<p><strong>ಸುರಪುರ</strong>: ‘ಕಾಯಕ ಶರಣರು ತಮ್ಮ ಕಾಯಕದಿಂದ ಗುರುತಿಸಿ ಕೊಂಡುವರು. ಅವರ ನಡೆ-ನುಡಿ ಒಂದಾಗಿದ್ದವು. ಜಾತಿ, ಮತ, ಪಂಥ, ಮೇಲು-ಕೀಳು ಎನ್ನದೆ ಕಾಯಕ ಮಾಡಿದವರು’ ಎಂದು ತಹಶೀಲ್ದಾರ್ ಎಚ್.ಎ. ಸರಕಾವಸ ಹಳಿದರು.</p>.<p>ತಹಶೀಲ್ದಾರ್ ಕಚೇರಿಯಲ್ಲಿ ತಾಲ್ಲೂಕಾಡಳಿತ ಮಂಗಳವಾರ ಹಮ್ಮಿಕೊಂಡಿದ್ದ ಕಾಯಕ ಶರಣರ ಜಯಂತ್ಯುಂತ್ಸವದಲ್ಲಿ ಅವರು ಮಾತನಾಡಿದರು.</p>.<p>‘ಕಾಯಕ ಶರಣರಾದ ಮಾದರ ಚೆನ್ನಯ್ಯ, ಮಾದರ ಧೂಳಯ್ಯ, ಡೋಹರ ಕಕ್ಕಯ್ಯ, ಉರಿಲಿಂಗ ಪೆದ್ದಿ ಹಾಗೂ ಸಮಗಾರ ಹರಳಯ್ಯ ನಮಗೆಲ್ಲ ಆದರ್ಶ’ ಎಂದರು.</p>.<p>ದಲಿತ ಮುಖಂಡ ಹಣಮಂತ ಬೊಮ್ಮನಳ್ಳಿ ಉಪನ್ಯಾಸ ನೀಡಿ, ‘ಕಾಯಕ ಶರಣರು ಸಮಾಜದಲ್ಲಿ ಬೇರೂರಿದ್ದ ಕಂದಾಚಾರ, ಮೂಢನಂಬಿಕೆ ಇನ್ನಿತರ ಸಾಮಾಜಿಕ ಮೌಢ್ಯಗಳನ್ನು ತೊಲಗಿಸಲು ಶ್ರಮಿಸಿದರು. ಸಾಮಾಜಿಕ ನ್ಯಾಯದ ತಳಹದಿಯಲ್ಲಿ ಜಾತ್ಯತೀತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದರು’ ಎಂದರು.</p>.<p>ವಕೀಲ ಯಲ್ಲಪ್ಪ ಹುಲಿಕಲ್ ಮಾತನಾಡಿ, ‘ಕಾಯಕ ಶರಣರು ತಮ್ಮ ವಚನಗಳಲ್ಲಿ ಕಾಯಕ ನಿಷ್ಠೆ, ಮಾನವೀಯ ಮೌಲ್ಯಗಳು, ಒಳ್ಳೆಯ ಆಚಾರ, ವಿಚಾರಗಳನ್ನು ಮಾನವ ಜನಾಂಗಕ್ಕೆ ನೀಡಿದ್ದಾರೆ’ ಎಂದರು. </p>.<p>ನಗರಸಭೆ ನಾಮ ನಿರ್ದೇಶಿತ ಸದಸ್ಯ ಪ್ರಕಾಶ್ ಅಲಬನೂರ್ ಮಾತನಾಡಿ ಮಾತನಾಡಿದರು. </p>.<p>ಮುಖಂಡರಾದ ದಾನಪ್ಪ ಕಡಿಮನಿ ಲಕ್ಷ್ಮೀಪುರ, ಭೀಮಣ್ಣ ಬಿಲ್ಲವ್, ನಿಂಗಣ್ಣ ದಿವಳಗುಡ್ಡ, ಬಸವರಾಜ ಮುಷ್ಟಳ್ಳಿ (ಡಿಸಿ), ಚಂದ್ರು ದಿವಳಗುಡ್ಡ, ಸೋಮು, ಮಹೇಶ್ ಜಾಲಿಬೆಂಚಿ, ಮರೆಪ್ಪ ದೇವಾಪುರ ಭಾಗವಹಿಸಿದ್ದರು. ಶಿಕ್ಷಕ ಮಹಾದೇವಪ್ಪ ಗುತ್ತೇದಾರ್ ನಿರೂಪಿಸಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಪುರ</strong>: ‘ಕಾಯಕ ಶರಣರು ತಮ್ಮ ಕಾಯಕದಿಂದ ಗುರುತಿಸಿ ಕೊಂಡುವರು. ಅವರ ನಡೆ-ನುಡಿ ಒಂದಾಗಿದ್ದವು. ಜಾತಿ, ಮತ, ಪಂಥ, ಮೇಲು-ಕೀಳು ಎನ್ನದೆ ಕಾಯಕ ಮಾಡಿದವರು’ ಎಂದು ತಹಶೀಲ್ದಾರ್ ಎಚ್.