<p>ಸುರಪುರ: ‘ಶಿಕ್ಷಣಕ್ಕಾಗಿ ನೀಡುವ ದಾನ ಸರ್ವಶ್ರೇಷ್ಠ. ಉಳ್ಳವರು ತಮ್ಮ ಗಳಿಕೆಯ ಅಲ್ಪ ಹಣವನ್ನಾದರೂ ವಿದ್ಯೆಗೆ ದೇಣಿಗೆ ನೀಡಬೇಕು. ಅದರಿಂದ ಸಿಗುವ ಸಂತೃಪ್ತಿಗೆ ಮಿತಿಯಿಲ್ಲ’ ಎಂದು ದಾನಿ ಡಾ.ಸತ್ಯನಾರಾಯಣ ಅಲದರ್ತಿ ಹೇಳಿದರು.</p>.<p>ತಾಲ್ಲೂಕಿನ ದೇವಿಕೇರಿ ಗ್ರಾಮದಲ್ಲಿ ಭಾನುವಾರ ಗ್ರಾಮಸ್ಥರು ನೀಡಿದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.</p>.<p>‘ಈ ಶಾಲೆಯ ಮಕ್ಕಳು ಚೆನ್ನಾಗಿ ಅಭ್ಯಸಿಸಿ ಐಎಎಸ್, ಎಂಜಿನಿಯರ್, ವೈದ್ಯರಾಗಬೇಕು. ಅದುವೇ ನೀವು ನನಗೆ ನೀಡುವ ಉಡುಗೊರೆ. ದೇವರು ನಿಮಗೆ ಉಜ್ವಲ ಭವಿಷ್ಯ ನೀಡಲಿ’ ಎಂದು ಹಾರೈಸಿದರು.</p>.<p>ವಕೀಲ ಹಣಮಂತ ಗೋಗಿ ಮಾತನಾಡಿ, ‘ವೈದ್ಯರಾಗಿ ಅಮೋಘ ಸೇವೆ ಸಲ್ಲಿಸಿರುವ ಡಾ.ಸತ್ಯನಾರಾಯಣ ಅಲದರ್ತಿ ತಮ್ಮ ಬೆಲೆ ಬಾಳುವ 1 ಎಕರೆ 8 ಗುಂಟೆ ಜಮೀನನ್ನು ಶಾಲೆಗೆ ದೇಣಿಗೆ ನೀಡುವ ಮೂಲಕ ಮೇಲ್ಪಂಕ್ತಿ ಹಾಕಿದ್ದಾರೆ. ಗ್ರಾಮ ಅವರ ಹೆಸರನ್ನು ಚಿರಸ್ಥಾಯಿಯಾಗಿ ಸ್ಮರಿಸುತ್ತದೆ’ ಎಂದರು.</p>.<p>ಸತ್ಯನಾರಾಯಣ ದಂಪತಿಯನ್ನು ಅದ್ಧೂರಿಯಾಗಿ ಬರಮಾಡಿಕೊಂಡ ಗ್ರಾಮಸ್ಥರು 100 ಗ್ರಾಂ ಚಿನ್ನವನ್ನು ನೀಡಿ ಸನ್ಮಾನಿಸಿದರು.</p>.<p>ಶಾಂತಮೂರ್ತಿ ಹಿರೇಮಠ ಸಾನ್ನಿಧ್ಯ ವಹಿಸಿದ್ದರು. ಮಲ್ಕಪ್ಪ ಯಾದವ ನಿರೂಪಿಸಿದರು. ರಾಜು ಅಜ್ಜಕೊಲ್ಲಿ ವಂದಿಸಿದರು.</p>.<p>ಗ್ರಾಮದ ಮುಖಂಡರಾದ ಸಾಹೇಬಗೌಡ ಮಾಲಿಪಾಟೀಲ, ತಿಮ್ಮಣ್ಣ ಪುಜಾರಿ, ನಾಗಪ್ಪ ಪತ್ತಾರ, ತಿಮ್ಮಣ್ಣ ಆಡಿನ್, ಸಾಯಬಣ್ಣ ದೊರೆ, ಹಣಮಂತ ರಸ್ತಾಪುರ, ಮಹಾದೇವ ಗಡ್ಡದರ ನಾಗರಾಜ ಸಜ್ಜನ, ದ್ಯಾವಪ್ಪ ವೈ., ಹಣಮಂತ ತಳವಾರ, ಯಂಕಪ್ಪ ಹೊಸಮನಿ, ಹಣಮಂತ ಬಿಲ್ಲವ, ಅಮರೇಶ ಸಾಲಕ್ಕಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸುರಪುರ: ‘ಶಿಕ್ಷಣಕ್ಕಾಗಿ ನೀಡುವ ದಾನ ಸರ್ವಶ್ರೇಷ್ಠ. ಉಳ್ಳವರು ತಮ್ಮ ಗಳಿಕೆಯ ಅಲ್ಪ ಹಣವನ್ನಾದರೂ ವಿದ್ಯೆಗೆ ದೇಣಿಗೆ ನೀಡಬೇಕು. ಅದರಿಂದ ಸಿಗುವ ಸಂತೃಪ್ತಿಗೆ ಮಿತಿಯಿಲ್ಲ’ ಎಂದು ದಾನಿ ಡಾ.