<p><strong>ಯಾದಗಿರಿ:</strong> ಪ್ರಸ್ತುತ ಸ್ಪರ್ಧಾತ್ಮಕ ಪ್ರಪಂಚದಲ್ಲಿ ಮಕ್ಕಳು ಹೆಚ್ಚು ಅಧ್ಯಯನದಲ್ಲಿ ತೊಡಗಿಸಿಕೊಳ್ಳಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶ ರವೀಂದ್ರ ಎಲ್.ಹೊನೋಲೆ ಹೇಳಿದರು.</p>.<p>ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಮುಂಡರಗಿ ಸರ್ಕಾರಿ ಪ್ರೌಢ ಶಾಲೆ ಸಹಯೋಗದೊಂದಿಗೆ ವಿಶ್ವಮಾನವ ಹಕ್ಕುಗಳ ದಿನ ಅಂಗವಾಗಿ ತಾಲ್ಲೂಕಿನ ಮುಂಡರಗಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ವಿಶ್ವಸಂಸ್ಥೆಯಲ್ಲಿ ಮಾನವನ ಹಕ್ಕುಗಳ ಉದ್ಘೋಷಣೆ ಮತ್ತು 2023ರ ಧ್ಯೇಯ ವಾಕ್ಯ ‘ಸ್ವಾತಂತ್ರ್ಯ ಸಮಾನತೆ, ನ್ಯಾಯದ ಬಗ್ಗೆ ತಿಳಿ ಹೇಳಿದರು.</p>.<p>ವಕೀಲ ಬಿ.ಜಿ.ಪಾಟೀಲ ಮಾತನಾಡಿ, ಮಾನವ ಹಾಗೂ ಮಕ್ಕಳ ಹಕ್ಕುಗಳ ಬಗ್ಗೆ ವಿವರವಾಗಿ ತಿಳಿಸಿದರು.</p>.<p>ವಕೀಲ ಭೀಮಾಶಂಕರ್ ಎಸ್.ಆಶನಾಳ ಮಾತನಾಡಿ, ಹಿಂದೆ ಅಭ್ಯಾಸ ಮಾಡಲು ಸರಿಯಾದ ಅವಕಾಶಗಳು ಇರಲಿಲ್ಲ. ಈಗ ಎಲ್ಲಾ ಅವಕಾಶಗಳು ಇರುವುದರಿಂದ ವಿದ್ಯಾರ್ಥಿಗಳು ಅವು ಎಲ್ಲಾ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ವಿದ್ಯಾಭ್ಯಾಸದಲ್ಲಿ ಮುಂದುವರಿಯಬೇಕೆಂದು ಕಿವಿಮಾತು ಹೇಳಿದರು.</p>.<p>ಕಾನೂನು ಸೇವೆಗಳ ಪ್ರಾಧಿಕಾರ ಪ್ಯಾನೆಲ್ ವಕೀಲೆ ಕೃಷ್ಣವೇಣಿ ಜಿ.ನಿರ್ಮಲ್ಕರ್ ಮಾತನಾಡಿ, ಸಂವಿಧಾನದಲ್ಲಿ ನೀಡಲಾದ ಮೂಲಭೂತ ಹಕ್ಕುಗಳ ಬಗ್ಗೆ ಮಕ್ಕಳಿಗೆ ವಿವರಿಸಿ, ಎಲ್ಲರಿಗೂ ಸ್ವಾತಂತ್ರ್ಯ ಸಮಾನತೆ, ನ್ಯಾಯ ದೊರಕಬೇಕೆಂದು ಹೇಳಿದರು.</p>.<p>ಶಾಲೆಯ ಪ್ರಭಾರ ಮುಖ್ಯಶಿಕ್ಷಕ ಸಾಯಪ್ಪ ಗಿಡ್ಡಿ ಮಾತನಾಡಿ, ಮೂಲಭೂತ ಹಕ್ಕುಗಳನ್ನು ಹೇಗೆ ಪಡೆಯುತ್ತೇವೋ ಹಾಗೆ ಕರ್ತವ್ಯಗಳನ್ನು ನಿರ್ವಹಿಸಲು ಎಲ್ಲರೂ ಸಿದ್ದರಾಗಿರಬೇಕು ಎಂದು ಹೇಳಿದರು.</p>.<p>ಶಾಲೆಯ ಶಿಕ್ಷಕ ಜಲಾಲುದ್ದೀನ್ ನಾಯ್ಕಲ್ ನಿರೂಪಿಸಿದರು.