<p><strong>ಸುರಪುರ:</strong> ‘ವಿದ್ಯಾರ್ಥಿಗಳು ಯಾವುದೇ ಕ್ಷೇತ್ರದಲ್ಲಿ ಯಶಸ್ಸು ಕಾಣಬೇಕಾದರೆ ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು. ಜೊತೆಗೆ ತಮ್ಮ ಸಾಮರ್ಥ್ಯ ಮತ್ತು ಆಸಕ್ತಿಗಳನ್ನು ಗುರುತಿಸಿಕೊಳ್ಳಬೇಕು’ ಎಂದು ಶಿಕ್ಷಣ ತಜ್ಞ ಅಮರ್ ಡೇನಿಯಲ್ ಗೇಬ್ರಿಯನ್ ಹೇಳಿದರು.</p>.<p>ನಗರದ ವೀರಪ್ಪ ನಿಷ್ಠಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಶುಕ್ರವಾರ ‘ಅರಿವು ದಾರಿ’ ವಿಷಯದ ಮೇಲೆ ಏರ್ಪಡಿಸಿದ್ದ ಕಾರ್ಯಾಗಾರದಲ್ಲಿ ಅವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.</p>.<p>‘ಇಂದಿನ ಸ್ಪರ್ಧಾತ್ಮಕ ಯುದಲ್ಲಿ ಉದ್ಯೋಗ ಪಡೆಯಲು ಕೇವಲ ಪದವಿ ಸಾಕಾಗುವುದಿಲ್ಲ. ತಾರ್ಕಿಕ ಮತ್ತು ವಿಶ್ಲೇಷಾತ್ಮಕ ಕೌಶಲಗಳನ್ನು ಬೆಳೆಸಿಕೊಳ್ಳಬೇಕು’ ಎಂದು ತಿಳಿಸಿದರು.</p>.<p>‘ಕೃತಕ ಬುದ್ಧಿಮತ್ತೆಯಂತಹ ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವುದು ಮುಖ್ಯ. ಕೀಳರಿಮೆ ತೊಲಗಿಸಿಕೊಳ್ಳುವುದು, ಸಂದರ್ಶನಕ್ಕೆ ಸಮರ್ಪಕ ಸಿದ್ಧತೆ ಮಾಡಿಕೊಳ್ಳುವುದು ಇತರ ವಿಷಯಗಳು ಉದ್ಯೋಗ ಪಡೆಯಲು ನೆರವಾಗುತ್ತವೆ’ ಎಂದರು.</p>.<p>‘ವ್ಯಕ್ತಿತ್ವ ವಿಕಸನಕ್ಕೆ ಪ್ರಾಶಸ್ತ್ಯ ನೀಡಬೇಕು. ಸಮರ್ಪಕವಾಗಿ ಇಂಗ್ಲಿಷ್ ಮಾತನಾಡಲು ಕಲಿಯಬೇಕು. ಸಮರ್ಪಕರಿಗೆ ಖಂಡಿತ ಉದ್ಯೋಗ ದೊರಕುತ್ತದೆ. ಉದ್ಯೋಗ ಪಡೆದುಕೊಳ್ಳುತ್ತೇನೆ ಎಂಬ ಛಲ ಬೆಳೆಸಿಕೊಳ್ಳಬೇಕು’ ಎಂದು ತಿಳಿಸಿದರು.</p>.<p>ಕಾಲೇಜಿನ ಜಂಟಿ ಕಾರ್ಯದರ್ಶಿ ದೊಡ್ಡಪ್ಪ ನಿಷ್ಠಿ ಅಧ್ಯಕ್ಷತೆ ವಹಿಸಿದ್ದರು. ಪ್ರಾಚಾರ್ಯ ಶರಣಬಸಪ್ಪ ಸಾಲಿ ಸ್ವಾಗತಿಸಿದರು. ಉದ್ಯೋಗಾಧಿಕಾರಿ ಮಂಜುನಾಥ ಯಾಳವಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ಪೂಜಾ ಹತ್ತರಕಿ ನಿರೂಪಿಸಿದರು. ರಾಧಿಕಾ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಪುರ:</strong> ‘ವಿದ್ಯಾರ್ಥಿಗಳು