ಸೋಮವಾರ ಬೆಂಗಳೂರಿನಿಂದ ಬಂದ ಯುವಕ ತನ್ನ ದೊಡ್ಡಮ್ಮಳ ಮನೆಯಲ್ಲಿ ಬಂದು ನೆಲೆಸಿದ್ದ. ರಾತ್ರಿ ಯುವತಿಯನ್ನು ಮನೆಗೆ ಕರೆದುಕೊಂಡು ಬಂದಿದ್ದ. ಬೆಳಿಗ್ಗೆ ಮನೆಯ ಬಾಗಿಲು ತೆರೆಯಲು ಹೋದಾಗ ಇಬ್ಬರು ನೇಣಿಗೆ ಶರಣಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ ಸೋನಾವಣೆ, ಡಿವೈಎಸ್ಪಿ ವೆಂಕಟೇಶ ಉಗಿಬಂಡಿ, ಶಹಾಪುರ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಚೆನ್ನಯ್ಯ ಸಿ.ಹೀರೇಮಠ ಭೇಟಿ ನೀಡಿ ಪರಿಶೀಲಿಸಿದರು.