ಶಿಕ್ಷಕ ಸುರೇಶ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ಪ್ರಸ್ತುತ ಸ್ಪರ್ಧಾತ್ಮಕ ಪ್ರಪಂಚದಲ್ಲಿ ಮಕ್ಕಳು ಹೆಚ್ಚು ಅಧ್ಯಯನದಲ್ಲಿ ತೊಡಗಿಸಿಕೊಳ್ಳಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶ ರವೀಂದ್ರ ಎಲ್.ಹೊನೋಲೆ ಹೇಳಿದರು.</p>.<p>ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಮುಂಡರಗಿ ಸರ್ಕಾರಿ ಪ್ರೌಢ ಶಾಲೆ ಸಹಯೋಗದೊಂದಿಗೆ ವಿಶ್ವಮಾನವ ಹಕ್ಕುಗಳ ದಿನ ಅಂಗವಾಗಿ ತಾಲ್ಲೂಕಿನ ಮುಂಡರಗಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ವಿಶ್ವಸಂಸ್ಥೆಯಲ್ಲಿ ಮಾನವನ ಹಕ್ಕುಗಳ ಉದ್ಘೋಷಣೆ ಮತ್ತು 2023ರ ಧ್ಯೇಯ ವಾಕ್ಯ ‘ಸ್ವಾತಂತ್ರ್ಯ ಸಮಾನತೆ, ನ್ಯಾಯದ ಬಗ್ಗೆ ತಿಳಿ ಹೇಳಿದರು.</p>.<p>ವಕೀಲ ಬಿ.ಜಿ.ಪಾಟೀಲ ಮಾತನಾಡಿ, ಮಾನವ ಹಾಗೂ ಮಕ್ಕಳ ಹಕ್ಕುಗಳ ಬಗ್ಗೆ ವಿವರವಾಗಿ ತಿಳಿಸಿದರು.</p>.<p>ವಕೀಲ ಭೀಮಾಶಂಕರ್ ಎಸ್.ಆಶನಾಳ ಮಾತನಾಡಿ, ಹಿಂದೆ ಅಭ್ಯಾಸ ಮಾಡಲು ಸರಿಯಾದ ಅವಕಾಶಗಳು ಇರಲಿಲ್ಲ. ಈಗ ಎಲ್ಲಾ ಅವಕಾಶಗಳು ಇರುವುದರಿಂದ ವಿದ್ಯಾರ್ಥಿಗಳು ಅವು ಎಲ್ಲಾ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ವಿದ್ಯಾಭ್ಯಾಸದಲ್ಲಿ ಮುಂದುವರಿಯಬೇಕೆಂದು ಕಿವಿಮಾತು ಹೇಳಿದರು.</p>.<p>ಕಾನೂನು ಸೇವೆಗಳ ಪ್ರಾಧಿಕಾರ ಪ್ಯಾನೆಲ್ ವಕೀಲೆ ಕೃಷ್ಣವೇಣಿ ಜಿ.ನಿರ್ಮಲ್ಕರ್ ಮಾತನಾಡಿ, ಸಂವಿಧಾನದಲ್ಲಿ ನೀಡಲಾದ ಮೂಲಭೂತ ಹಕ್ಕುಗಳ ಬಗ್ಗೆ ಮಕ್ಕಳಿಗೆ ವಿವರಿಸಿ, ಎಲ್ಲರಿಗೂ ಸ್ವಾತಂತ್ರ್ಯ ಸಮಾನತೆ, ನ್ಯಾಯ ದೊರಕಬೇಕೆಂದು ಹೇಳಿದರು.</p>.<p>ಶಾಲೆಯ ಪ್ರಭಾರ ಮುಖ್ಯಶಿಕ್ಷಕ ಸಾಯಪ್ಪ ಗಿಡ್ಡಿ ಮಾತನಾಡಿ, ಮೂಲಭೂತ ಹಕ್ಕುಗಳನ್ನು ಹೇಗೆ ಪಡೆಯುತ್ತೇವೋ ಹಾಗೆ ಕರ್ತವ್ಯಗಳನ್ನು ನಿರ್ವಹಿಸಲು ಎಲ್ಲರೂ ಸಿದ್ದರಾಗಿರಬೇಕು ಎಂದು ಹೇಳಿದರು.</p>.<p>ಶಾಲೆಯ ಶಿಕ್ಷಕ ಜಲಾಲುದ್ದೀನ್ ನಾಯ್ಕಲ್ ನಿರೂಪಿಸಿದರು.ಶಿಕ್ಷಕ ಸುರೇಶ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>