<p><strong>ಸುರಪುರ:</strong> ‘ಯಾವುದೇ ಪ್ರದೇಶ ಅಭಿವೃದ್ಧಿಯಾಗಬೇಕಾದರೆ ಅಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರ ಪ್ರಬಲವಾಗಿರಬೇಕು’ ಎಂದು ಶಾಸಕ ರಾಜಾ ವೇಣುಗೋಪಾಲನಾಯಕ ಹೇಳಿದರು.</p>.<p>ನಗರದಲ್ಲಿ ಆದಿನಾರಾಯಣೇ ಮಹಾಲಕ್ಷ್ಮೀ ಮಾತೆ ಶಿಕ್ಷಣ ಪ್ರತಿಷ್ಠಾನ ಟ್ರಸ್ಟ್ ಅಡಿಯಲ್ಲಿ ನಡೆಯುತ್ತಿರುವ ಸುರಪುರ ಪ್ಯಾರಾ ಮೆಡಿಕಲ್ ಕಾಲೇಜಿನ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಈ ನಿಟ್ಟಿನಲ್ಲಿ ನಾನು ಈ ಎರಡು ಕ್ಷೇತ್ರಗಳ ಉನ್ನತಿಗೆ ಶ್ರಮಿಸುತ್ತೇನೆ. ಈ ಪ್ಯಾರಾ ಮೆಡಿಕಲ್ ಕಾಲೇಜು ಕಳೆದ ಕೆಲವು ವರ್ಷಗಳ ಹಿಂದೆ ಸ್ಥಾಪಿತವಾಗಿ ಕಡಿಮೆ ಫೀ ನಲ್ಲಿ ಉತ್ತಮ ಶಿಕ್ಷಣ ನೀಡುತ್ತಿರುವುದು ಗಮನಕ್ಕೆ ಬಂದಿದೆ. ಈ ಕಾರ್ಯ ಶ್ಲಾಘನೀಯ’ ಎಂದರು.</p>.<p>‘ಈ ಸಂಸ್ಥೆಯಲ್ಲಿ ಅಭ್ಯಸಿಸಿದ ಕೆಲವು ವಿದ್ಯಾರ್ಥಿಗಳಿಗೆ ಸರ್ಕಾರಿ ನೌಕರಿ ದೊರಕಿರುವುದು ಸಂತಸ. ಹಲವಾರು ವಿದ್ಯಾರ್ಥಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ನೌಕರಿ ಸಿಕ್ಕಿದೆ. ಪ್ಯಾರಾ ಮೆಡಿಕಲ್ ಕೋರ್ಸ್ ಅಭ್ಯಸಿಸಿದ ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯ ಇದೆ’ ಎಂದರು.</p>.<p>ಕೂಡ್ಲಿಗಿಯ ಗಜಾನನ ಬಾಬಾ ಮಹಾರಾಜ ಸಾನ್ನಿಧ್ಯ ವಹಿಸಿದ್ದರು. ಉದ್ಯಮಿ ಗ್ಯಾನ್ಚಂದ ಜೈನ್, ಕಾಂಗ್ರೆಸ್ ಮುಖಂಡ ರಾಜಾ ವಾಸುದೇವನಾಯಕ, ಜಿಲ್ಲಾ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ರಾಜಾ ಕುಮಾರನಾಯಕ, ನಿವೃತ್ತ ವೈದ್ಯಾಧಿಕಾರಿ ವಿ.ಎಲ್. ಚೌಧರಿ ವೇದಿಕೆಯಲ್ಲಿದ್ದರು.</p>.<p>ಸಂಸ್ಥೆಯ ಅಧ್ಯಕ್ಷ ಕೃಷ್ಣ ದರಬಾರಿ ಅಧ್ಯಕ್ಷತೆ ವಹಿಸಿದ್ದರು. ಶಿವಕುಮಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಂ.ಕೆ. ಬಾಬು ನಿರೂಪಿಸಿದರು. ರಜಾಕ ಭಾಗವಾನ ವಂದಿಸಿದರು.</p>.