಪಕವಾಗಿ ಹಬ್ಬುತ್ತಿರುವ ‘ಡ್ರಗ್ಸ್ ಜಿಹಾದ್’ ನಿರ್ಮೂಲನೆಗೆ ಆಗ್ರಹಿಸಿ ಶ್ರೀರಾಮ ಸೇನೆ ಕಾರ್ಯಕರ್ತರು ಗುರುವಾರ ಇಲ್ಲಿ ಜಿಲ್ಲಾಧಿಕಾರಿ ಕಚೇರಿ ಬಳಿ ಗುರುವಾರ ಪ್ರತಿಭಟನೆ ನಡೆಸಿದರು.</p>.<p>ಶ್ರೀರಾಮಸೇನೆ ಕಲ್ಯಾಣ ಕರ್ನಾಟಕ ಅಧ್ಯಕ್ಷ ವಿಜಯಕುಮಾರ ಪಾಟೀಲ ಮಾತನಾಡಿ, ರಾಜ್ಯದಲ್ಲಿ ಹಲವಾರು ವರ್ಷಗಳಿಂದ ಡ್ರಗ್ಸ್ ಜಿಹಾದ್ನ ಅಂತರರಾಷ್ಟ್ರೀಯ ಜಾಲ ವ್ಯಾಪಕವಾಗಿ ಹರಡಿ ರಾಜ್ಯದ ಘನತೆಗೆ, ಯುವ ಸಮುದಾಯಕ್ಕೆ ಶಾಪವಾಗಿ ಪರಿಣಮಿಸಿದೆ. ಇದುದೇಶದ ಭವಿಷ್ಯಕ್ಕೆ ಕಂಟಕವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಡ್ರಗ್ಸ್ ಜಿಹಾದ್ ಕಬಂಧಬಾಹುಗಳು ಎಲ್ಲೆಡೆ ಚಾಚಿದ್ದು, ಇವುಗಳನ್ನು ಬೇರು ಸಮೇತ ಕಿತ್ತು ಹಾಕಬೇಕು. ಕೂಡಲೇ ಸರ್ಕಾರ ಕಾರ್ಯಪ್ರವೃತ್ತರಾಗಿ ಡ್ರಗ್ಸ್ ಮಾರಾಟ ಹಾಗೂ ಸಾಗಾಟ ಮಾಡುವವರನ್ನು ರಾಷ್ಟ್ರೀಯ ಸುರಕ್ಷಾ ಕಾಯಿದೆಯಲ್ಲಿ ಬಂಧಿಸುವಂತೆ ಕಾನೂನು ರೂಪಿಸಬೇಕು ಎಂದು ಒತ್ತಾಯಿಸಿದರು.</p>.<p>ಶಾಲಾ, ಕಾಲೇಜುಗಳ ಸುತ್ತಮುತ್ತ ಗುಪ್ತಚರ ಇಲಾಖೆಯ ಗಸ್ತು ಹೆಚ್ಚಿಸಬೇಕು. ಯಾವ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಡ್ರಗ್ಸ್ ಪತ್ತೆಯಾಗುತ್ತೋ ಆ ಠಾಣಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಜವಾಬ್ದಾರರನ್ನಾಗಿ ಮಾಡಬೇಕು ಎಂದರು.</p>.<p>ಪಬ್, ಕ್ಲಬ್, ಲೈವ್ ಬ್ಯಾಂಡ್, ಸ್ಟಾರ್ ಹೋಟೆಲ್ ಮುಂತಾದ ಸ್ಥಳಗಳಲ್ಲಿ ನಿರಂತರ ನಿಗಾ ಇರಿಸಿ ತನಿಖೆ ನಡೆಸಬೇಕು. ಕೆಲವು ರಾಜಕಾರಣಿಗಳು, ದೊಡ್ಡ ಉದ್ದಿಮೆದಾರರು, ಪಕ್ಷಗಳಿಗೆ ದೇಣಿಗೆ ನೀಡುವ ದೊಡ್ಡ ಕುಳಗಳು ಈ ದಂಧೆಯ ಹಿಂದೆ ಇರುವುದರ ಬಗ್ಗೆ ತನಿಖೆ ಮಾಡಬೇಕು ಎಂದು ಆಗ್ರಹಿಸಿದರು.</p>.<p>ತಾಲ್ಲೂಕು ಅಧ್ಯಕ್ಷ ಸಂದೀಪ್ ಮಹೇಂದ್ರಕರ್, ವಡಗೇರಾ ತಾಲ್ಲೂಕು ಅಧ್ಯಕ್ಷ ಅಂಬರೀಷ್ ತಡಿಬಿಡಿ, ಹನುಮಂತರಾಯ್ ಪಾಟೀಲ, ಸುಭಾಷ್ ದೇವದುರ್ಗ, ಶರಣಮ್ಮ ಜೋತ್ತೆ, ಚನ್ನಬಸಮ್ಮ ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ</strong>: ರಾಜ್ಯದಲ್ಲಿ ವ್ಯಾಪಕವಾಗಿ ಹಬ್ಬುತ್ತಿರುವ ‘ಡ್ರಗ್ಸ್ ಜಿಹಾದ್’ ನಿರ್ಮೂಲನೆಗೆ ಆಗ್ರಹಿಸಿ ಶ್ರೀರಾಮ ಸೇನೆ ಕಾರ್ಯಕರ್ತರು ಗುರುವಾರ ಇಲ್ಲಿ ಜಿಲ್ಲಾಧಿಕಾರಿ ಕಚೇರಿ ಬಳಿ ಗುರುವಾರ ಪ್ರತಿಭಟನೆ ನಡೆಸಿದರು.</p>.<p>ಶ್ರೀರಾಮಸೇನೆ ಕಲ್ಯಾಣ ಕರ್ನಾಟಕ ಅಧ್ಯಕ್ಷ ವಿಜಯಕುಮಾರ ಪಾಟೀಲ ಮಾತನಾಡಿ, ರಾಜ್ಯದಲ್ಲಿ ಹಲವಾರು ವರ್ಷಗಳಿಂದ ಡ್ರಗ್ಸ್ ಜಿಹಾದ್ನ ಅಂತರರಾಷ್ಟ್ರೀಯ ಜಾಲ ವ್ಯಾಪಕವಾಗಿ ಹರಡಿ ರಾಜ್ಯದ ಘನತೆಗೆ, ಯುವ ಸಮುದಾಯಕ್ಕೆ ಶಾಪವಾಗಿ ಪರಿಣಮಿಸಿದೆ. ಇದುದೇಶದ ಭವಿಷ್ಯಕ್ಕೆ ಕಂಟಕವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಡ್ರಗ್ಸ್ ಜಿಹಾದ್ ಕಬಂಧಬಾಹುಗಳು ಎಲ್ಲೆಡೆ ಚಾಚಿದ್ದು, ಇವುಗಳನ್ನು ಬೇರು ಸಮೇತ ಕಿತ್ತು ಹಾಕಬೇಕು. ಕೂಡಲೇ ಸರ್ಕಾರ ಕಾರ್ಯಪ್ರವೃತ್ತರಾಗಿ ಡ್ರಗ್ಸ್ ಮಾರಾಟ ಹಾಗೂ ಸಾಗಾಟ ಮಾಡುವವರನ್ನು ರಾಷ್ಟ್ರೀಯ ಸುರಕ್ಷಾ ಕಾಯಿದೆಯಲ್ಲಿ ಬಂಧಿಸುವಂತೆ ಕಾನೂನು ರೂಪಿಸಬೇಕು ಎಂದು ಒತ್ತಾಯಿಸಿದರು.</p>.<p>ಶಾಲಾ, ಕಾಲೇಜುಗಳ ಸುತ್ತಮುತ್ತ ಗುಪ್ತಚರ ಇಲಾಖೆಯ ಗಸ್ತು ಹೆಚ್ಚಿಸಬೇಕು. ಯಾವ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಡ್ರಗ್ಸ್ ಪತ್ತೆಯಾಗುತ್ತೋ ಆ ಠಾಣಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಜವಾಬ್ದಾರರನ್ನಾಗಿ ಮಾಡಬೇಕು ಎಂದರು.</p>.<p>ಪಬ್, ಕ್ಲಬ್, ಲೈವ್ ಬ್ಯಾಂಡ್, ಸ್ಟಾರ್ ಹೋಟೆಲ್ ಮುಂತಾದ ಸ್ಥಳಗಳಲ್ಲಿ ನಿರಂತರ ನಿಗಾ ಇರಿಸಿ ತನಿಖೆ ನಡೆಸಬೇಕು. ಕೆಲವು ರಾಜಕಾರಣಿಗಳು, ದೊಡ್ಡ ಉದ್ದಿಮೆದಾರರು, ಪಕ್ಷಗಳಿಗೆ ದೇಣಿಗೆ ನೀಡುವ ದೊಡ್ಡ ಕುಳಗಳು ಈ ದಂಧೆಯ ಹಿಂದೆ ಇರುವುದರ ಬಗ್ಗೆ ತನಿಖೆ ಮಾಡಬೇಕು ಎಂದು ಆಗ್ರಹಿಸಿದರು.</p>.<p>ತಾಲ್ಲೂಕು ಅಧ್ಯಕ್ಷ ಸಂದೀಪ್ ಮಹೇಂದ್ರಕರ್, ವಡಗೇರಾ ತಾಲ್ಲೂಕು ಅಧ್ಯಕ್ಷ ಅಂಬರೀಷ್ ತಡಿಬಿಡಿ, ಹನುಮಂತರಾಯ್ ಪಾಟೀಲ, ಸುಭಾಷ್ ದೇವದುರ್ಗ, ಶರಣಮ್ಮ ಜೋತ್ತೆ, ಚನ್ನಬಸಮ್ಮ ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>