<p><strong>ಯಾದಗಿರಿ:</strong> ರಸ್ತೆ ಉದ್ದಕ್ಕೂ ಓಡಾಡಿ, ಎಲ್ಲೆಂದರಲ್ಲಿ ನಿಂತು ವಾಹನ ಸಂಚಾರಿಗಳ ಪ್ರಾಣಕ್ಕೆ ಸಂಚಕಾರ ತಂದೊಡ್ಡಿ, ರಸ್ತೆ ಅಪಘಾತಗಳಿಗೂ ಕಾರಣ ಆಗುತ್ತಿದ್ದ ಬಿಡಾಡಿ ದನಗಳನ್ನು ಕಾರ್ಯಾಚರಣೆ ನಡೆಸಿ ಅವುಗಳನ್ನು ಗೋಶಾಲೆಗೆ ಸಾಗಿಸಲಾಯಿತು.</p>.<p>ನಗರದ ರಸ್ತೆಗಳಲ್ಲಿ ನಿಂತು, ಮಲಗಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದವು. ನಗರಸಭೆ ಪೌರಾಯುಕ್ತ ಉಮೇಶ ಚವ್ಹಾಣ್ ಅವರ ನೇತೃತ್ವದಲ್ಲಿ ತಡರಾತ್ರಿ ಕಾರ್ಯಾಚರಣೆ ನಡೆಸಿ, ನೆರೆಯ ರಾಯಚೂರು ಹೊರವಲಯದ ಆಲೂರ ಸಮೀಪದ ಜ್ಯೋರ್ತಿಲಿಂಗೇಶ್ವರ ಗೋಶಾಲೆಯಲ್ಲಿ ಬಿಟ್ಟು ಬರಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ನೇತಾಜಿ ವೃತ್ತ, ಶಾಸ್ತ್ರಿ ವೃತ್ತ, ಗಂಜ್ ಸರ್ಕಲ್, ಮೈಲಾಪುರ ಅಗಸಿ, ಹಳೇ ಬಸ್ ನಿಲ್ದಾಣ, ಹೊಸ ಬಸ್ ನಿಲ್ದಾಣ, ಗಾಂಧಿ ಚೌಕ್, ರಾಯಚೂರು ರಸ್ತೆ, ಸೇಡಂ ರಸ್ತೆ ಸೇರಿದಂತೆ ಹಲವು ಕಡೆಗಳ ರಸ್ತೆಗಳಲ್ಲಿ ಗುಂಪು–ಗುಂಪಾಗಿ ಬಿಡಾಡಿ ದನಗಳು ನಿಲ್ಲುತ್ತಿವೆ. ಆ ಮೂಲಕ ಜನರ ಸಂಚಾರಕ್ಕೆ ತೊಂದರೆ ನೀಡುತ್ತಿವೆ ಎಂದಿದ್ದಾರೆ.</p>.<p>ಬಸ್ ನಿಲ್ದಾಣಗಳಲ್ಲಿ ರಾತ್ರಿ ಮಲಗಿ ನಿಲ್ದಾಣದ ಆವರಣವನ್ನು ಗಲೀಜು ಮಾಡುತ್ತಿವೆ. ಈ ಬಗ್ಗೆ ಜನರಿಂದ ಸಾಕಷ್ಟು ದೂರುಗಳ ಬರುತ್ತಿರುವುದರಿಂದ ನಗರಸಭೆ, ಪಶು ಸಂಗೋಪನಾ ಇಲಾಖೆ, ಪೊಲೀಸ್ ಇಲಾಖೆಗಳ ಜಂಟಿ ಕಾರ್ಯಾಚರಣೆ ನಡೆಸಿ 22 ಜಾನುವಾರುಗಳನ್ನು ಹಿಡಿದು ಗೋಶಾಲೆಗೆ ಬಿಟ್ಟು ಬರಲಾಗಿದೆ ಎಂದು ಹೇಳಿದ್ದಾರೆ.</p>.