ಯಾವುದೇ ಕ್ಷೇತ್ರದಲ್ಲಿ ಯಶಸ್ಸು ಕಾಣಬೇಕಾದರೆ ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು. ಜೊತೆಗೆ ತಮ್ಮ ಸಾಮರ್ಥ್ಯ ಮತ್ತು ಆಸಕ್ತಿಗಳನ್ನು ಗುರುತಿಸಿಕೊಳ್ಳಬೇಕು’ ಎಂದು ಶಿಕ್ಷಣ ತಜ್ಞ ಅಮರ್ ಡೇನಿಯಲ್ ಗೇಬ್ರಿಯನ್ ಹೇಳಿದರು.</p>.<p>ನಗರದ ವೀರಪ್ಪ ನಿಷ್ಠಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಶುಕ್ರವಾರ ‘ಅರಿವು ದಾರಿ’ ವಿಷಯದ ಮೇಲೆ ಏರ್ಪಡಿಸಿದ್ದ ಕಾರ್ಯಾಗಾರದಲ್ಲಿ ಅವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.</p>.<p>‘ಇಂದಿನ ಸ್ಪರ್ಧಾತ್ಮಕ ಯುದಲ್ಲಿ ಉದ್ಯೋಗ ಪಡೆಯಲು ಕೇವಲ ಪದವಿ ಸಾಕಾಗುವುದಿಲ್ಲ. ತಾರ್ಕಿಕ ಮತ್ತು ವಿಶ್ಲೇಷಾತ್ಮಕ ಕೌಶಲಗಳನ್ನು ಬೆಳೆಸಿಕೊಳ್ಳಬೇಕು’ ಎಂದು ತಿಳಿಸಿದರು.</p>.<p>‘ಕೃತಕ ಬುದ್ಧಿಮತ್ತೆಯಂತಹ ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವುದು ಮುಖ್ಯ. ಕೀಳರಿಮೆ ತೊಲಗಿಸಿಕೊಳ್ಳುವುದು, ಸಂದರ್ಶನಕ್ಕೆ ಸಮರ್ಪಕ ಸಿದ್ಧತೆ ಮಾಡಿಕೊಳ್ಳುವುದು ಇತರ ವಿಷಯಗಳು ಉದ್ಯೋಗ ಪಡೆಯಲು ನೆರವಾಗುತ್ತವೆ’ ಎಂದರು.</p>.<p>‘ವ್ಯಕ್ತಿತ್ವ ವಿಕಸನಕ್ಕೆ ಪ್ರಾಶಸ್ತ್ಯ ನೀಡಬೇಕು. ಸಮರ್ಪಕವಾಗಿ ಇಂಗ್ಲಿಷ್ ಮಾತನಾಡಲು ಕಲಿಯಬೇಕು. ಸಮರ್ಪಕರಿಗೆ ಖಂಡಿತ ಉದ್ಯೋಗ ದೊರಕುತ್ತದೆ. ಉದ್ಯೋಗ ಪಡೆದುಕೊಳ್ಳುತ್ತೇನೆ ಎಂಬ ಛಲ ಬೆಳೆಸಿಕೊಳ್ಳಬೇಕು’ ಎಂದು ತಿಳಿಸಿದರು.</p>.<p>ಕಾಲೇಜಿನ ಜಂಟಿ ಕಾರ್ಯದರ್ಶಿ ದೊಡ್ಡಪ್ಪ ನಿಷ್ಠಿ ಅಧ್ಯಕ್ಷತೆ ವಹಿಸಿದ್ದರು. ಪ್ರಾಚಾರ್ಯ ಶರಣಬಸಪ್ಪ ಸಾಲಿ ಸ್ವಾಗತಿಸಿದರು. ಉದ್ಯೋಗಾಧಿಕಾರಿ ಮಂಜುನಾಥ ಯಾಳವಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ಪೂಜಾ ಹತ್ತರಕಿ ನಿರೂಪಿಸಿದರು. ರಾಧಿಕಾ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>