<p><strong>ಯಾದಗಿರಿ</strong>: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಮೂರು ದಿನಗಳ ಕಾಲ ಆಯೋಜಿಸಿದ್ದ ರಾಜ್ಯಮಟ್ಟದ 5ನೇ ವೈಜ್ಞಾನಿಕ ಸಮ್ಮೇಳನ ಮಂಗಳವಾರ ಸಂಪನ್ನಗೊಂಡಿತು.</p>.<p>ಸಚಿವ ಸತೀಶ ಜಾರಕಿಹೊಳಿ ಅವರ ಮನವಿ ಮೇರೆಗೆ ಬೆಳಗಾವಿಯಲ್ಲಿ 6ನೇ ವೈಜ್ಞಾನಿಕ ಸಮ್ಮೇಳನ ನಡೆಸುವ ನಿರ್ಣಯ ಕೈಗೊಳ್ಳಲಾಯಿತು.</p>.<p>ಸಂಚಾರಿ ಡಿಜಿಟಲ್ ತಾರಾಲಯ, ಇಸ್ರೊ ಮತ್ತು ವಾಯುಪಡೆಯ ಸಂಚಾರಿ ಡಿಜಿಟಿಲ್ ವಾಹನಗಳು ವಿದ್ಯಾರ್ಥಿಗಳಲ್ಲಿ ಖಗೋಳ ವಿಜ್ಞಾನದ ಕೌತುಕವನ್ನು ಬಿತ್ತಿ, ವಿಜ್ಞಾನ ಕಲಿಕೆಗೆ ಆಸಕ್ತಿ ಮೂಡಿಸಿದವು. ಗೋಷ್ಠಿಗಳನ್ನು ಬದಿಗಿರಿಸಿ ಸರತಿ ಸಾಲಿನಲ್ಲಿ ನಿಂತು ವೀಕ್ಷಣೆ ಮಾಡಿದರು.</p>.<p>ಕಲ್ಯಾಣದ ನೆಲದಲ್ಲಿ ಮೌಢ್ಯ ಮತ್ತು ಕಂದಾಚಾರಗಳು ಅಳಿದು, ವೈಚಾರಿಕತೆ ಮತ್ತು ವಿಜ್ಞಾನ ಜತೆಯಾಗಿ ಸಾಗಲಿ ಎಂಬ ಆಶಯ ವ್ಯಕ್ತವಾಯಿತು. ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆಯೊಂದಿಗೆ ಪವಾಡಗಳ ಅನಾವರಣದ ಪ್ರಾತ್ಯಕ್ಷಿಕೆಯೂ ಜರುಗಿತು. ಸಂವಿಧಾನ– ಸಂವೇದ, ಕಂಚಾರ, ವಿಜ್ಞಾನ ದೀವಿಗೆ, ರೈತರ ಎದುರಿಸುತ್ತಿರುವ ಸಮಸ್ಯೆಗಳ ಚರ್ಚೆಗೂ ವೇದಿಕೆಯಾಯಿತು.</p>.<p>ಸಾಧಕರಿಗೆ ಪ್ರೋತ್ಸಾಹಿಸಲು ಜೀವಮಾನ ಸಾಧನಾ, ವಿಶಿಷ್ಟ ಸೇವಾ, ರಾಜ್ಯಮಟ್ಟದ ಡಾ.ಎಚ್.ಎನ್ ಹಾಗೂ ಚೈತನ್ಯ ಶ್ರೀ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.</p>
<p><strong>ಯಾದಗಿರಿ</strong>: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಮೂರು ದಿನಗಳ ಕಾಲ ಆಯೋಜಿಸಿದ್ದ ರಾಜ್ಯಮಟ್ಟದ 5ನೇ ವೈಜ್ಞಾನಿಕ ಸಮ್ಮೇಳನ ಮಂಗಳವಾರ ಸಂಪನ್ನಗೊಂಡಿತು.</p>.<p>ಸಚಿವ ಸತೀಶ ಜಾರಕಿಹೊಳಿ ಅವರ ಮನವಿ ಮೇರೆಗೆ ಬೆಳಗಾವಿಯಲ್ಲಿ 6ನೇ ವೈಜ್ಞಾನಿಕ ಸಮ್ಮೇಳನ ನಡೆಸುವ ನಿರ್ಣಯ ಕೈಗೊಳ್ಳಲಾಯಿತು.</p>.<p>ಸಂಚಾರಿ ಡಿಜಿಟಲ್ ತಾರಾಲಯ, ಇಸ್ರೊ ಮತ್ತು ವಾಯುಪಡೆಯ ಸಂಚಾರಿ ಡಿಜಿಟಿಲ್ ವಾಹನಗಳು ವಿದ್ಯಾರ್ಥಿಗಳಲ್ಲಿ ಖಗೋಳ ವಿಜ್ಞಾನದ ಕೌತುಕವನ್ನು ಬಿತ್ತಿ, ವಿಜ್ಞಾನ ಕಲಿಕೆಗೆ ಆಸಕ್ತಿ ಮೂಡಿಸಿದವು. ಗೋಷ್ಠಿಗಳನ್ನು ಬದಿಗಿರಿಸಿ ಸರತಿ ಸಾಲಿನಲ್ಲಿ ನಿಂತು ವೀಕ್ಷಣೆ ಮಾಡಿದರು.</p>.<p>ಕಲ್ಯಾಣದ ನೆಲದಲ್ಲಿ ಮೌಢ್ಯ ಮತ್ತು ಕಂದಾಚಾರಗಳು ಅಳಿದು, ವೈಚಾರಿಕತೆ ಮತ್ತು ವಿಜ್ಞಾನ ಜತೆಯಾಗಿ ಸಾಗಲಿ ಎಂಬ ಆಶಯ ವ್ಯಕ್ತವಾಯಿತು. ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆಯೊಂದಿಗೆ ಪವಾಡಗಳ ಅನಾವರಣದ ಪ್ರಾತ್ಯಕ್ಷಿಕೆಯೂ ಜರುಗಿತು. ಸಂವಿಧಾನ– ಸಂವೇದ, ಕಂಚಾರ, ವಿಜ್ಞಾನ ದೀವಿಗೆ, ರೈತರ ಎದುರಿಸುತ್ತಿರುವ ಸಮಸ್ಯೆಗಳ ಚರ್ಚೆಗೂ ವೇದಿಕೆಯಾಯಿತು.</p>.<p>ಸಾಧಕರಿಗೆ ಪ್ರೋತ್ಸಾಹಿಸಲು ಜೀವಮಾನ ಸಾಧನಾ, ವಿಶಿಷ್ಟ ಸೇವಾ, ರಾಜ್ಯಮಟ್ಟದ ಡಾ.ಎಚ್.ಎನ್ ಹಾಗೂ ಚೈತನ್ಯ ಶ್ರೀ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.</p>