ಪೌರತ್ವ ಕಾಯಿದೆಯ ಕುರಿತು ವರದಿಗಾರರು ಕೇಳಿದ ಪ್ರಶ್ನೆಗೆ ಮಾತನಾಡಿ, ‘ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರು ಎಲ್ಲಾ ವಿಚಾರಿಸಿಯೇ ಈ ಕಾಯ್ದೆಯನ್ನು ರೂಪಿಸಿದ್ದಾರೆ. ಪೌರತ್ವ ಕಾಯಿದೆಯಿಂದ ದೇಶದಲ್ಲಿನ ಯಾವುದೇ ಧರ್ಮದವರಿಗೂ ತೊಂದರೆಯಾಗುವುದಿಲ್ಲ. ಇದರ ಬಗ್ಗೆ ಅನುಮಾನ ವ್ಯಕ್ತಪಡಿಸುವ ಅವಶ್ಯಕತೆಯಿಲ್ಲ’ ಎಂದರು.