<p>ಕಾಲೇಜಿನ ಪ್ರಾಚಾರ್ಯ ಅಯ್ಯಪ್ಪ, ವೆಂಕಟೇಶ ದರಬಾರಿ, ಜಿತೇಂದ್ರನಾಯಕ, ತಿರುಪತಿ ಶೆಟ್ಟಿ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಪುರ:</strong> ‘ಯಾವುದೇ ಪ್ರದೇಶ ಅಭಿವೃದ್ಧಿಯಾಗಬೇಕಾದರೆ ಅಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರ ಪ್ರಬಲವಾಗಿರಬೇಕು’ ಎಂದು ಶಾಸಕ ರಾಜಾ ವೇಣುಗೋಪಾಲನಾಯಕ ಹೇಳಿದರು.</p>.<p>ನಗರದಲ್ಲಿ ಆದಿನಾರಾಯಣೇ ಮಹಾಲಕ್ಷ್ಮೀ ಮಾತೆ ಶಿಕ್ಷಣ ಪ್ರತಿಷ್ಠಾನ ಟ್ರಸ್ಟ್ ಅಡಿಯಲ್ಲಿ ನಡೆಯುತ್ತಿರುವ ಸುರಪುರ ಪ್ಯಾರಾ ಮೆಡಿಕಲ್ ಕಾಲೇಜಿನ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಈ ನಿಟ್ಟಿನಲ್ಲಿ ನಾನು ಈ ಎರಡು ಕ್ಷೇತ್ರಗಳ ಉನ್ನತಿಗೆ ಶ್ರಮಿಸುತ್ತೇನೆ. ಈ ಪ್ಯಾರಾ ಮೆಡಿಕಲ್ ಕಾಲೇಜು ಕಳೆದ ಕೆಲವು ವರ್ಷಗಳ ಹಿಂದೆ ಸ್ಥಾಪಿತವಾಗಿ ಕಡಿಮೆ ಫೀ ನಲ್ಲಿ ಉತ್ತಮ ಶಿಕ್ಷಣ ನೀಡುತ್ತಿರುವುದು ಗಮನಕ್ಕೆ ಬಂದಿದೆ. ಈ ಕಾರ್ಯ ಶ್ಲಾಘನೀಯ’ ಎಂದರು.</p>.<p>‘ಈ ಸಂಸ್ಥೆಯಲ್ಲಿ ಅಭ್ಯಸಿಸಿದ ಕೆಲವು ವಿದ್ಯಾರ್ಥಿಗಳಿಗೆ ಸರ್ಕಾರಿ ನೌಕರಿ ದೊರಕಿರುವುದು ಸಂತಸ. ಹಲವಾರು ವಿದ್ಯಾರ್ಥಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ನೌಕರಿ ಸಿಕ್ಕಿದೆ. ಪ್ಯಾರಾ ಮೆಡಿಕಲ್ ಕೋರ್ಸ್ ಅಭ್ಯಸಿಸಿದ ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯ ಇದೆ’ ಎಂದರು.</p>.<p>ಕೂಡ್ಲಿಗಿಯ ಗಜಾನನ ಬಾಬಾ ಮಹಾರಾಜ ಸಾನ್ನಿಧ್ಯ ವಹಿಸಿದ್ದರು. ಉದ್ಯಮಿ ಗ್ಯಾನ್ಚಂದ ಜೈನ್, ಕಾಂಗ್ರೆಸ್ ಮುಖಂಡ ರಾಜಾ ವಾಸುದೇವನಾಯಕ, ಜಿಲ್ಲಾ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ರಾಜಾ ಕುಮಾರನಾಯಕ, ನಿವೃತ್ತ ವೈದ್ಯಾಧಿಕಾರಿ ವಿ.ಎಲ್. ಚೌಧರಿ ವೇದಿಕೆಯಲ್ಲಿದ್ದರು.</p>.<p>ಸಂಸ್ಥೆಯ ಅಧ್ಯಕ್ಷ ಕೃಷ್ಣ ದರಬಾರಿ ಅಧ್ಯಕ್ಷತೆ ವಹಿಸಿದ್ದರು. ಶಿವಕುಮಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಂ.ಕೆ. ಬಾಬು ನಿರೂಪಿಸಿದರು. ರಜಾಕ ಭಾಗವಾನ ವಂದಿಸಿದರು.</p>.<p>ಕಾಲೇಜಿನ ಪ್ರಾಚಾರ್ಯ ಅಯ್ಯಪ್ಪ, ವೆಂಕಟೇಶ ದರಬಾರಿ, ಜಿತೇಂದ್ರನಾಯಕ, ತಿರುಪತಿ ಶೆಟ್ಟಿ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>