<p>ಕಾರ್ಯಾಚರಣೆ ವೇಳೆ ಪಿಐ ಮಹಮದ್ ಮುಸ್ತಾಕ್, ಪರಿಸರ ಎಂಜಿನಿಯರ್ ಪ್ರಶಾಂತ, ಆರೋಗ್ಯ ನಿರೀಕ್ಷಕರಾದ ಶಿವಪುತ್ರ, ಸಿದ್ದಾರ್ಥ, ಮಂಜುನಾಥ ಸೇರಿದಂತೆ ಹಲವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ರಸ್ತೆ ಉದ್ದಕ್ಕೂ ಓಡಾಡಿ, ಎಲ್ಲೆಂದರಲ್ಲಿ ನಿಂತು ವಾಹನ ಸಂಚಾರಿಗಳ ಪ್ರಾಣಕ್ಕೆ ಸಂಚಕಾರ ತಂದೊಡ್ಡಿ, ರಸ್ತೆ ಅಪಘಾತಗಳಿಗೂ ಕಾರಣ ಆಗುತ್ತಿದ್ದ ಬಿಡಾಡಿ ದನಗಳನ್ನು ಕಾರ್ಯಾಚರಣೆ ನಡೆಸಿ ಅವುಗಳನ್ನು ಗೋಶಾಲೆಗೆ ಸಾಗಿಸಲಾಯಿತು.</p>.<p>ನಗರದ ರಸ್ತೆಗಳಲ್ಲಿ ನಿಂತು, ಮಲಗಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದವು. ನಗರಸಭೆ ಪೌರಾಯುಕ್ತ ಉಮೇಶ ಚವ್ಹಾಣ್ ಅವರ ನೇತೃತ್ವದಲ್ಲಿ ತಡರಾತ್ರಿ ಕಾರ್ಯಾಚರಣೆ ನಡೆಸಿ, ನೆರೆಯ ರಾಯಚೂರು ಹೊರವಲಯದ ಆಲೂರ ಸಮೀಪದ ಜ್ಯೋರ್ತಿಲಿಂಗೇಶ್ವರ ಗೋಶಾಲೆಯಲ್ಲಿ ಬಿಟ್ಟು ಬರಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ನೇತಾಜಿ ವೃತ್ತ, ಶಾಸ್ತ್ರಿ ವೃತ್ತ, ಗಂಜ್ ಸರ್ಕಲ್, ಮೈಲಾಪುರ ಅಗಸಿ, ಹಳೇ ಬಸ್ ನಿಲ್ದಾಣ, ಹೊಸ ಬಸ್ ನಿಲ್ದಾಣ, ಗಾಂಧಿ ಚೌಕ್, ರಾಯಚೂರು ರಸ್ತೆ, ಸೇಡಂ ರಸ್ತೆ ಸೇರಿದಂತೆ ಹಲವು ಕಡೆಗಳ ರಸ್ತೆಗಳಲ್ಲಿ ಗುಂಪು–ಗುಂಪಾಗಿ ಬಿಡಾಡಿ ದನಗಳು ನಿಲ್ಲುತ್ತಿವೆ. ಆ ಮೂಲಕ ಜನರ ಸಂಚಾರಕ್ಕೆ ತೊಂದರೆ ನೀಡುತ್ತಿವೆ ಎಂದಿದ್ದಾರೆ.</p>.<p>ಬಸ್ ನಿಲ್ದಾಣಗಳಲ್ಲಿ ರಾತ್ರಿ ಮಲಗಿ ನಿಲ್ದಾಣದ ಆವರಣವನ್ನು ಗಲೀಜು ಮಾಡುತ್ತಿವೆ. ಈ ಬಗ್ಗೆ ಜನರಿಂದ ಸಾಕಷ್ಟು ದೂರುಗಳ ಬರುತ್ತಿರುವುದರಿಂದ ನಗರಸಭೆ, ಪಶು ಸಂಗೋಪನಾ ಇಲಾಖೆ, ಪೊಲೀಸ್ ಇಲಾಖೆಗಳ ಜಂಟಿ ಕಾರ್ಯಾಚರಣೆ ನಡೆಸಿ 22 ಜಾನುವಾರುಗಳನ್ನು ಹಿಡಿದು ಗೋಶಾಲೆಗೆ ಬಿಟ್ಟು ಬರಲಾಗಿದೆ ಎಂದು ಹೇಳಿದ್ದಾರೆ.</p>.<p>ಕಾರ್ಯಾಚರಣೆ ವೇಳೆ ಪಿಐ ಮಹಮದ್ ಮುಸ್ತಾಕ್, ಪರಿಸರ ಎಂಜಿನಿಯರ್ ಪ್ರಶಾಂತ, ಆರೋಗ್ಯ ನಿರೀಕ್ಷಕರಾದ ಶಿವಪುತ್ರ, ಸಿದ್ದಾರ್ಥ, ಮಂಜುನಾಥ ಸೇರಿದಂತೆ ಹಲವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>