ಸತ್ಯನಾರಾಯಣ ಅಲದರ್ತಿ ಹೇಳಿದರು.</p>.<p>ತಾಲ್ಲೂಕಿನ ದೇವಿಕೇರಿ ಗ್ರಾಮದಲ್ಲಿ ಭಾನುವಾರ ಗ್ರಾಮಸ್ಥರು ನೀಡಿದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.</p>.<p>‘ಈ ಶಾಲೆಯ ಮಕ್ಕಳು ಚೆನ್ನಾಗಿ ಅಭ್ಯಸಿಸಿ ಐಎಎಸ್, ಎಂಜಿನಿಯರ್, ವೈದ್ಯರಾಗಬೇಕು. ಅದುವೇ ನೀವು ನನಗೆ ನೀಡುವ ಉಡುಗೊರೆ. ದೇವರು ನಿಮಗೆ ಉಜ್ವಲ ಭವಿಷ್ಯ ನೀಡಲಿ’ ಎಂದು ಹಾರೈಸಿದರು.</p>.<p>ವಕೀಲ ಹಣಮಂತ ಗೋಗಿ ಮಾತನಾಡಿ, ‘ವೈದ್ಯರಾಗಿ ಅಮೋಘ ಸೇವೆ ಸಲ್ಲಿಸಿರುವ ಡಾ.ಸತ್ಯನಾರಾಯಣ ಅಲದರ್ತಿ ತಮ್ಮ ಬೆಲೆ ಬಾಳುವ 1 ಎಕರೆ 8 ಗುಂಟೆ ಜಮೀನನ್ನು ಶಾಲೆಗೆ ದೇಣಿಗೆ ನೀಡುವ ಮೂಲಕ ಮೇಲ್ಪಂಕ್ತಿ ಹಾಕಿದ್ದಾರೆ. ಗ್ರಾಮ ಅವರ ಹೆಸರನ್ನು ಚಿರಸ್ಥಾಯಿಯಾಗಿ ಸ್ಮರಿಸುತ್ತದೆ’ ಎಂದರು.</p>.<p>ಸತ್ಯನಾರಾಯಣ ದಂಪತಿಯನ್ನು ಅದ್ಧೂರಿಯಾಗಿ ಬರಮಾಡಿಕೊಂಡ ಗ್ರಾಮಸ್ಥರು 100 ಗ್ರಾಂ ಚಿನ್ನವನ್ನು ನೀಡಿ ಸನ್ಮಾನಿಸಿದರು.</p>.<p>ಶಾಂತಮೂರ್ತಿ ಹಿರೇಮಠ ಸಾನ್ನಿಧ್ಯ ವಹಿಸಿದ್ದರು. ಮಲ್ಕಪ್ಪ ಯಾದವ ನಿರೂಪಿಸಿದರು. ರಾಜು ಅಜ್ಜಕೊಲ್ಲಿ ವಂದಿಸಿದರು.</p>.<p>ಗ್ರಾಮದ ಮುಖಂಡರಾದ ಸಾಹೇಬಗೌಡ ಮಾಲಿಪಾಟೀಲ, ತಿಮ್ಮಣ್ಣ ಪುಜಾರಿ, ನಾಗಪ್ಪ ಪತ್ತಾರ, ತಿಮ್ಮಣ್ಣ ಆಡಿನ್, ಸಾಯಬಣ್ಣ ದೊರೆ, ಹಣಮಂತ ರಸ್ತಾಪುರ, ಮಹಾದೇವ ಗಡ್ಡದರ ನಾಗರಾಜ ಸಜ್ಜನ, ದ್ಯಾವಪ್ಪ ವೈ., ಹಣಮಂತ ತಳವಾರ, ಯಂಕಪ್ಪ ಹೊಸಮನಿ, ಹಣಮಂತ ಬಿಲ್ಲವ, ಅಮರೇಶ ಸಾಲಕ್ಕಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>