ಪ್ರವೇಶ ಪತ್ರ ಪಡೆದು ಬರುವಾಗ ಹೃದಯಾಘಾತದಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು

ಗುರುಮಠಕಲ್ (ಯಾದಗಿರಿ): ಎಸ್ಸೆಸ್ಸೆಲ್ಸಿ ಪರೀಕ್ಷಾ ಪ್ರವೇಶ ಪತ್ರ ಪಡೆದು ಹಿಂದಿರುಗುವಾಗ ತೀವ್ರ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಪಟ್ಟಣದಲ್ಲಿ ಬುಧವಾರ ಜರುಗಿದೆ.
ತಾಲ್ಲೂಕಿನ ಪುಟಪಾಕ ಗ್ರಾಮದ ವಿದ್ಯಾರ್ಥಿ ನಿಶಿತಾ ಫಾತಿಮಾ ಎಂ.ಡಿ.ಮೌಲಾನ (16) ಮೃತಪಟ್ಟ ವಿದ್ಯಾರ್ಥಿನಿ.
ಪಟ್ಟಣದ ಸರ್ಕಾರಿ ಬಾಲಕಿಯರ ಉರ್ದು ಪ್ರೌಢ ಶಾಲೆಯಲ್ಲಿ ಹತ್ತನೇ ತರಗತಿಯಲ್ಲಿ ನಿಶಿತಾ ಫಾತಿಮಾ ಅಭ್ಯಾಸ ಮಾಡುತ್ತಿದ್ದಳು. ಜುಲೈ 19, 22ರಂದು ಜರುಗಲಿರುವ ಪರೀಕ್ಷೆಗಾಗಿ ಶಾಲೆಯಲ್ಲಿ ಬುಧವಾರ ಪ್ರವೇಶ ಪತ್ರ ಪಡೆದುಕೊಂಡು ಗ್ರಾಮಕ್ಕೆ ಹಿಂದಿರುಗಲು ಗುರುಮಠಕಲ್ ಬಸ್ ನಿಲ್ದಾಣದಲ್ಲಿ ಕಾಯುತ್ತಾ ಕುಳಿತ್ತಿದ್ದ ಸಮಯದಲ್ಲಿ ಹೃದಯಾಘಾತವಾಗಿ ಮೃತಪಟ್ಟಿದ್ದಾಳೆ.
ಈ ಕುರಿತು ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.