<p><strong>ಸುರಪುರ:</strong> ‘ಯಾದಗಿರಿ ಜಿಲ್ಲೆಯ ವಿದ್ಯಾರ್ಥಿ ವಸತಿ ನಿಲಯಗಳಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ’ ಎಂದು ಆರೋಪಿಸಿ ಶೋಷಿತರ ಸಂಘಟನೆಯ ಒಕ್ಕೂಟದ ಮುಖಂಡರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.</p>.<p>ರಾಜ್ಯ ಸಮಿತಿ ಅಧ್ಯಕ್ಷ ವೆಂಕೋಬ ದೊರೆ ಮಾತನಾಡಿ, ‘ಜಿಲ್ಲೆಯ ವಸತಿ ನಿಲಯಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ’ ಎಂದು ದೂರಿದರು.</p>.<p>‘ಒಬ್ಬ ವಾರ್ಡನ್ಗೆ 4 ರಿಂದ 5 ವಸತಿ ನಿಲಯಗಳ ಹೊಣೆಗಾರಿಕೆ ವಹಿಸಲಾಗಿದೆ. ಜಿಲ್ಲೆಯ ಎರಡು ಮೂರು ವಸತಿ ನಿಲಯಗಳ ವಿದ್ಯಾರ್ಥಿನಿಯರ ಮೇಲೆ ದೌರ್ಜನ್ಯ ನಡೆದರೂ ಕ್ರಮ ಜರುಗಿಸಿಲ್ಲ. ಒಂದು ವಸತಿ ನಿಲಯದ ಶಿಕ್ಷಕರನ್ನು ವರ್ಗಾವಣೆ ಮಾತ್ರ ಮಾಡಲಾಗಿದೆ’ ಎಂದು ಆಕ್ರೋಶ <br />ವ್ಯಕ್ತಪಡಿಸಿದರು.</p>.<p>‘ವಸತಿ ನಿಲಯಗಳ ವಿದ್ಯಾರ್ಥಿನಿಯರಿಗೆ ರಕ್ಷಣೆ ವ್ಯವಸ್ಥೆ ಇರಬೇಕು. ಸಮರ್ಪಕವಾಗಿ ಊಟ, ಉಪಹಾರ ನೀಡಬೇಕು. ದೌರ್ಜನ್ಯ ಎಸಗುವವರ ಮೇಲೆ ಕಠಿಣ ಕ್ರಮ ಜರುಗಿಸಬೇಕು. ಪರಿಸ್ಥಿತಿ ಹೀಗೆ ಮುಂದುವರಿದರೆ ಉಗ್ರ ಹೋರಾಟ ಮಾಡಲಾಗುವುದು’ ಎಂದು ಹೇಳಿದರು.</p>.<p>ರಾಜ್ಯ ಮಕ್ಕಳ ಆಯೋಗಕ್ಕೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಮಲ್ಲಯ್ಯ ದಂಡು ಅವರಿಗೆ ಸಲ್ಲಿಸಿದರು. ಮುಖಂಡರಾದ ಬಸವರಾಜ ಕನಕಗಿರಿ, ಲಾಳೆಪಟೇಲ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಪುರ:</strong> ‘ಯಾದಗಿರಿ ಜಿಲ್ಲೆಯ ವಿದ್ಯಾರ್ಥಿ ವಸತಿ ನಿಲಯಗಳಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ’ ಎಂದು ಆರೋಪಿಸಿ ಶೋಷಿತರ ಸಂಘಟನೆಯ ಒಕ್ಕೂಟದ ಮುಖಂಡರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.</p>.<p>ರಾಜ್ಯ ಸಮಿತಿ ಅಧ್ಯಕ್ಷ ವೆಂಕೋಬ ದೊರೆ ಮಾತನಾಡಿ, ‘ಜಿಲ್ಲೆಯ ವಸತಿ ನಿಲಯಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ’ ಎಂದು ದೂರಿದರು.</p>.<p>‘ಒಬ್ಬ ವಾರ್ಡನ್ಗೆ 4 ರಿಂದ 5 ವಸತಿ ನಿಲಯಗಳ ಹೊಣೆಗಾರಿಕೆ ವಹಿಸಲಾಗಿದೆ. ಜಿಲ್ಲೆಯ ಎರಡು ಮೂರು ವಸತಿ ನಿಲಯಗಳ ವಿದ್ಯಾರ್ಥಿನಿಯರ ಮೇಲೆ ದೌರ್ಜನ್ಯ ನಡೆದರೂ ಕ್ರಮ ಜರುಗಿಸಿಲ್ಲ. ಒಂದು ವಸತಿ ನಿಲಯದ ಶಿಕ್ಷಕರನ್ನು ವರ್ಗಾವಣೆ ಮಾತ್ರ ಮಾಡಲಾಗಿದೆ’ ಎಂದು ಆಕ್ರೋಶ <br />ವ್ಯಕ್ತಪಡಿಸಿದರು.</p>.<p>‘ವಸತಿ ನಿಲಯಗಳ ವಿದ್ಯಾರ್ಥಿನಿಯರಿಗೆ ರಕ್ಷಣೆ ವ್ಯವಸ್ಥೆ ಇರಬೇಕು. ಸಮರ್ಪಕವಾಗಿ ಊಟ, ಉಪಹಾರ ನೀಡಬೇಕು. ದೌರ್ಜನ್ಯ ಎಸಗುವವರ ಮೇಲೆ ಕಠಿಣ ಕ್ರಮ ಜರುಗಿಸಬೇಕು. ಪರಿಸ್ಥಿತಿ ಹೀಗೆ ಮುಂದುವರಿದರೆ ಉಗ್ರ ಹೋರಾಟ ಮಾಡಲಾಗುವುದು’ ಎಂದು ಹೇಳಿದರು.</p>.<p>ರಾಜ್ಯ ಮಕ್ಕಳ ಆಯೋಗಕ್ಕೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಮಲ್ಲಯ್ಯ ದಂಡು ಅವರಿಗೆ ಸಲ್ಲಿಸಿದರು. ಮುಖಂಡರಾದ ಬಸವರಾಜ ಕನಕಗಿರಿ, ಲಾಳೆಪಟೇಲ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>