ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರವೇಶ ಪತ್ರ ಪಡೆದು ಬರುವಾಗ ಹೃದಯಾಘಾತದಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು

Last Updated 14 ಜುಲೈ 2021, 17:06 IST
ಅಕ್ಷರ ಗಾತ್ರ

ಗುರುಮಠಕಲ್ (ಯಾದಗಿರಿ): ಎಸ್ಸೆಸ್ಸೆಲ್ಸಿ ಪರೀಕ್ಷಾ ಪ್ರವೇಶ ಪತ್ರ ಪಡೆದು ಹಿಂದಿರುಗುವಾಗ ತೀವ್ರ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಪಟ್ಟಣದಲ್ಲಿ ಬುಧವಾರ ಜರುಗಿದೆ.

ತಾಲ್ಲೂಕಿನ ಪುಟಪಾಕ ಗ್ರಾಮದ ವಿದ್ಯಾರ್ಥಿ ನಿಶಿತಾ ಫಾತಿಮಾ ಎಂ.ಡಿ.ಮೌಲಾನ (16) ಮೃತಪಟ್ಟ ವಿದ್ಯಾರ್ಥಿನಿ.

ಪಟ್ಟಣದ ಸರ್ಕಾರಿ ಬಾಲಕಿಯರ ಉರ್ದು ಪ್ರೌಢ ಶಾಲೆಯಲ್ಲಿ ಹತ್ತನೇ ತರಗತಿಯಲ್ಲಿ ನಿಶಿತಾ ಫಾತಿಮಾ ಅಭ್ಯಾಸ ಮಾಡುತ್ತಿದ್ದಳು. ಜುಲೈ 19, 22ರಂದು ಜರುಗಲಿರುವ ಪರೀಕ್ಷೆಗಾಗಿ ಶಾಲೆಯಲ್ಲಿ ಬುಧವಾರ ಪ್ರವೇಶ ಪತ್ರ ಪಡೆದುಕೊಂಡು ಗ್ರಾಮಕ್ಕೆ ಹಿಂದಿರುಗಲು ಗುರುಮಠಕಲ್‌ ಬಸ್‌ ನಿಲ್ದಾಣದಲ್ಲಿ ಕಾಯುತ್ತಾ ಕುಳಿತ್ತಿದ್ದ ಸಮಯದಲ್ಲಿ ಹೃದಯಾಘಾತವಾಗಿ ಮೃತಪಟ್ಟಿದ್ದಾಳೆ.

ಈ ಕುರಿತು ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT