<p><strong>ಸುರಪುರ:</strong> ‘ಸಾಲ ಸೌಲಭ್ಯ ಒದಗಿಸಬೇಕು’ ಎಂದು ಆಗ್ರಹಿಸಿ ಶೋಷಿತರ ಪರ ಹೋರಾಟ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಬೀದಿ ಬದಿ ವ್ಯಾಪಾರಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ವೆಂಕೋಬ ದೊರೆ ಮಾತನಾಡಿ, ‘ಸರ್ಕಾರದ ಯೋಜನೆಯಂತೆ ಬೀದಿ ಬದಿ ವ್ಯಾಪಾರಿಗಳಿಗೆ ಶೂನ್ಯ ಬಡ್ಡಿ ದರದಲ್ಲಿ ₹50 ಸಾವಿರ ಸಾಲ ಕೊಡುವ ಅವಕಾಶವಿದೆ. ಆದರೆ ಇದುವರೆಗೆ ಒಬ್ಬರಿಗೂ ಸಾಲ ನೀಡಿಲ್ಲ’ ಎಂದು ದೂರಿದರು.</p>.<p>‘ಯೋಜನೆಗಳು ಸಮರ್ಪಕವಾಗಿ ಜಾರಿಯಾಗುತ್ತಿಲ್ಲ. ಅಧಿಕಾರಿಗಳು ಬಡ ವ್ಯಾಪಾರಿಗಳ ಸಹಾಯಕ್ಕೆ ಬರುತ್ತಿಲ್ಲ. ಬ್ಯಾಂಕ್ನವರು ಕೂಡ ಇತರ ಯೋಜನೆಗಳಲ್ಲಿ ಸಾಲ ನೀಡುತ್ತಿಲ್ಲ’ ಎಂದು ಅಕ್ರೋಶ ವ್ಯಕ್ತಪಡಿಸಿದರು.</p>.<p>‘ಬೀದಿ ಬದಿ ವ್ಯಾಪಾರಿಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಮಾಡಬೇಕು. ಸಣ್ಣ ವ್ಯಾಪಾರಿಗಳಿಗೆ ಬ್ಯಾಂಕ್ ಸಾಲ ನೀಡುವಂತೆ ನಗರಸಭೆಯಲ್ಲಿ ಬ್ಯಾಂಕ್ ಅಧಿಕಾರಿಗಳ ಸಭೆ ನಡೆಸಬೇಕು’ ಎಂದು ಆಗ್ರಹಿಸಿದರು.</p>.<p>ತಹಶೀಲ್ದಾರ್ ಕಚೇರಿ ಸಿಬ್ಬಂದಿಗೆ ಮನವಿ ಸಲ್ಲಿಸಲಾಯಿತು. ಗೋಪಾಲ ಬಾಗಲಕೋಟೆ, ಮಾನಯ್ಯ ದೊರೆ, ಹುಸೇನಸಾಬ, ಕಾಸಿಂಸಾಬ ಸುರಪುರ, ದಾವುದಸಾಬ ಮತ್ತು ಬೀದಿ ಬದಿ ವ್ಯಾಪಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಪುರ:</strong> ‘ಸಾಲ ಸೌಲಭ್ಯ ಒದಗಿಸಬೇಕು’ ಎಂದು ಆಗ್ರಹಿಸಿ ಶೋಷಿತರ ಪರ ಹೋರಾಟ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಬೀದಿ ಬದಿ ವ್ಯಾಪಾರಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ವೆಂಕೋಬ ದೊರೆ ಮಾತನಾಡಿ, ‘ಸರ್ಕಾರದ ಯೋಜನೆಯಂತೆ ಬೀದಿ ಬದಿ ವ್ಯಾಪಾರಿಗಳಿಗೆ ಶೂನ್ಯ ಬಡ್ಡಿ ದರದಲ್ಲಿ ₹50 ಸಾವಿರ ಸಾಲ ಕೊಡುವ ಅವಕಾಶವಿದೆ. ಆದರೆ ಇದುವರೆಗೆ ಒಬ್ಬರಿಗೂ ಸಾಲ ನೀಡಿಲ್ಲ’ ಎಂದು ದೂರಿದರು.</p>.<p>‘ಯೋಜನೆಗಳು ಸಮರ್ಪಕವಾಗಿ ಜಾರಿಯಾಗುತ್ತಿಲ್ಲ. ಅಧಿಕಾರಿಗಳು ಬಡ ವ್ಯಾಪಾರಿಗಳ ಸಹಾಯಕ್ಕೆ ಬರುತ್ತಿಲ್ಲ. ಬ್ಯಾಂಕ್ನವರು ಕೂಡ ಇತರ ಯೋಜನೆಗಳಲ್ಲಿ ಸಾಲ ನೀಡುತ್ತಿಲ್ಲ’ ಎಂದು ಅಕ್ರೋಶ ವ್ಯಕ್ತಪಡಿಸಿದರು.</p>.<p>‘ಬೀದಿ ಬದಿ ವ್ಯಾಪಾರಿಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಮಾಡಬೇಕು. ಸಣ್ಣ ವ್ಯಾಪಾರಿಗಳಿಗೆ ಬ್ಯಾಂಕ್ ಸಾಲ ನೀಡುವಂತೆ ನಗರಸಭೆಯಲ್ಲಿ ಬ್ಯಾಂಕ್ ಅಧಿಕಾರಿಗಳ ಸಭೆ ನಡೆಸಬೇಕು’ ಎಂದು ಆಗ್ರಹಿಸಿದರು.</p>.<p>ತಹಶೀಲ್ದಾರ್ ಕಚೇರಿ ಸಿಬ್ಬಂದಿಗೆ ಮನವಿ ಸಲ್ಲಿಸಲಾಯಿತು. ಗೋಪಾಲ ಬಾಗಲಕೋಟೆ, ಮಾನಯ್ಯ ದೊರೆ, ಹುಸೇನಸಾಬ, ಕಾಸಿಂಸಾಬ ಸುರಪುರ, ದಾವುದಸಾಬ ಮತ್ತು ಬೀದಿ ಬದಿ ವ್ಯಾಪಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>