<p>ಶಹಾಪುರ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ತಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಲು ನಿರಂತರವಾಗಿ ಅಧ್ಯಯನ ಮಾಡಬೇಕು. ಒಳ್ಳೆಯ ಪುಸ್ತಕ, ಅತ್ಯುತ್ತಮ ಸ್ನೇಹಿತರಿದ್ದಂತೆ ಎಂದು ಶ್ರೀದ್ವಾದಶ ಜ್ಯೋತಿರ್ಲಿಂಗ ಮಠದ ವಿಶ್ವಾರಾಧ್ಯ ಸ್ವಾಮೀಜಿ ಹೇಳಿದರು.</p>.<p>ನಗರದ ವಿಶ್ವಜ್ಯೋತಿ ಪದವಿ ಪೂರ್ವ ಹಾಗೂ ಪದವಿ ಮಹಾವಿದ್ಯಾಲಯ ಮತ್ತು ಸಾಯಿ ಪದವಿ ಮಹಾವಿದ್ಯಾಲಯದಲ್ಲಿ ಪಿಯು ಹಾಗೂ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳ ಸ್ವಾಗತ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಡಾ.ಚಂದ್ರಶೇಖರ ಸುಬೇದಾರ ಮಾತನಾಡಿ, ಜೀವನದ ಗುರಿಯನ್ನು ಕೇಂದ್ರೀಕರಿಸುವ ಮಹತ್ವದ ಘಟ್ಟ ಪದವಿ ಶಿಕ್ಷಣ. ಈ ಹಂತದಲ್ಲಿ ವಿದ್ಯಾರ್ಥಿಗಳು ಶ್ರಮವಹಿಸಿ ಅಭ್ಯಾಸ ಮಾಡಬೇಕು ಎಂದರು.</p>.<p>ಸಾಂಸ್ಕೃತಿಕ ಚಿಂತಕ ಡಾ. ಬಸವರಾಜ ಇಜೇರಿ ಮಾತನಾಡಿ, ವಿದ್ಯಾರ್ಥಿಗಳು ಪದವಿ ಅಂತದಲ್ಲಿ ಉತ್ತಮ ಕನಸು ಕಟ್ಟಿಕೊಂಡಿರುತ್ತಾರೆ. ಅವುಗಳ ಸಾಕಾರಕ್ಕೆ ಉಪನ್ಯಾಸಕರು ಮತ್ತು ಪಾಲಕರ ಪ್ರಯತ್ನಿಸಬೇಕು. ಸಣ್ಣಪುಟ್ಟ ಸಮಸ್ಯೆಗಳನ್ನು ಬದಿಗೊತ್ತಿ ಜೀವನದ ಗುರಿ ತಲುಪಬೇಕು ಎಂದು ಹೇಳಿದರು.</p>.<p>ಲೋಕಪುರ ಮಠದ ಮಹಾಂತ ಸ್ವಾಮೀಜಿ, ಕಾಲೇಜು ಪ್ರಾಚಾರ್ಯ ಚಂದ್ರಶೇಖರ ದಿಗ್ಗಿ, ಗರ್ಜಪ್ಪ ಪೂಜಾರಿ, ಸಂಸ್ಥೆಯ ಅಧ್ಯಕ್ಷ ರಾಜಶೇಖರ ದಿಗ್ಗಿ, ಬಸವರಾಜ ಅಳಹುಂಡಗಿ, ನರಸಪ್ಪ, ವಿನಾಯಕ, ಶ್ರೀಶೈಲ್, ಸುಮಲತಾ ದೊರಿ, ಮಾಳಪ್ಪ ಕುನ್ನೂರು, ಮಲ್ಲಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಹಾಪುರ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ತಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಲು ನಿರಂತರವಾಗಿ ಅಧ್ಯಯನ ಮಾಡಬೇಕು. ಒಳ್ಳೆಯ ಪುಸ್ತಕ, ಅತ್ಯುತ್ತಮ ಸ್ನೇಹಿತರಿದ್ದಂತೆ ಎಂದು ಶ್ರೀದ್ವಾದಶ ಜ್ಯೋತಿರ್ಲಿಂಗ ಮಠದ ವಿಶ್ವಾರಾಧ್ಯ ಸ್ವಾಮೀಜಿ ಹೇಳಿದರು.</p>.<p>ನಗರದ ವಿಶ್ವಜ್ಯೋತಿ ಪದವಿ ಪೂರ್ವ ಹಾಗೂ ಪದವಿ ಮಹಾವಿದ್ಯಾಲಯ ಮತ್ತು ಸಾಯಿ ಪದವಿ ಮಹಾವಿದ್ಯಾಲಯದಲ್ಲಿ ಪಿಯು ಹಾಗೂ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳ ಸ್ವಾಗತ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಡಾ.ಚಂದ್ರಶೇಖರ ಸುಬೇದಾರ ಮಾತನಾಡಿ, ಜೀವನದ ಗುರಿಯನ್ನು ಕೇಂದ್ರೀಕರಿಸುವ ಮಹತ್ವದ ಘಟ್ಟ ಪದವಿ ಶಿಕ್ಷಣ. ಈ ಹಂತದಲ್ಲಿ ವಿದ್ಯಾರ್ಥಿಗಳು ಶ್ರಮವಹಿಸಿ ಅಭ್ಯಾಸ ಮಾಡಬೇಕು ಎಂದರು.</p>.<p>ಸಾಂಸ್ಕೃತಿಕ ಚಿಂತಕ ಡಾ. ಬಸವರಾಜ ಇಜೇರಿ ಮಾತನಾಡಿ, ವಿದ್ಯಾರ್ಥಿಗಳು ಪದವಿ ಅಂತದಲ್ಲಿ ಉತ್ತಮ ಕನಸು ಕಟ್ಟಿಕೊಂಡಿರುತ್ತಾರೆ. ಅವುಗಳ ಸಾಕಾರಕ್ಕೆ ಉಪನ್ಯಾಸಕರು ಮತ್ತು ಪಾಲಕರ ಪ್ರಯತ್ನಿಸಬೇಕು. ಸಣ್ಣಪುಟ್ಟ ಸಮಸ್ಯೆಗಳನ್ನು ಬದಿಗೊತ್ತಿ ಜೀವನದ ಗುರಿ ತಲುಪಬೇಕು ಎಂದು ಹೇಳಿದರು.</p>.<p>ಲೋಕಪುರ ಮಠದ ಮಹಾಂತ ಸ್ವಾಮೀಜಿ, ಕಾಲೇಜು ಪ್ರಾಚಾರ್ಯ ಚಂದ್ರಶೇಖರ ದಿಗ್ಗಿ, ಗರ್ಜಪ್ಪ ಪೂಜಾರಿ, ಸಂಸ್ಥೆಯ ಅಧ್ಯಕ್ಷ ರಾಜಶೇಖರ ದಿಗ್ಗಿ, ಬಸವರಾಜ ಅಳಹುಂಡಗಿ, ನರಸಪ್ಪ, ವಿನಾಯಕ, ಶ್ರೀಶೈಲ್, ಸುಮಲತಾ ದೊರಿ, ಮಾಳಪ್ಪ ಕುನ್ನೂರು, ಮಲ್ಲಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>