<p><strong>ಯಾದಗಿರಿ</strong>: ನಗರದ ಟಿ.ಬಿ ಬಡಾವಣೆಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಬಡಾವಣೆಯ ನಿವಾಸಿಗಳು ರಸ್ತೆಯಲ್ಲಿ ಓಡಾಡಲು ಭಯಪಡುವಂತೆ ಆಗಿದೆ.</p>.<p>ರೈಲು ನಿಲ್ದಾಣದಿಂದ ಹಳೇ ಬಸ್ ನಿಲ್ದಾಣವರೆಗಿನ ರಸ್ತೆಯ ಎಲ್ಲೆಂದರಲ್ಲಿ ಬೀದಿ ನಾಯಿಗಳು ಹಿಂಡು ಜಮೆ ಆಗುತ್ತಿದೆ. ಇದರಿಂದಾಗಿ ಮಕ್ಕಳು, ಮಹಿಳೆಯರು, ವೃದ್ಧರು ಒಂಟಿಯಾಗಿ ಓಡಾಡುವುದು ಕಷ್ಟವಾಗಿದೆ. ರಸ್ತೆಗಳಲ್ಲಿ ಬೈಕ್ನಲ್ಲಿ ಹೋಗುವ ಸವಾರರನ್ನು ನಾಯಿಗಳು ಬೆನ್ನಟ್ಟುತ್ತವೆ. </p>.<p>ಕಳೆದ ವಾರ ಬಡಾವಣೆ ನಿವಾಸಿಯಾದ ರತ್ನಾಬಾಯಿ ಅವರಿಗೆ ಬೀದಿ ನಾಯಿಯೊಂದು ಕಚ್ಚಿತು. ನಾಲ್ಕೈದು ಹಲ್ಲುಗಳು ನಾಟಿದ್ದು, ತೀವ್ರ ಗಾಯವಾಯಿತು. ಇದರಿಂದಾಗಿ ಪೋಷಕರು ತಮ್ಮ ಮಕ್ಕಳನ್ನು ಹೊರಗಡೆ ಬಿಡಲು ಹೆದರುತ್ತಿದ್ದಾರೆ ಎನ್ನುತ್ತಾರೆ ಸ್ಥಳೀಯರು.</p>.<p>ರೈಲು ನಿಲ್ದಾಣ– ಹಳೆ ಬಸ್ ನಿಲ್ದಾಣ ನಡುವಿನ ರಸ್ತೆಯಲ್ಲಿ ನಿತ್ಯ ಸಾವಿರಾರು ಜನರು ಓಡಾಡುತ್ತಾರೆ. ಅವರಲ್ಲಿ ಹೆಚ್ಚಿನವರು ಪ್ರಯಾಣಿಕರೇ ಇರುತ್ತಾರೆ. ಬೀದಿ ನಾಯಿಗಳಿಂದಾಗಿ ಹೆದರಿಕೊಂಡು ಓಡಾಡುತ್ತಿದ್ದಾರೆ. ಈ ಬಗ್ಗೆ ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎಂದು ಸ್ಥಳೀಯ ಮಹಿಳೆಯೊಬ್ಬರು ಬೇಸರ ವ್ಯಕ್ತಪಡಿಸಿದರು.</p>.<p>ಬೀದಿ ನಾಯಿಗಳ ಹಾವಳಿಗೆ ನಗರಸಭೆಯ ಅಧಿಕಾರಿಗಳು ತಕ್ಷಣವೇ ಕಡಿವಾಣ ಹಾಕಬೇಕು. ಇಲ್ಲದೆ ಇದ್ದರೆ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ಮಾಡಲಾಗುವುದು ಎನ್ನುತ್ತಾರೆ ಬಡಾವಣೆಯ ಸುನಿಲ್, ಅನಿಲ್, ದಶರಥ, ಅನುಸುಯಾ, ಕಸ್ತೂರಬಾಯಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ</strong>: ನಗರದ ಟಿ.ಬಿ ಬಡಾವಣೆಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಬಡಾವಣೆಯ ನಿವಾಸಿಗಳು ರಸ್ತೆಯಲ್ಲಿ ಓಡಾಡಲು ಭಯಪಡುವಂತೆ ಆಗಿದೆ.</p>.<p>ರೈಲು ನಿಲ್ದಾಣದಿಂದ ಹಳೇ ಬಸ್ ನಿಲ್ದಾಣವರೆಗಿನ ರಸ್ತೆಯ ಎಲ್ಲೆಂದರಲ್ಲಿ ಬೀದಿ ನಾಯಿಗಳು ಹಿಂಡು ಜಮೆ ಆಗುತ್ತಿದೆ. ಇದರಿಂದಾಗಿ ಮಕ್ಕಳು, ಮಹಿಳೆಯರು, ವೃದ್ಧರು ಒಂಟಿಯಾಗಿ ಓಡಾಡುವುದು ಕಷ್ಟವಾಗಿದೆ. ರಸ್ತೆಗಳಲ್ಲಿ ಬೈಕ್ನಲ್ಲಿ ಹೋಗುವ ಸವಾರರನ್ನು ನಾಯಿಗಳು ಬೆನ್ನಟ್ಟುತ್ತವೆ. </p>.<p>ಕಳೆದ ವಾರ ಬಡಾವಣೆ ನಿವಾಸಿಯಾದ ರತ್ನಾಬಾಯಿ ಅವರಿಗೆ ಬೀದಿ ನಾಯಿಯೊಂದು ಕಚ್ಚಿತು. ನಾಲ್ಕೈದು ಹಲ್ಲುಗಳು ನಾಟಿದ್ದು, ತೀವ್ರ ಗಾಯವಾಯಿತು. ಇದರಿಂದಾಗಿ ಪೋಷಕರು ತಮ್ಮ ಮಕ್ಕಳನ್ನು ಹೊರಗಡೆ ಬಿಡಲು ಹೆದರುತ್ತಿದ್ದಾರೆ ಎನ್ನುತ್ತಾರೆ ಸ್ಥಳೀಯರು.</p>.<p>ರೈಲು ನಿಲ್ದಾಣ– ಹಳೆ ಬಸ್ ನಿಲ್ದಾಣ ನಡುವಿನ ರಸ್ತೆಯಲ್ಲಿ ನಿತ್ಯ ಸಾವಿರಾರು ಜನರು ಓಡಾಡುತ್ತಾರೆ. ಅವರಲ್ಲಿ ಹೆಚ್ಚಿನವರು ಪ್ರಯಾಣಿಕರೇ ಇರುತ್ತಾರೆ. ಬೀದಿ ನಾಯಿಗಳಿಂದಾಗಿ ಹೆದರಿಕೊಂಡು ಓಡಾಡುತ್ತಿದ್ದಾರೆ. ಈ ಬಗ್ಗೆ ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎಂದು ಸ್ಥಳೀಯ ಮಹಿಳೆಯೊಬ್ಬರು ಬೇಸರ ವ್ಯಕ್ತಪಡಿಸಿದರು.</p>.<p>ಬೀದಿ ನಾಯಿಗಳ ಹಾವಳಿಗೆ ನಗರಸಭೆಯ ಅಧಿಕಾರಿಗಳು ತಕ್ಷಣವೇ ಕಡಿವಾಣ ಹಾಕಬೇಕು. ಇಲ್ಲದೆ ಇದ್ದರೆ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ಮಾಡಲಾಗುವುದು ಎನ್ನುತ್ತಾರೆ ಬಡಾವಣೆಯ ಸುನಿಲ್, ಅನಿಲ್, ದಶರಥ, ಅನುಸುಯಾ, ಕಸ್ತೂರಬಾಯಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>