ಎ. ಸರಕಾವಸ ಹಳಿದರು.</p>.<p>ತಹಶೀಲ್ದಾರ್ ಕಚೇರಿಯಲ್ಲಿ ತಾಲ್ಲೂಕಾಡಳಿತ ಮಂಗಳವಾರ ಹಮ್ಮಿಕೊಂಡಿದ್ದ ಕಾಯಕ ಶರಣರ ಜಯಂತ್ಯುಂತ್ಸವದಲ್ಲಿ ಅವರು ಮಾತನಾಡಿದರು.</p>.<p>‘ಕಾಯಕ ಶರಣರಾದ ಮಾದರ ಚೆನ್ನಯ್ಯ, ಮಾದರ ಧೂಳಯ್ಯ, ಡೋಹರ ಕಕ್ಕಯ್ಯ, ಉರಿಲಿಂಗ ಪೆದ್ದಿ ಹಾಗೂ ಸಮಗಾರ ಹರಳಯ್ಯ ನಮಗೆಲ್ಲ ಆದರ್ಶ’ ಎಂದರು.</p>.<p>ದಲಿತ ಮುಖಂಡ ಹಣಮಂತ ಬೊಮ್ಮನಳ್ಳಿ ಉಪನ್ಯಾಸ ನೀಡಿ, ‘ಕಾಯಕ ಶರಣರು ಸಮಾಜದಲ್ಲಿ ಬೇರೂರಿದ್ದ ಕಂದಾಚಾರ, ಮೂಢನಂಬಿಕೆ ಇನ್ನಿತರ ಸಾಮಾಜಿಕ ಮೌಢ್ಯಗಳನ್ನು ತೊಲಗಿಸಲು ಶ್ರಮಿಸಿದರು. ಸಾಮಾಜಿಕ ನ್ಯಾಯದ ತಳಹದಿಯಲ್ಲಿ ಜಾತ್ಯತೀತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದರು’ ಎಂದರು.</p>.<p>ವಕೀಲ ಯಲ್ಲಪ್ಪ ಹುಲಿಕಲ್ ಮಾತನಾಡಿ, ‘ಕಾಯಕ ಶರಣರು ತಮ್ಮ ವಚನಗಳಲ್ಲಿ ಕಾಯಕ ನಿಷ್ಠೆ, ಮಾನವೀಯ ಮೌಲ್ಯಗಳು, ಒಳ್ಳೆಯ ಆಚಾರ, ವಿಚಾರಗಳನ್ನು ಮಾನವ ಜನಾಂಗಕ್ಕೆ ನೀಡಿದ್ದಾರೆ’ ಎಂದರು. </p>.<p>ನಗರಸಭೆ ನಾಮ ನಿರ್ದೇಶಿತ ಸದಸ್ಯ ಪ್ರಕಾಶ್ ಅಲಬನೂರ್ ಮಾತನಾಡಿ ಮಾತನಾಡಿದರು. </p>.<p>ಮುಖಂಡರಾದ ದಾನಪ್ಪ ಕಡಿಮನಿ ಲಕ್ಷ್ಮೀಪುರ, ಭೀಮಣ್ಣ ಬಿಲ್ಲವ್, ನಿಂಗಣ್ಣ ದಿವಳಗುಡ್ಡ, ಬಸವರಾಜ ಮುಷ್ಟಳ್ಳಿ (ಡಿಸಿ), ಚಂದ್ರು ದಿವಳಗುಡ್ಡ, ಸೋಮು, ಮಹೇಶ್ ಜಾಲಿಬೆಂಚಿ, ಮರೆಪ್ಪ ದೇವಾಪುರ ಭಾಗವಹಿಸಿದ್ದರು. ಶಿಕ್ಷಕ ಮಹಾದೇವಪ್ಪ ಗುತ್ತೇದಾರ್ ನಿರೂಪಿಸಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>